ಶಿವಮೊಗ್ಗದಲ್ಲಿ ಸ್ಟಾರ್ ಏರ್‌ಲೈನ್ಸ್‌ಗೆ ಸ್ವಾಗತ ಕೋರಿದ ಸಂಸದ ರಾಘವೇಂದ್ರ

| Published : Nov 22 2023, 01:00 AM IST

ಶಿವಮೊಗ್ಗದಲ್ಲಿ ಸ್ಟಾರ್ ಏರ್‌ಲೈನ್ಸ್‌ಗೆ ಸ್ವಾಗತ ಕೋರಿದ ಸಂಸದ ರಾಘವೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಈಗಾಗಲೇ ಶಿವಮೊಗ್ಗ-ಬೆಂಗಳೂರು ನಡುವೆ ಇಂಡಿಗೋ ವಿಮಾನ ಸಂಚರಿಸುತ್ತಿದೆ. ಇದೀಗ ಸ್ಟಾರ್ ಏರ್ ಲೈನ್ಸ್ ವಿಮಾನಗಳು ಶಿವಮೊಗ್ಗದಿಂದ ಗೋವಾ, ಹೈದರಾಬಾದ್, ತಿರುಪತಿಗೆ ಪ್ರತಿ ಮಂಗಳವಾರ, ಬುಧವಾರ, ಗುರುವಾರ ಮತ್ತು ಶನಿವಾರ ಹಾರಾಟ ನಡೆಸಲಿವೆ ಎಂದರು,ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸೋಗಾನೆ ವಿಮಾಣ ನಿಲ್ದಾಣದಿಂದ ವಿಮಾನಗಳ ಹಾರಾಟಗಳ ವ್ಯಾಪ್ತಿ ಹೆಚ್ಚುತ್ತಲಿದ್ದು, ಈಗ ಗೋವಾ, ತಿರುಪತಿ, ಹೈದ್ರಾಬಾದ್‌ಗೆ ಶಿವಮೊಗ್ಗದ ವಿಮಾನ ನಿಲ್ದಾಣದಿಂದ ವಾರದಲ್ಲಿ ನಾಲ್ಕು ದಿನ ವಿಮಾನ ಹಾರಾಟ ನಡೆಸಲಿವೆ.

ಶಿವಮೊಗ್ಗ ವಿಮಾನ ನಿಲ್ದಾಣದ 3 ಹೊಸ ಮಾರ್ಗಗಳಲ್ಲಿ ಸ್ಟಾರ್ ಏರ್‌ಲೈನ್ಸ್‌ನ ವಿಮಾನ ಸಂಚಾರ ಮಂಗಳವಾರದಿಂದ ಅಧಿಕೃತವಾಗಿ ಆರಂಭಗೊಂಡಿತು. 400 ಪ್ರಯಾಣಿಕರು: ಹೈದರಾಬಾದ್‌ನಿಂದ ಆಗಮಿಸಿದ ಮೊದಲ ಸ್ಟಾರ್ ಫ್ಲೈಟ್ ಅನ್ನು ಬರಮಾಡಿಕೊಂಡ ಬಳಿಕ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಮಲೆನಾಡಿನಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್‌ಗೆ ಸಂಚರಿಸುವ ಪ್ರಯಾಣಿಕರಿಗೆ ಸೇವೆ ಒದಗಿಸಲು ಸ್ಟಾರ್ ವಿಮಾನ ಸಂಸ್ಥೆ ಮುಂದಾಗಿದೆ. ಮೊದಲನೇ ದಿನವೇ 400 ಪ್ರಯಾಣಿಕರು ಸಂಚರಿಸುವುದು ವಿಶೇಷವಾಗಿದೆ ಎಂದರು.ವಿಮಾನ ಹಾರಾಟವು ಉಡಾನ್‌ ಯೋಜನೆಯಡಿ ಆರಂಭಿಸಲಾಗಿದ್ದು, ಕೈಗಾರಿಕೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಏರ್ ಪೋರ್ಟ್ ಪೂರಕವಾಗಿದೆ. ಸ್ಪೈಸ್ ಜೆಟ್ ಸೇರಿದಂತೆ ವಿವಿಧ ವಿಮಾನಯಾನ ಸಂಸ್ಥೆಗಳು ಶಿವಮೊಗ್ಗಕ್ಕೆ ಬರಲು ಆಸಕ್ತಿ ವ್ಯಕ್ತಪಡಿಸಿವೆ. ಇನ್ನು ಏರ್ ಪೋರ್ಟ್‌ನಲ್ಲಿ ಇರುವ ಮಂಜಿನ ವಾತಾವರಣ ಮತ್ತು ತಾಂತ್ರಿಕ ದೋಷಗಳ ಕುರಿತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.ಶಿವಮೊಗ್ಗ ಏರ್ ಪೋರ್ಟ್ ಮತ್ತಷ್ಟು ಅಭಿವೃದ್ಧಿ ಹೊಂದಬೇಕೆಂದು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಕೂಡ ಡಿಸೆಂಬರ್ ವೇಳೆಗೆ ಆರಂಭವಾಗಲಿದೆ. ಕಡಿಮೆ ಖರ್ಚಿನಲ್ಲಿ ಸುಂದರ ಏರ್ ಪೋರ್ಟ್ ನಿರ್ಮಿಸಿರುವುದು ಮಲೆನಾಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಈಗಾಗಲೇ ಶಿವಮೊಗ್ಗ-ಬೆಂಗಳೂರು ನಡುವೆ ಇಂಡಿಗೋ ವಿಮಾನ ಸಂಚರಿಸುತ್ತಿದೆ. ಇದೀಗ ಸ್ಟಾರ್ ಏರ್ ಲೈನ್ಸ್ ವಿಮಾನಗಳು ಶಿವಮೊಗ್ಗದಿಂದ ಗೋವಾ, ಹೈದರಾಬಾದ್, ತಿರುಪತಿಗೆ ಪ್ರತಿ ಮಂಗಳವಾರ, ಬುಧವಾರ, ಗುರುವಾರ ಮತ್ತು ಶನಿವಾರ ಹಾರಾಟ ನಡೆಸಲಿವೆ ಎಂದರು,ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭ ಶಾಸಕ ಎಸ್.ಎನ್‌.ಚನ್ನಬಸಪ್ಪ, ವಿಧಾನಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡ, ಡಿ.ಎಸ್‌.ಅರುಣ್‌, ಪಾಲಿಕೆ ಮೇಯರ್‌ ಶಿವಕುಮಾರ್‌ ಸೇರಿದಂತೆ ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.- - -ಬಾಕ್ಸ್‌ವಿಮಾನ ನಿಲ್ದಾಣಕ್ಕೆ ಇನ್ನಷ್ಟು ಅಗತ್ಯ ಸೌಕರ್ಯಗಳನ್ನು ಅಳವಡಿಸುವ ಪ್ರಯತ್ನ ನಡೆದಿದೆ, ಶಿವಮೊಗ್ಗ-ದೆಹಲಿ ಮಾರ್ಗಕ್ಕೆ ಶೀಘ್ರವೇದಲ್ಲಿ ವಿಮಾನ ಸಂಚಾರ ಆರಂಭವಾಗಲಿದೆ. ವಿಮಾನ ನಿಲ್ದಾಣದಲ್ಲಿ ವಿಮಾನಗಳು ಬಂದು ಇಳಿಯುವ ವೇಳೆ ತಾಂತ್ರಿಕ ದೋಷಗಳು ಕಂಡುಬಂದಿದೆ. ಮಂಜು ವಾತಾರಣದಲ್ಲೂ ವಿಮಾನ ಇಳಿಯಲು ಪೂರಕವಾದ ವ್ಯವಸ್ಥೆಯನ್ನು ಶೀಘ್ರವೇ ಕಲ್ಪಿಸಲಾಗುವುದು- ಬಿ.ವೈ.ರಾಘವೇಂದ್ರ, ಸಂಸದ- - -

-21ಎಸ್‌ಎಂಜಿಕೆಪಿ01:ಶಿವಮೊಗ್ಗದ ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸಂಸದ ಬಿ.ವೈ.ರಾಘವೇಂದ್ರ ಅವರು ಹೈದರಾಬಾದ್‌ನಿಂದ ಆಗಮಿಸಿದ ಮೊದಲ ಸ್ಟಾರ್ ಫ್ಲೈಟ್ ಅನ್ನು ಬರಮಾಡಿಕೊಂಡು, ಪ್ರಯಾಣಿಕರಿಗೆ ವೆಲ್‌ಕಂ ಕೋರಿದರು.