ಸಾರಾಂಶ
ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗ ಸಮಿತಿ ರಚಿಸಲಾಗಿದೆ. ಸರ್ಕಾರದಿಂದ 98 ಕೋಟಿ ಹಣವನ್ನು ಕಾವೇರಿ ಆರತಿ ಮಾಡುವ ಸಲುವಾಗಿ ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಅನುದಾನ ಮೀಸಲಿಡಲಾಗಿದೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಕೆಆರ್ಎಸ್ ಜಲಾಶಯದ ಬಳಿ ಸರ್ಕಾರದಿಂದ ನಡೆಸಲಿರುವ ಕಾವೇರಿ ಆರತಿ ಸಂಬಂಧ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.ನಂತರ ಕೆಆರ್ಎಸ್ ಬೃಂದಾವನದ ಸುತ್ತಲೂ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು. ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗ ಸಮಿತಿ ರಚಿಸಲಾಗಿದೆ ಎಂದರು.
ಸರ್ಕಾರದಿಂದ 98 ಕೋಟಿ ಹಣವನ್ನು ಕಾವೇರಿ ಆರತಿ ಮಾಡುವ ಸಲುವಾಗಿ ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಅನುದಾನ ಮೀಸಲಿಡಲಾಗಿದೆ. ಈ ಭಾಗದ ಪವಿತ್ರ ನದಿ ಜೀವನಾಡಿಯಾಗಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಸಲುವಾಗಿ ಅನೇಕ ಸಲಹೆಯನ್ನು ಅಧಿಕಾರಿಗಳಿಂದ ಪಡೆದು ಬೃಂದಾವನದ ಬಳಿ ಕಾವೇರಿ ಆರತಿಗೆ ಸ್ಥಳವನ್ನು ಪರಿಸಲೀಸಲಾಗಿದೆ ಎಂದರು.ಈ ವೇಳೆ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಆರ್ ಎಸ್ ಅಣೆಕಟ್ಟೆಗೆ ಒಳ ಹರಿವು ಹೆಚ್ಚಳಮಂಡ್ಯ:
ಕೊಡಗು, ಭಾಗಮಂಡಲ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ.ಅಣೆಕಟ್ಟೆಗೆ 2053 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಒಂದೇ ದಿನ ಒಂದೂವರೆ ಸಾವಿರ ಕ್ಯುಸೆಕ್ ನೀರು ಹೆಚ್ಚಾಗಿದೆ. ನಾಳೆಯಿಂದ ಮತ್ತಷ್ಟು ನೀರು ಹೆಚ್ಚಾಗುವ ಸಾಧ್ಯತೆ ಇದೆ. ಬಹುಬೇಗ ಮುಂಗಾರು ಮಳೆ ಆರಂಭವಾಗಿರುವುದರಿಂದ ಹೆಚ್ಚಿನ ನೀರು ಹರಿದು ಬರುವುದರಿಂದ ಈ ವರ್ಷ ಬಹುಬೇಗ ಜಲಾಶಯ ತುಂಬವ ನಿರೀಕ್ಷೆ ಇದೆ.
ಅಣೆಕಟ್ಟೆಯಲ್ಲಿ ಸೋಮವಾರ 89.35 ಅಡಿ ನೀರಿದ್ದು, 2053 ಕ್ಯುಸೆಕ್ ಹರಿದು ಬರುತ್ತಿದೆ. ಜಲಾಶಯದಿಂದ 347 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.ಕೆಆರ್ ಎಸ್ ನೀರಿನ ಮಟ್ಟಗರಿಷ್ಠ ಮಟ್ಟ - 124.80 ಅಡಿ
ಇಂದಿನ ಮಟ್ಟ – 89.35 ಅಡಿಒಳ ಹರಿವು – 2053 ಕ್ಯುಸೆಕ್
ಹೊರ ಹರಿವು – 347 ಕ್ಯುಸೆಕ್ನೀರಿನ ಸಂಗ್ರಹ – 15.555 ಟಿಎಂಸಿ