ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಅತಿಸಾರ ಭೇದಿ ತಡೆಗೆ ಜೂನ್ 16 ರಿಂದ ಜುಲೈ 31ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅತಿಸಾರಭೇದಿ ಮತ್ತು ದಡಾರ್ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇರು ಹುಟ್ಟಿದ ಮಗುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಯಾವುದೇ ಮಕ್ಕಳು ಇದರಿಂದ ಮರಣ ಹೊಂದದಂತೆ ಪರಿಣಾಮಕಾರಿ ಚಿಕಿತ್ಸೆಗೆ ಓಆರ್ಎಸ್ ಮತ್ತು ಝಿಂಕ್ ಮಾತ್ರೆ ವಿತರಣೆಗೆ ಕ್ರಮವಹಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪರಿಣಾಮಕಾರಿ ಚಿಕಿತ್ಸೆಗೆ ಓಆರ್ಎಸ್ ಮತ್ತು ಝಿಂಕ್ ಮಾತ್ರೆ ವಿತರಣೆ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಲಭ್ಯವಿರುವ 83185 ಓಆರ್ಎಸ್ ಮತ್ತು 652380 ಚಿಂಕ್ ಮಾತ್ರೆಗಳನ್ನು ಜಿಲ್ಲೆಯ ಆಯಾ ತಾಲೂಕಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿತರಣೆಗೆ ಕ್ರಮವಹಿಸಬೇಕು. ಇದರ ಜೊತೆಗೆ ಕುಡಿಯುವ ನೀರು ಶುಚಿತ್ವ ಇರಬೇಕು. ಆಹಾರ ಸೇವನೆ ಮುಂಚೆ ಕೈಗಳನ್ನು ಸುಚಿಗೊಳಿಸಿಕೊಳ್ಳುವುದು ಮುಖ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಶಾಲೆ, ಅಂಗನವಾಡಿ ಜನ ಸಮುದಾಯದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದರು.ಈ ಕಾರ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ, ನೀರು ಮತ್ತು ನೈರ್ಮಲ್ಯ, ಎನ್ಜಿಓಗಳು ಪಾಲ್ಗೊಳ್ಳಬೇಕು. ಓ.ಆರ್.ಎಸ್ ಮತ್ತು ಝಿಂಕ್ ಮಾತ್ರೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯಲಿದ್ದು, ಝಿಂಕ್ ಮಾತ್ರೆಗಳನ್ನು 14 ದಿನಗಳವರೆಗೆ ಪ್ರತಿದಿನ 1 ರಂತೆ ನೀಡುವುದರಿಂದ ಶಕ್ತಿ ಹೆಚ್ಚಿಸುತ್ತದೆ. ಎರಡು ತಿಂಗಳವರೆಗೆ ಅತಿಸಾರಭೇದಿಯಿಂದ ಕಾಪಾಡುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೇನ್ನವರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕುಸುಮಾ ಮಾಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೇಖರಯ್ಯ ಮಠ ಸೇರಿದಂತೆ ಆಯಾ ತಾಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿರಿದ್ದರು.ಎಂ.ಆರ್-1 ಮತ್ತು ಎಂ.ಆರ್-2 ಲಸಿಕಾ ವಂಚಿತ ಮಕ್ಕಳನ್ನು ಹುಡುಕಿ, ಅವರಿಗೆ ದಡಾರ್ ಮತ್ತು ರುಬೆಲ್ಲಾ ಲಸಿಕೆ ಹಾಕಲಾಗುತ್ತದೆ. ಜ್ವರ ಮತ್ತು ಗಂಧೆ ಪ್ರಕರಣಗಳು ವರದಿಯಾಗಿದ್ದು, ಎಲ್ಲ ತಾಕೂಕಿನ ಪ್ರಕರಣಗಳ ವರದಿ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 46 ಸಂಶಯಾತ್ಮಕ ಪ್ರಕರಣಗಳಲ್ಲಿ 4 ಪ್ರಕರಣಗಳು ದೃಡಪಟ್ಟಿವೆ. ದೃಡಪಟ್ಟ ಪ್ರದೇಶಗಳಲ್ಲಿ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
- ಮುಕುಂದ ಗಲಗಲಿ ವಿಶ್ವ ಆರೋಗ್ಯ ಸಂಸ್ಥೆಯ ಸರ್ವೆಲೆನ್ಸ್ ಅಧಿಕಾರಿ