ಶಿವಮೊಗ್ಗ: ಜನನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ಬೃಹತ್ ಅಭಿಮಾನೋತ್ಸವದಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳು, ಸಂತರು, ಧಾರ್ಮಿಕ ಮುಖಂಡರು, ಕೇಂದ್ರ ಗೃಹ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯರು, ಕರ್ನಾಟಕದ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಶುಕ್ರವಾರ ಅವರ ಮನೆಗೆ ತೆರಳಿ, ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು.
ಅಭಿಮಾನೋತ್ಸವಕ್ಕೆ ಕೆ.ಎಸ್.ಈಶ್ವರಪ್ಪರನ್ನು ಆಹ್ವಾನಿಸಿದ ಸಂಸದ ಬಿ.ವೈ. ರಾಘವೇಂದ್ರ
ಜನನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ಬೃಹತ್ ಅಭಿಮಾನೋತ್ಸವದಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳು, ಸಂತರು, ಧಾರ್ಮಿಕ ಮುಖಂಡರು, ಕೇಂದ್ರ ಗೃಹ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.