ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ಪಿ‌ಎಚ್. ಡಿ. ಪಡೆದಿದ್ದಾರೆ. ಉತ್ತರ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಕಾಂಗ್ರೆಸ್ಸಿನಿಂದ, ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ಪಿ‌ಎಚ್. ಡಿ. ಪಡೆದಿದ್ದಾರೆ. ಉತ್ತರ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಕಾಂಗ್ರೆಸ್ಸಿನಿಂದ, ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ ಮಾಡಿದ್ದು ಬಿಜೆಪಿ ಎಂಬ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದವರು ಕೇಸ್ ಹಾಕಿದ್ರು, ನಾವು ಕಳೆದ ಬಾರಿ ಅಸೆಂಬ್ಲಿಯಲ್ಲಿ ಗಲಾಟೆ ಮಾಡಿದ ಮೇಲೆ ಇವರು ಕೇಸ್ ಹಾಕಿದ್ದಾರೆ ಎಂದರು.

ಒಪ್ಪಂದದಂತೆ ಸಿಎಂ ನಡೆದುಕೊಳ್ತಾರೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಆಟ ಹೈಕಮಾಂಡ್ ಆಡಿಸುತ್ತಿದೆ. ಹೈಕಮಾಂಡೇ ಇಬ್ಭಾಗ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಎರಡು ಗುಂಪಾಗಿದೆ. ಹೀಗಾಗಿ ಯಾವುದೇ ನಿರ್ಣಯ ತಗೆದುಕೊಳ್ಳಲು ಆಗುತ್ತಿಲ್ಲ. ಇಬ್ಬರ ನಡುವೆ ಜಗಳ ಹಚ್ಚಿ ಎಲ್ಲಿವರೆಗೂ ಲಾಭ ತಗೊಳೋಕೆ ಆಗುತ್ತದೆಯೋ ತೆಗೆದುಕೊಳ್ಳುತ್ತಾರೆ. ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ತರ ಬಳಕೆ ಮಾಡುತ್ತಾರೆ ಅಷ್ಟೆ ಎಂದು ಹೇಳಿದರು.

ಆರ್‌ಎಸ್‌ಎಸ್ ಮಾದರಿ ಸಂಘ ರಚನೆ ಮಾಡುವುದಾಗಿ ಕಾಂಗ್ರೆಸ್ ಎಂ.ಎಲ್ ಸಿ ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್‌ ಮಾದರಿ ಸಂಘಟನೆ ಮಾಡುತ್ತಾರೆ ಅಂದರೆ ಯಾರು ಬೇಡ ಅಂದರು, ಮಾಡಲಿ ಅದನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.