• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯತೋರಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕಿ ಡಾ.ಶಮ್ಲಾ ಇಕ್ಬಾಲ್ ಎಚ್ಚರಿಕೆ ನೀಡಿದರು. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದರು.
ಶ್ರಮ ಇಲ್ಲದೇ ಯಶಸ್ಸು ಲಭಿಸುವುದು ಅಸಾಧ್ಯ
ಸಾಧನೆ ಮಾಡಿದವರ ಹಿಂದೆ ಅವರದ್ದೇ ಆದ ಪರಿಶ್ರಮ ಇರುತ್ತದೆ. ಶ್ರಮ ಇಲ್ಲದೆ ಯಶಸ್ಸು ಲಭಿಸುವುದು ಅಸಾಧ್ಯವೆಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು.ಚಿತ್ರದುರ್ಗ ಹೊರವಲಯದಲ್ಲಿರುವ ಎಸ್ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟ ಕ ಹಾಗೂ ಚಿತ್ರದುರ್ಗ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಧನೆಗೆ ನೆಪ ಅಡ್ಡಿಯಾಗಬಾರದು. ನಮ್ಮ ಯಶಸ್ಸಿನ ಹಿಂದೆ ಪೋಷಕರ ಶ್ರಮ ಅಡಗಿರುತ್ತದೆ ಎನ್ನುವುದು ಕೂಡ ಮರೆಯಬಾರದು ಎಂದರು.
ಶ್ರಮ ಇಲ್ಲದೇ ಯಶಸ್ಸು ಲಭಿಸುವುದು ಅಸಾಧ್ಯ
ಸಾಧನೆ ಮಾಡಿದವರ ಹಿಂದೆ ಅವರದ್ದೇ ಆದ ಪರಿಶ್ರಮ ಇರುತ್ತದೆ. ಶ್ರಮ ಇಲ್ಲದೆ ಯಶಸ್ಸು ಲಭಿಸುವುದು ಅಸಾಧ್ಯವೆಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು.ಚಿತ್ರದುರ್ಗ ಹೊರವಲಯದಲ್ಲಿರುವ ಎಸ್ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟ ಕ ಹಾಗೂ ಚಿತ್ರದುರ್ಗ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಧನೆಗೆ ನೆಪ ಅಡ್ಡಿಯಾಗಬಾರದು. ನಮ್ಮ ಯಶಸ್ಸಿನ ಹಿಂದೆ ಪೋಷಕರ ಶ್ರಮ ಅಡಗಿರುತ್ತದೆ ಎನ್ನುವುದು ಕೂಡ ಮರೆಯಬಾರದು ಎಂದರು.
ಚಂದ್ರವಳ್ಳಿಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ
ಕನ್ನಡ ರಾಜ್ಯೋತ್ಸವ ಆಚರಣೆ ಅಂದಾಕ್ಷಣ ಭುವನೇಶ್ವರಿ ಮೆರವಣಿಗೆ, ಆರ್ಕೆಸ್ಟ್ರಾ ಆಯೋಜನೆ, ಕನ್ನಡ ಭಾಷೆ ಅಳಿವು ಉಳಿವಿನ ಬಗ್ಗೆ ಭಾಷಣಗಳು ಮಾಮೂಲು. ಆದರೆ ಇದರೆಲ್ಲದರಾಚೆ ವಿನೂತನ ರಾಜ್ಯೋತ್ಸವ ಆಚರಣೆಗೆ ಭಾನುವಾರ ಚಿತ್ರದುರ್ಗ ಸಾಕ್ಷಿಯಾಯಿತು. ಚಿತ್ರದುರ್ಗ ಚಂದ್ರವಳ್ಳಿಯಲ್ಲಿರುವ ಮಯೂರವರ್ಮನ ಶಾಸನದ ಮಾಹಿತಿ ಪ್ರಚುರ ಪಡಿಸುವ ಮೂಲಕ ಕನ್ನಡದ ಮೊದಲ ಸಾಮ್ರಾಜ್ಯ ಉದಯವಾದ ಐತಿಹ್ಯ ಮನನ ಮಾಡಿಕೊಡಲಾಯಿತು.ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿ ಗಮನ ಸೆಳೆದರು. ಚಂದ್ರವಳ್ಳಿಯಲ್ಲಿ ನಿತ್ಯ ನೂರಾರು ವಾಯುವಿಹಾರಿಗಳು ಜಮಾವಣೆಗೊಳ್ಳುತ್ತಿದ್ದು ಅವರೆಲ್ಲರ ಸಮ್ಮುಖದಲ್ಲಿ ಖ್ಯಾತ ಶಾಸನ ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಶಾಸನದಲ್ಲಿನ ಹೂರಣವ ಬಿಚ್ಚಿಟ್ಟರು. ಮುಂಜಾನೆ ಚುಮು ಚುಮು ಚಳಿಯ ನಡುವೆ ಶಾಸನದ ಮುಂಭಾಗವೇ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿಶೇಷ.
ಬೆಳೆನಷ್ಟ ಪರಿಹಾರ ವಿತರಣೆ ವಿಳಂಬಕ್ಕೆ ಆಕ್ರೋಶ
ಬೆಳೆನಷ್ಟ ಪರಿಹಾರ ವಿತರಣೆ ವಿಳಂಬಕ್ಕೆ ಆಕ್ರೋಶ
ಭಾಷಣ ಸರಕಾದ ಬಸವಣ್ಣನ ವಚನ: ತರಳಬಾಳು ಶ್ರೀ
ಭಾಷಣ ಸರಕಾದ ಬಸವಣ್ಣನ ವಚನ: ತರಳಬಾಳು ಶ್ರೀ
ಅಲ್ಪಸಂಖ್ಯಾತರಿಗೆ ಸಾಲ ನೀಡಲು ಬ್ಯಾಂಕ್‌ಗಳ ನಿರಾಸಕ್ತಿ
ಅಲ್ಪಸಂಖ್ಯಾತರಿಗೆ ಸಾಲ ನೀಡುವಲ್ಲಿ ಬ್ಯಾಂಕುಗಳು ತೋರುತ್ತಿರುವ ನಿರಾಸಕ್ತಿಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಲ ಸೌಲಭ್ಯ ನೀಡಿಕೆಯಲ್ಲಿ ಬ್ಯಾಂಕ್‍ಗಳು ತೀವ್ರ ನಿರ್ಲಕ್ಷ್ಯ ತಾಳುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಆಯೋಗಕ್ಕೆ ಬರುತ್ತಿವೆ ಎಂದರು. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಎಷ್ಟು ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂಬ ಮಾತಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಉತ್ತರಿಸಿದ ಬಗೆ ಆಯೋಗದ ಅಧ್ಯಕ್ಷರ ಕೆರಳಿಸಿತು. ಅರ್ಜಿಗಳು ತಿರಸ್ಕೃತಗೊಂಡಿರುವ ಬಗ್ಗೆ ನಿರ್ದಿಷ್ಟ ಪ್ರಕರಣಗಳಿದ್ದಲ್ಲಿ ಪರಿಶೀಲಿಸಲಾಗುವುದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್ ಪ್ರತಿಕ್ರಿಯಿಸಿದರು.
ಗ್ಯಾರಂಟಿ ಯೋಜನೆ ಟೀಕಿಸುವವರಿಗೆ ತಕ್ಕ ಉತ್ತರ ಕೊಡಿ
ಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ,ಟಿಪ್ಪಣೆಗಳು ಬಂದರೆ ಪಕ್ಷದ ಕಾರ್ಯಕರ್ತರು ಸರಿಯಾದ ಉತ್ತರ ಕೊಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶುಕ್ರವಾರ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದರು.
3 ಸಾವಿರ ಪೋಲೀಸ್ ಕಾನಸ್ಟೇಬಲ್ ಹುದ್ದೆ ಭರ್ತಿಗೆ ಕ್ರಮ
ಪೊಲೀಸ್ ಇಲಾಖೆಯಲ್ಲಿ ಹದಿನೈದು ಸಾವಿರ ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪಿಎಸ್ಐ ನೇಮಕಾತಿ ಹಗರಣ ಪ್ರಯುಕ್ತ 545 ಹುದ್ದೆ ಗೊಂದಲವಾಗಿತ್ತು. ಈಗ ಕೋರ್ಟ್‌ ರೀ ಎಕ್ಸಾಮ್ ಗೆ ಆದೇಶಿಸಿದೆ. ಕೆಇಓಯಿಂದ 545 ಹುದ್ದೆ ಗಳಿಗೆ ಪುನರ್ ಪರೀಕ್ಷೆ ಆದೇಶ ಹೊರಡಿಸಲಾಗಿದೆ. ದಿನಾಂಕ ನಿಗದಿಯಾಗಿಲ್ಲ. ಇದರ ಜೊತೆಗೆ 600 ಪಿಎಸ್ ಐ ನೇಮಕ ಹಂತ ಹಂತವಾಗಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗುವುದು. 3 ಸಾವಿರ ಪೋಲೀಸ್ ಕಾನಸ್ಟೇಬಲ್ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗಿದೆ. ನಮ್ಮಲ್ಲಿರುವ ತರಬೇತಿ ಸಾಮರ್ಥ್ಯ ನೋಡಿಕೊಂಡು ನೇಮಕಾತಿ ನಡೆಯಲಿದೆ ಎಂದರು.
ಠಾಣೆಗಳಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಿ
ಠಾಣೆಗಳಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಾಣ ಮಾಡವುದರ ಮೂಲಕ ಇಲಾಖೆಯ ಘನತೆ ಹೆಚ್ಚಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶುಕ್ರವಾರ ಚಿತ್ರದುರ್ಗದಲ್ಲಿ ನಡೆದ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಠಾಣೆಗಳಲ್ಲಿ ಹೆಲ್ಪಿಂಗ್ ಡೆಸ್ಕ್, ಸಿಸಿ ಕ್ಯಾಮರಾ ಇರಬೇಕು. ದೂರು ನೀಡಲು ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದರು.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 447
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved