• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿ ಜನ ಜಾಸ್ತಿ ಇದ್ರು... ಮೊಬೈಲೂ ಜಾಸ್ತಿ ಇತ್ತು...
ಅಂಬಾರಿ ಆನೆ ಅಭಿಮನ್ಯು ಮತ್ತು ಮಾವುತ ವಸಂತ.
ಮೈಸೂರು : ರಾಜವಂಶಸ್ಥ ಯದುವೀರ್‌ ಒಡೆಯರ್ - ತ್ರಿಷಿಕಾ ದಂಪತಿಗೆ 2 ನೇ ಗಂಡು ಮಗು ಜನನ

ಶರನ್ನವರಾತ್ರಿಯ ಆಯುಧ ಪೂಜೆ ದಿನವೇ ಮೈಸೂರು ಯದುವಂಶಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಎರಡನೇ ಮಗುವಾಗಿದೆ.

ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ನಡೆದ ಸಾಂಪ್ರದಾಯಿಕ ಕ್ರೀಡೆ ವಜ್ರಮುಷ್ಟಿ ಕಾಳಗ
ವಿಜಯದಶಮಿ ಮೆರವಣಿಗೆಗೂ ಮುನ್ನ ಅರಮನೆಯಲ್ಲಿ ಅನೇಕ ಸಂಪ್ರದಾಯ ಬದ್ಧ ಪೂಜಾ ವಿಧಾನಗಳನ್ನು ಅನುಸರಿಸಲಾಯಿತು. ವಿಜಯದಶಮಿ ದಿನದಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಅವರು ರಾಜ ಪೋಷಕು ಧರಿಸಿ ಕಲ್ಯಾಣ ಮಂಟಪಕ್ಕೆ ಬಂದರು. ಬಳಿಕ ಆಯುದ್ಧಗಳಿಗೆ ಉತ್ತರ ಪೂಜೆ ಸಲ್ಲಿಸಿ ಕೂಷ್ಮಾಂಡ ಛೇದಿಸಿದರು.
ಮೈಸೂರಿನ ಪಂಜಿನ ಕವಾಯತು ಮೈದಾನವೆಲ್ಲಾ ಹೊಂಬೆಳಕಿನ ಚಿತ್ತಾರ...!
ಲೇಸರ್ ಶೋ ಮೂಲಕ ರಾಜ್ಯದ ವೈಭವವನ್ನು ತೋರಿಸಲಾಯಿತು. ಮೈಸೂರು ಅರಮನೆ, ವಿಜಯನಗರದ ಕಲ್ಲಿನ ರಥ, ಶಿಲಾಬಾಲಕಿ, ಸೋಮನಾಥಪುರ ಚೆನ್ನಕೇಶವ ದೇವಾಲಯ, ಶ್ರವಣ ಬೆಳಗೊಳ ಏಕಶಿಲಾ ಗೊಮ್ಮಟೇಶ್ವರ ಮೂರ್ತಿ, ಮಲೆ ಮಹದೇಶ್ವರಸ್ವಾಮಿ ದೇವಸ್ಥಾನ, ಗೋಲಗುಮ್ಮಟ, ಜೋಗ್ ಜಲಪಾತ, ಯಕ್ಷಗಾನ, ಉಳುಮೆ ಮಾಡುತ್ತಿರುವ ರೈತ, ಜ್ಞಾನಪೀಠ ಪುರಸ್ಕೃತ ಸಾಹಿತಿಗಳು, ಸರ್.ಎಂ. ವಿಶ್ವೇಶ್ವರಯ್ಯ, ಡಾ. ರಾಜ್ ಕುಮಾರ್, ಡಾ. ಪುನೀತ್ ರಾಜ್ ಕುಮಾರ್, ವಿಧಾನಸೌಧ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಚಿತ್ರಣವನ್ನು ಲೇಸರ್ ಬೆಳಕಿನಲ್ಲಿ ಮೂಡಿ ಬಂದವು.
ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ, ಶಿಸ್ತಿಗೆ ಸಿಎಂ ಅಭಿನಂದನೆ
ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್.ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.
ದಸರಾ ಮಹೋತ್ಸವ : ರಾಜ್ಯದ ಜನರು ಸುಖ, ಸಮೃದ್ಧಿಯಿಂದ ಇರಲಿ: ಸಿದ್ದರಾಮಯ್ಯ ಪ್ರಾರ್ಥನೆ
ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯ ಕೋರುತ್ತೇನೆ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ.
ಮೈಸೂರು ಅರಮನೆಯಲ್ಲಿ ಆಯುಧಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಶುಕ್ರವಾರ ಬೆಳಗ್ಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ನಿಶಾನೆ ಆನೆ, ಪಟ್ಟದ ಆನೆ, ಪಟ್ಟದ ಕುದುರೆ ಸಮೇತ ಪಟ್ಟದ ಕತ್ತಿ ಮತ್ತು ಇತರೆ ಆಯುಧಗಳೊಂದಿಗೆ ಅರಮನೆ ಆವರಣದ ಕೋಟೆ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿದರು.
ಮಳೆ ನಡುವೆಯೂ ಕುಂದದ ಕಲಾವಿದರ ಉತ್ಸಾಹ- ನಾಡಿನ ಸಾಂಸ್ಕೃತಿಕ, ಕಲೆಗಳ ಪ್ರದರ್ಶನ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆಕೊಪ್ಪದ ಶ್ರೀ ಕಟ್ಟಿ ಬಸವಲಿಂಗೇಶ್ವರ ಜಾನಪದ ಕಲಾ ಸಂಘದಿಂದ ಕರಡೆ ಮಜಲು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿಯ ಶ್ರೀ ಮಲೈ ಮಹದೇಶ್ವರ ಕಂಸಾಳೆ ಕಲಾವಿದರ ಸಂಘ, ವಿದ್ಯಾರಣ್ಯಪುರಂನ ಕಂಸಾಳೆ ಮಹದೇವಯ್ಯ ಕಲಾ ಸಂಘದಿಂದ ಬೀಸು ಕಂಸಾಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯ ಲಿಂಗರಾಜು ಡೊಳ್ಳು ಕುರಿತ ಕಲಾವಿದರ ಸಂಘದಿಂದ ಡೊಳ್ಳು ಕುಣಿತ ಕಣ್ಮನ ಸೆಳೆಯಿತು.
ಜಂಬೂಸವಾರಿ ಮೆರವಣಿಗೆಯಲ್ಲಿ ಹಿಂದೆಂದೂ ಕಾಣದ ಅವ್ಯವಸ್ಥೆ..ಅಶಿಸ್ತು ತಾಂಡವ
ಜಾನಪದ ಕಲಾತಂಡವಾಗಲಿ, ಸ್ತಬ್ಧಚಿತ್ರವಾಗಲಿ, ಜಂಬೂ ಸವಾರಿಯಾಗಲಿ ಕಾಣದಂತೆ ತುಂಬಿ ಹೋದರು. ಕೆಲವರು ಕೂರಲು ಸ್ಥಳವಿಲ್ಲದೆ ಮಾಧ್ಯಮದವರಿಗೆ ಮೀಸಲಿದ್ದ ಸ್ಥಳದಲ್ಲಿ ಬಂದು ಕುಳಿತರು. ಉಳಿದ ಅನೇಕರು ಮೆರವಣಿಗೆಯನ್ನು ಸುತ್ತುವರೆದರು.
ಸತತ 5ನೇ ಬಾರಿ ಅಂಬಾರಿ ಹೊತ್ತು ಗಾಂಭೀರ್ಯದ ಹೆಜ್ಜೆ ಹಾಕಿದ ಅಭಿಮನ್ಯು
ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆಯು ಸತತ 5ನೇ ಬಾರಿಗೆ 750 ಕೆ.ಜಿ. ಚಿನ್ನದ ಅಂಬಾರಿ ಹೊರುವ ಸವಾಲನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ. ದೂರವನ್ನು ನಿರಾಸದಾಯಕವಾಗಿ ಅಂಬಾರಿ ಹೊತ್ತು ಸಾಗುವ ಮೂಲಕ ತನ್ನ ಭುಜಬಲದ ಪರಾಕ್ರಮವನ್ನು ಮತ್ತೊಮ್ಮೆ ಸಾಬೀತುಪಡಿಸಿತು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 420
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved