ಶಾಸಕ ಉದಯ್ ಹುಟ್ಟುಹಬ್ಬ: ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ

| Published : Jun 02 2025, 12:22 AM IST

ಸಾರಾಂಶ

ಮದ್ದೂರು ಕ್ಷೇತ್ರದ ಅಭಿವೃದ್ಧಿ ಹರಿಕಾರ ಜನಪ್ರಿಯ ಶಾಸಕ ಉದಯ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಯೋಜನೆಗಳ ಅನುಷ್ಠಾನ ಪರ್ವವನ್ನು ನಡೆಸಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಂಕಣ ತೊಟ್ಟಿ ಕಾರ್ಯನಿರತರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಶಾಸಕ ಕೆ.ಎಂ.ಉದಯ್ ಹುಟ್ಟುಹಬ್ಬದ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲ ವಿತರಿಸಲಾಯಿತು.

ಭಾರತಿನಗರ ಬ್ಲಾಕ್ ಕಾಂಗ್ರೆಸ್‌ನಿಂದ ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಶಾಸಕ ಉದಯ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು, ಬಾದಾಮಿ ಹಾಲನ್ನು ವಿತರಿಸಲಾಯಿತು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್ ಮಾತನಾಡಿ, ಮದ್ದೂರು ಕ್ಷೇತ್ರದ ಅಭಿವೃದ್ಧಿ ಹರಿಕಾರ ಜನಪ್ರಿಯ ಶಾಸಕ ಉದಯ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಯೋಜನೆಗಳ ಅನುಷ್ಠಾನ ಪರ್ವವನ್ನು ನಡೆಸಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಂಕಣ ತೊಟ್ಟಿ ಕಾರ್ಯನಿರತರಾಗಿದ್ದಾರೆ ಎಂದರು.

ಶಾಸಕ ಉದಯ್ ಹುಟ್ಟುಹಬ್ಬದ ಅಂಗವಾಗಿ ಜೂ.8ರಂದು ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಉದಯ್ ರವರ ಉಪಸ್ಥಿತಿಯಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಹಾಗೂ ಕನ್ನಡ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಸಂಗೀತ ರಸ ಸಂಜೆ ಆಯೋಜಿಸಲಾಗಿದೆ ಎಂದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು ಮಾತನಾಡಿ, ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಪರ್ವ ಆರಂಭಿಸಿರುವ ಶಾಸಕ ಉದಯ್ ಅವರಿಗೆ ದೇವರು ಸಕಲ ಆಯುಸ್ಸು ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದರು.

ಇದಕ್ಕೂ ಮೊದಲು ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಉದಯ್ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ವೇಳೆ ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಸದಸ್ಯೆ ಸರ್ವಮಂಗಳ ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಭಾರತಿನಗರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಮುಖಂಡರಾದ ಕದಲೂರು ರವಿ, ಮಮತಾ ಶಂಕರೇಗೌಡ, ಕದಲೂರು ತಿಮ್ಮೇಗೌಡ, ಪುಟ್ಟರಾಮು, ಪೂಜಾರಿ ಮಹೇಶ್, ಕರಡಕೆರೆ ಮನು, ಅಮೀನ್ ಶಿವಲಿಂಗಯ್ಯ, ಚಿದಂಬರ ಮೂರ್ತಿ, ಟಿ ಬಿ ಹಳ್ಳಿ ಅಭಿ?ಕ, ಅಣ್ಣೂರು ಮನೋಹರ್ ,ಕಾರ್ಕಳ್ಳಿ ಸಚ್ಚಿನ್, ಯಡಗನಹಳ್ಳಿ ರವಿ, ಮುಡಿನಹಳ್ಳಿ ತಿಮ್ಮಯ್ಯ, ವೀರೇಂದ್ರ, ರಾಜಣ್ಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.