ಹುಣಸೂರು ಬೈಪಾಸ್ ಹೈವೆ ಕಾಮಗಾರಿಗೆ 86 ಕೋಟಿ ರು. ಮಂಜೂರು: ಶಾಸಕ ಜಿ.ಡಿ. ಹರೀಶ್ಗೌಡ ಸಂತಸಹುಣಸೂರು ಬೈಪಾಸ್ ರಸ್ತೆಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ಬಹಳಷ್ಟು ವರ್ಷಗಳಿಂದ ಆಪಘಾತಗಳು, ಅವಘಡಗಳು ನಿರಂತರವಾಗಿ ನಡೆಯುತ್ತಿರುವ ಬಗ್ಗೆ ವರದಿಗಳು ಬಂದಿವೆ ಹಾಗೂ ಸಾರ್ವಜನಿಕರಿಂದ ಆಹವಾಲುಗಳು ಕೂಡ ನೀಡಿದ್ದರು. ಈ ಸಂಬಂಧವಾಗಿ ನಾನು ಶಾಸಕನಾದ ಬಳಿಕ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಮನವಿ ಸಲ್ಲಿಸಿದ್ದೆ, ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿ ಹುಣಸೂರು ಬೈಪಾಸ್ ಇನ್ನು ಮುಂದೆ ನಾಲ್ಕು ಲೇನ್ ಹೈವೆ ಡಿ. ದೇವರಾಜ್ ಅರಸ್ ಪ್ರತಿಮೆಯಿಂದ ಆರಂಭವಾಗುವ ಬೈಪಾಸ್ ರಸ್ತೆಯಲ್ಲಿ ದಟ್ಟಣೆಯಿಂದ ಗೊಂದಲದ ಗೂಡಾಗಿದ್ದು, ಅದನ್ನು 4 ಲೇನ್ ಮಾಡಲು ಹಾಗೂ ಲಕ್ಷಣತೀರ್ಥ ನದಿಗೆ ಕಟ್ಟಲಾಗಿರುವ ಸೇತುವೆ ಶಿಥಿಲಗೊಂಡಿರುವುದರಿಂದ ಹೊಸ ಸೇತುವೆ ನಿರ್ಮಾಣ ಮಾಡಲು 86 ಕೋಟಿ ರು. ಮಂಜೂರು ಮಾಡಿಕೊಟ್ಟಿದ್ದಾರೆ