ಮುಡಿಪು: ಸಾಮ್ರಾಟ ಕಾದಂಬರಿ ಬಿಡುಗಡೆ

| Published : Mar 07 2025, 11:47 PM IST

ಸಾರಾಂಶ

ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ, ದ್ವಿತೀಯ ಬಿ.ಎ ವಿದ್ಯಾರ್ಥಿ ತ್ವಯ್ಯಿಬ್ ಸುರಿಬೈಲ್ ಬರೆದಿರುವ ‘ಸಾಮ್ರಾಟ’ ಕಾದಂಬರಿ ಬಿಡುಗಡೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಹಾಗೂ ಲೇಖಕ ಚಂದ್ರಶೇಖರ ಪಾತೂರು ಕಾದಂಬರಿ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಳ್ಳಾಲ

ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಾಹಿತ್ಯ ವೇದಿಕೆ ಆಶ್ರಯದಲ್ಲಿ ನೂತನ ಕೃತಿ ಬಿಡುಗಡೆ ಸಮರಂಭ ಇತ್ತೀಚೆಗೆ ನೆರವೇರಿತು.

ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ, ದ್ವಿತೀಯ ಬಿ.ಎ ವಿದ್ಯಾರ್ಥಿ ತ್ವಯ್ಯಿಬ್ ಸುರಿಬೈಲ್ ಬರೆದಿರುವ ‘ಸಾಮ್ರಾಟ’ ಕಾದಂಬರಿ ಬಿಡುಗಡೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.

ಮಂಗಳೂರಿನ ಆಕೃತಿ ಆಶಯ ಪ್ರಕಾಶನದವರು ನೂತನ ಕಾದಂಬರಿಯನ್ನು ಪ್ರಕಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಹಾಗೂ ಲೇಖಕ ಚಂದ್ರಶೇಖರ ಪಾತೂರು ಕಾದಂಬರಿ ಬಿಡುಗಡೆಗೊಳಿಸಿದರು.

ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಕೃತಿಯ ಪ್ರಥಮ ಪ್ರತಿಯನ್ನು ಸ್ವೀಕರಿಸಿ ಕಾದಂಬರಿಕಾರರಿಗೆ ಅಭಿನಂದನೆ ಸಲ್ಲಿಸಿದರು.

ಮಂಗಳೂರಿನ ಪತ್ರಕರ್ತ ಹಾಗೂ ಲೇಖಕ ಹಂಝ ಮಲಾರ್ ಅವರು ಕಾದಂಬರಿ ಕುರಿತು ಮಾತನಾಡಿದರು. ಪ್ರಕಾಶಕ ನಾಗೇಶ್ ಕಲ್ಲೂರ್ ಹಾಗೂ ಇನ್ನೋರ್ವ ಲೇಖಕ ಇಸ್ಮತ್ ಫಜೀರ್ ಸಾಹಿತ್ಯದ ಮಹತ್ವವನ್ನು ತಿಳಿಸುತ್ತಾ ಲೇಖಕರಿಂದ ಮತ್ತಷ್ಟು ಸಾಹಿತ್ಯ ಸೇವೆ ಸಾಗಬೇಕೆಂದು ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಹೈದರಾಲಿ ಸ್ವಾಗತಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದರು. ಶಾಹಿರ್ ಅವರು ಕಾರ್ಯಕ್ರಮ ನಿರೂಪಿಸಿದರು. ತಸ್ರೀನಾ ವಂದಿಸಿದರು.