• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಳಂಬ
ಪ್ರಾಧಿಕಾರದ ಉದ್ದೇಶ ಲಾಭ ಹಾಗೂ ನಷ್ಟರಹಿತವಾಗಿ ಕಾರ್ಯನಿರ್ವಹಿಸಿ, ನಗರದ ನಾಗರಿಕರಿಗೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಿಕೊಡುವುದಾಗಿದೆ. ಆದರೆ, ಈಗ ನೋಡಿದರೆ ಇದು ವಿರುದ್ಧವಾದ ದಿಕ್ಕಿನಲ್ಲಿ ಸಾಗುತ್ತಿರುವುದು ಕಂಡು ಬಂದಿದೆ. ನಮ್ಮ ಅಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಈ ರೀತಿಯಾಗಿದೆ.
ನಿತ್ಯದ ಆಹಾರ ಗುಣಮಟ್ಟ, ಸೋಮಾರಿತನ, ನಿರ್ಲಕ್ಷ್ಯದಿಂದ ಮನುಷ್ಯನ ಆರೋಗ್ಯ ಕೆಡುತ್ತದೆ: ಡಾ.ಡಿ.ನಟರಾಜು
ಹಸಿವಾದಾಗ ಮಾತ್ರ ಊಟ ಮಾಡಬೇಕು, ಅದನ್ನು ಹೊರತುಪಡಿಸಿ ಇತರರ ಬಲವಂತಕ್ಕೆ ಮತ್ತು ಸಿಕ್ಕ ಸಮಯದಲ್ಲಿ ಆಹಾರ ಸೇವಿಸಿದರೆ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಇದನ್ನು ಪ್ರತಿಯೊಬ್ಬರು ಅರಿಯಬೇಕು. ಆಹಾರ ಸೇವನೆಯ ವಿಚಾರದಲ್ಲಿ ಸ್ವಚ್ಛತೆ ಅತ್ಯಂತ ಪ್ರಮುಖವಾಗಿದ್ದು, ಮನೆಯ ಜತೆಗೆ ಹೊರಗಡೆ ಹೋಟೆಲ್ ಗಳಲ್ಲಿ ಊಟ ಮಾಡುವಾಗ ಬಹಳ ಎಚ್ಚರಿಕೆ ವಹಿಸಿ ಶುಚಿತ್ವದ ಬಗ್ಗೆ ನೇರವಾಗಿ ಪ್ರಶ್ನಿಸಬೇಕು.
ಶಾಸಕ ಡಿ.ರವಿಶಂಕರ್ ಕ್ಷೇತ್ರದ ಜನತೆಯ ಕ್ಷಮೆ ಕೇಳುವಂತೆ ಆಗ್ರಹ
ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹದೇವನಾಯಕನ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿ ಇಬ್ಬರು ಮೃತಪಟ್ಟಿದ್ದು, ಇದಕ್ಕೆ ಯಾರು ಹೊಣೆ, ಚೀರನಹಳ್ಳಿ ಗ್ರಾಮದ ಪುಂಡನಾದ ಕಾಮುಕ ಲೋಕೇಶ್ ಎಂಬಾತನ ಬೆದರಿಕೆಯಿಂದ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಅದನ್ನು ಅವರು ನಿರ್ಲಕ್ಷಿಸಿದ ಪರಿಣಾಮ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿರುವ ಪ್ರಕರಣದ ಹೊಣೆಯನ್ನು ಶಾಸಕರೇ ಹೊರಬೇಕು.
ರಕ್ತದಾನ ಎಂದರೆ ಜೀವದಾನ, ಇದಕ್ಕೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ: ಪ್ರೊ.ಎನ್.ಕೆ. ಲೋಕನಾಥ್
ದೇಶದಲ್ಲಿ ಪ್ರತಿ ಎರಡು ಸೆಕೆಂಡ್‌ ಗೆ ಯಾರಿಗಾದರೂ ರಕ್ತದ ಅಗತ್ಯ ಇದ್ದೆ ಇರುತ್ತದೆ. ಪ್ರತಿವರ್ಷ ಅಂದಾಜು 3 ಕೋಟಿ ರಕ್ತದ ಘಟಕಗಳನ್ನು ಪೂರಣ ಮಾಡಲಾಗುತ್ತದೆ. ಭಾರತದಲ್ಲಿ ಪ್ರತಿ ವರ್ಷ 5 ಕೋಟಿ ಯೂನಿಟ್ ರಕ್ತ ಬೇಕಾಗುತ್ತದೆ. ಆದರೆ, ಕೇವಲ ಎರಡೂವರೆ ಕೋಟಿ ಯೂನಿಟ್ ಮಾತ್ರ ರಕ್ತ ಲಭ್ಯವಾಗುತ್ತಿದೆ. ಹೀಗಾಗಿ, ರಕ್ತದಾನ ಮಾಡಲು ಮತ್ತಷ್ಟು ಪ್ರೇರಣೆ ನೀಡುವಂತಹ ಕಾರ್ಯಕ್ರಮಗಳು ನಡೆಯಬೇಕು.
ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ: ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ
ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ ಕಂಡು ಬಂದಿದೆ. ಈ ಹಿನ್ನೆಲೆ ಶುಕ್ರವಾರ ಇಒ ಧರಣೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ಎಇಇ ಗೋವಿಂದ ನಾಯ್ಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಕಲಾ, ಪಿಡಿಒ ಸಂತೋಷ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮೆದುಳಿನಲ್ಲಿ ಗೆಡ್ಡೆ ಕ್ಯಾನ್ಸರ್‌ಗೆ ಇದೆ ಅತ್ಯಾಧುನಿಕ ಚಿಕಿತ್ಸೆ..!
ಮಿದುಳಿನ ಯಾವ ಭಾಗದಲ್ಲಿ ಕ್ಯಾನ್ಸರ್ ಗಡ್ಡೆಗಳು ಇವೆ ಎಂಬುದರ ಮೇಲೆ ರೋಗ ಲಕ್ಷಣಗಳು ಇರುತ್ತವೆ. ಸಾಮಾನ್ಯವಾಗಿ ತಲೆನೋವು, ವಾಂತಿ, ದೃಷ್ಟಿ ಮಂದವಾಗುವುದು, ಜ್ಞಾಪಕ ಶಕ್ತಿ ನಷ್ಟ, ಅಸ್ಪಷ್ಟ ಮಾತು, ಕೈ ಮತ್ತು ಕಾಲುಗಳಲ್ಲಿ ದೌರ್ಬಲ್ಯ ಮತ್ತು ದೇಹದಲ್ಲಿ ಅಸಮತೋಲನ ಕಂಡು ಬರುತ್ತದೆ. ಅಲ್ಲದೇ, ಈಗ ಸ್ಟಿರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿಯಂತಹ ನವೀನ ತಂತ್ರಜ್ಞಾನ ಬಳಸಿಕೊಂಡು ಮಿದುಳು ಗಡ್ಡೆಗೆ ಮತ್ತು ಮರುಕಳಿಸಬಹುದಾದ ಮಾರಣಾಂತಿಕ ಗಡ್ಡೆಗಳಿಗೆ ಚಿಕಿತ್ಸೆ ನೀಡಬಹುದು.
80 ನೌಕರರಿಗೆ ಇರುವುದು ಬರೀ ಎರಡೇ ಕೊಠಡಿ..!
ಮೈಸೂರು ನಗರದ ನಜರ್ ಬಾದ್ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯು ಅವ್ಯವಸ್ಥೆಯ ಆಗರವಾಗಿದೆ. ಈ ಕಚೇರಿಯಲ್ಲಿ 70 ರಿಂದ 80 ಮಂದಿ ನೌಕರರು ಕೆಲಸ ಮಾಡುತ್ತಿದ್ದು, ಇವರಿಗಾಗಿ ಇರುವುದು ಮಾತ್ರ 2 ಕೊಠಡಿ. ಹೀಗಾಗಿ, ನೌಕರರು ಕುಳಿತುಕೊಂಡು ಕೆಲಸ ಮಾಡಲು ಜಾಗವೇ ಇಲ್ಲ. ಒಬ್ಬರು ಕುಳಿತರೆ ಮತ್ತೊಬ್ಬರು ನಿಂತುಕೊಂಡೇ ವ್ಯವಹರಿಸಬೇಕಾದ ಪರಿಸ್ಥಿತಿಯಿದೆ.
ಹಿಂದೂ ಯಾತ್ರಿಕರಿಗೆ ರಕ್ಷಣೆ ನೀಡುವಂತೆ ರಾಷ್ಟ್ರಪತಿಗೆ ವಿಎಚ್.ಪಿ ಮನವಿ
ಜೂ.9ರಂದು ಜಮ್ಮು- ಕಾಶ್ಮೀರದಲ್ಲಿ ವೈಷ್ಟೋ ದೇವಿ ಕತ್ರಾದಿಂದ ಶಿವಖೋಡಿಗೆ ಸಂಚರಿಸುತ್ತಿದ್ದ ಹಿಂದೂ ಭಕ್ತರ ಬಸ್ಸಿನ ಮೇಲೆ ಪಾಕಿಸ್ತಾನ ಪೋಷಿತ ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕರು ಕೃತ್ಯವನ್ನು ನಡೆಸಿದ್ದು. ಇದರಲ್ಲಿ 10 ನಿರ್ದೋಷಿ ಹಿಂದೂ ಯಾತ್ರಿಕರು ಮರಣ ಹೊಂದಿದ್ದು, ಸುಮಾರು ನಲವತ್ತು ಜನ ತೀವ್ರವಾಗಿ ಗಾಯಗೊಂಡಿರುತ್ತಾರೆ. ಈ ಕ್ರೂರ ಕೃತ್ಯದಿಂದ ಸಂಪೂರ್ಣ ದೇಶ ಆಘಾತಗೊಂಡಿದೆ ಮತ್ತು ತೀವ್ರ ಆಕ್ರೋಶದಲ್ಲಿದೆ.
ರಾಜಕಾರಣದ ಮೌಲ್ಯ ಕುಸಿತಕ್ಕೆ ಮತದಾರರು ಹೊಣೆಗಾರರು
ಭಾರತಕ್ಕೆ ಪ್ರಜಾಪ್ರಭುತ್ವ ಆಡಳಿತ ಹೊಸದೇನೂ ಅಲ್ಲ. ಪುರಾತನ ಭಾರತದ ವೈಶಾಲಿ. ಲಿಚ್ಛವಿ, ಕುಶಾನ ಮುಂತಾದ ಗಣರಾಜ್ಯಗಳು ಪ್ರಜಾಪ್ರಭುತ್ವದ ರೂಪುರೇಷೆಗಳನ್ನು ಜಗತ್ತಿಗೆ ಪರಿಚಯಿಸಿದ್ದವು. ಆದರೆ, ಆಧುನಿಕ ಪ್ರಜಾಪ್ರಭುತ್ವವು ಜಾತೀಯತೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಚುನಾವಣಾ ಅಕ್ರಮ ಮುಂತಾದ ಕಲುಷಿತ ಮಾರ್ಗದಿಂದ ಅರ್ಥ ಕಳೆದುಕೊಳ್ಳುತ್ತಿದೆ.
ಹುಣಸೂರು ರೋಟರಿಗೆ ಪ್ಲಾಟಿನಂ ಪ್ಲಸ್ ಪ್ರಶಸ್ತಿಯ ಗರಿ..!
ಹುಣಸೂರು ರೋಟರಿ ಸಂಸ್ಥೆ ಪ್ರಸ್ತುತ ಸಾಲಿನಲ್ಲಿ 310ಕ್ಕೂ ಹೆಚ್ಚು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿದೆ. ಮುಖ್ಯವಾಗಿ ಸರ್ವಿಸ್ ಪ್ರಾಜೆಕ್ಟ್ ವಿಭಾಗದಲ್ಲಿ ರೋಟರಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಬಹುಮಾನ, ಮೆಂಬರ್ ಷಿಪ್ ಡೆವಲಪ್ ಮೆಂಟ್ ವಿಭಾಗದಲ್ಲಿ ತೃತೀಯ ಬಹುಮಾನ, ಜಿಲ್ಲಾ ಪ್ರಾಜೆಕ್ಟ್ ಆದ ರಸ್ತೆ ಸುರಕ್ಷತೆ ವಿಭಾಗದಲ್ಲಿ ಸ್ಪೆಷಲ್ ಅಪ್ರೇಸಿಯೇಷನ್ ಮನ್ನಣೆ ದೊರಕಿದೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 415
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved