ಜನನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ಬೃಹತ್ ಅಭಿಮಾನೋತ್ಸವದಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳು, ಸಂತರು, ಧಾರ್ಮಿಕ ಮುಖಂಡರು, ಕೇಂದ್ರ ಗೃಹ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ಶಿವಮೊಗ್ಗ: ಜನನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ಬೃಹತ್ ಅಭಿಮಾನೋತ್ಸವದಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳು, ಸಂತರು, ಧಾರ್ಮಿಕ ಮುಖಂಡರು, ಕೇಂದ್ರ ಗೃಹ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯರು, ಕರ್ನಾಟಕದ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಶುಕ್ರವಾರ ಅವರ ಮನೆಗೆ ತೆರಳಿ, ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು.