ನೇಮಕಾತಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ: ಸಂಸದ ಡಾ.ಸಿ.ಎನ್. ಮಂಜುನಾಥ್ಸರ್ಕಾರಗಳು ಅಗತ್ಯವಿರುವ ಕಾಲೇಜು, ಆಸ್ಪತ್ರೆಯನ್ನು ನೂರಾರು ಕೋಟಿ ರು. ವೆಚ್ಚ ಮಾಡಿ ನಿರ್ಮಿಸುತ್ತದೆ. ನೋಡಲು ಸುಂದರವಾಗಿರುತ್ತದೆ. ಆದರೆ ಆಸ್ಪತ್ರೆಗಳಲ್ಲಿ ನುರಿತ ತಜ್ಞ ವೈದ್ಯರೇ ಇರುವುದಿಲ್ಲ. ಅಗತ್ಯ ಸಿಬ್ಬಂದಿ ಕೊರತೆ ಇರುತ್ತದೆ. ಕಾಲೇಜುಗಳಲ್ಲಿ ಬೋಧಕರೇ ಇರುವುದಿಲ್ಲ. ಆದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ಆಡಳಿತ ಯಂತ್ರ ಎಡವುತ್ತಿರುವುದು ಇಲ್ಲೇ.