ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಶನಿವಾರ ಭೂಮಿಪೂಜೆ ನೆರವೇರಿಸಿದರು. ನಗರ ಮತಕ್ಷೇತ್ರದ ವ್ಯಾಪ್ತಿಯ ಖಂಡಸಾರಿ ತಾಂಡಾದಲ್ಲಿ 1 ಕೋಟಿ ರೂ. ಅನುದಾನದಲ್ಲಿ ತಾಂಡಾದ ಮುಖ್ಯ ರಸ್ತೆ ಮತ್ತು ಆಂತರಿಕ ಸಿಸಿ ರಸ್ತೆ ಅಭಿವೃದ್ಧಿಪಡಿಸುವುದು ಹಾಗೂ 5 ಲಕ್ಷ ರೂ. ಅನುದಾನದಲ್ಲಿ ಸೇವಾಲಾಲ್ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಶನಿವಾರ ಭೂಮಿಪೂಜೆ ನೆರವೇರಿಸಿದರು.

ನಗರ ಮತಕ್ಷೇತ್ರದ ವ್ಯಾಪ್ತಿಯ ಖಂಡಸಾರಿ ತಾಂಡಾದಲ್ಲಿ 1 ಕೋಟಿ ರೂ. ಅನುದಾನದಲ್ಲಿ ತಾಂಡಾದ ಮುಖ್ಯ ರಸ್ತೆ ಮತ್ತು ಆಂತರಿಕ ಸಿಸಿ ರಸ್ತೆ ಅಭಿವೃದ್ಧಿಪಡಿಸುವುದು ಹಾಗೂ 5 ಲಕ್ಷ ರೂ. ಅನುದಾನದಲ್ಲಿ ಸೇವಾಲಾಲ್ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಇದೇ ವೇಳೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ ಅಳವಡಿಸಿದ್ದ ಹೈಮಾಸ್ಟ್ ದೀಪ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಇದಕ್ಕೂ ಮೊದಲು ವಾರ್ಡ್ ನಂ.1ರಲ್ಲಿ ಬರುವ ಶಕ್ತಿನಗರ ರವೀಂದ್ರನಾಥ ಟ್ಯಾಗೋರ್‌ ಶಾಲೆ ಎದುರು ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 2025-26ನೇ ಸಾಲಿನ 25 ಲಕ್ಷ ರೂ. ಅನುದಾನದಲ್ಲಿ ಶಕ್ತಿ ನಗರ ಶಿವಶಿಂಪಿ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.