ಸಾರಾಂಶ
ಕನ್ನಡಪ್ರಭ ವಾರ್ತೆ ಮೂಲ್ಕಿ
ಶಿಕ್ಷಣದಲ್ಲಿ ಗೆಲುವು ಶಾಶ್ವತವಲ್ಲ, ಸೋಲು ಅಂತಿಮವಲ್ಲ. ಪ್ರಯತ್ನ ಮುಂದುವರಿಸಿ ಜೀವನದಲ್ಲಿ ನಿರಂತರ ಸಾಧನೆ ಮುಖ್ಯ. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದಿಂದ ದೂರವಿದ್ದು ಸಾಧಕರಾಗಬೇಕೆಂದು ಮೂಲ್ಕಿಯ ಕೊಸೆಸಾಂವ್ ಅಮ್ಮನವರ ಚರ್ಚ್ ಧರ್ಮಗುರು ಅಂತೊನಿ ಶೆರಾ ಹೇಳಿದರು.ಮೂಲ್ಕಿಯ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆ ವತಿಯಿಂದ ಸಂಸ್ಥೆಯ ಆವರಣದಲ್ಲಿ ಜರುಗಿದ 3ನೇ ವರ್ಷದ 2025-2026ನೇ ಸಾಲಿನ ಮೂಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ ಮಾಲೀಕ ಜೋನ್ ಕ್ವಾಡ್ರಸ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಸುಮಾರು 20 ಶಾಲೆಗಳ ಆರ್ಥಿಕವಾಗಿ ಹಿಂದುಳಿದ 155 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ವಿತರಣೆ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಮೂಲ್ಕಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಬಿ. ಎಸ್., ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ವಕೀಲರಾದ ಹಂಝತ್ ಹೆಜಮಾಡಿ ಕೋಡಿ, ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮೀ ಟಿ. ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ರೋಶನ್ ಫುಟಾಡೋ ಸ್ವಾಗತಿಸಿ, ನಿರೂಪಿಸಿದರು. ಸುಧಾಕರ್ ಹೆಜ್ಮಾಡಿ ವಂದಿಸಿದರು.