• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಕ್ಕೆ ಮರು ನಾಮಕರಣ ಬೇಡ: ಮೂಡ್ನಾಕೂಡು ಚಿನ್ನಸ್ವಾಮಿ
ಕರ್ನಾಟಕ ರಾಜ್ಯದ ಹೆಸರನ್ನು ಬಸವನಾಡು ಎಂಬುದಾಗಿ ಬದಲಿಸಲು ಕೆಲವು ಸಂಘಟನೆಗಳು, ಬುದ್ಧಿಜೀವಿಗಳು ಪ್ರಯತ್ನಿಸುತ್ತಿದ್ದಾರೆ. ಅಂತಹ ಪ್ರಯತ್ನಗಳನ್ನು ಕೈಬಿಡಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಹೇಳಿದರು.ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ಬೃಹನ್ಮಠ ಮತ್ತು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಏರ್ಪಡಿಸಿರುವ ಮೂರು ದಿನಗಳ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಆಲೋಚನೆಗಳಿಂದ ಬಡಿದಾಡುವ ಕೈಗಳಿಗೆ ಬಡಿಗೆ ಕೊಟ್ಟಂತಾಗುತ್ತದೆ ಎಂದು ಎಚ್ಚರಿಸಿದರು.
ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ
ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ಸುಧಾದೇವಿ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು ಎಂದರು.
ಅಡಕೆ ವ್ಯಾಪಾರಿಯ ₹1 ಕೋಟಿ ದೋಚಿದ್ದು ಗೆಳೆಯ ಆ್ಯಂಡ್‌ ಗ್ಯಾಂಗ್!
ಇತ್ತೀಚೆಗೆ ನಡೆದಿದ್ದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದ ಅಡಕೆ ವ್ಯಾಪಾರಿ ಎಚ್‌.ಎಸ್‌.ಉಮೇಶ್ ಅವರಿಗೆ ಸೇರಿದ ₹1 ಕೋಟಿ ಕಳ್ಳತನ ಪ್ರಕರಣ ಸಂಬಂಧ ಅವರ ಕಾರು ಚಾಲಕ ಹಾಗೂ ಆತನ ಸ್ನೇಹಿತೆ ಸೇರಿದಂತೆ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದ ಪಿ.ಬಿ.ಸ್ವಾಮಿ, ಆತನ ಸ್ನೇಹಿತೆ ಬೆಂಗಳೂರಿನ ಮಹದೇವಪುರ ಸಮೀಪದ ಲಕ್ಷ್ಮೀಸಾಗರ ಬಡಾವಣೆಯ ಎನ್‌.ಎಂ.ಅನುಪಮಾ, ಚಿತ್ರದುರ್ಗ ಜಿಲ್ಲೆಯ ಕೆಳಗೋಟೆಯ ಎನ್‌.ಪವನ್ ಹಾಗೂ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಹೇಶ್ವರಿನಗರದ ಎಸ್.ಆರ್.ಕಾರ್ತಿಕ್ ಬಂಧಿತರು. ಆರೋಪಿಗಳಿಂದ ₹90.19 ಲಕ್ಷ ನಗದು, ₹6.49 ಲಕ್ಷ ಮೌಲ್ಯದ 2 ಐ–ಫೋನ್, 2 ವಾಚ್‌ಗಳು ಹಾಗೂ 61 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ ಮೆರವಣಿಗೆ
ಸುವರ್ಣ ಸಂಭ್ರಮದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ದಿವ್ಯಾಪ್ರಭು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆಕರ್ಷಕ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಕಹಳೆ ವಾದನ, ಹಗಲು ವೇಷ, ತಾಶರಂ ಡೋಲು ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು. ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿದ್ದರು.
ಏಳು ದಶಕ ಕಳೆದರೂ ಹಾಗೇ ಉಳಿದ ನಾಡು, ನುಡಿ ಸಮಸ್ಯೆ
ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆಯುತ್ತಾ ಬಂದರೂ ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಕೆಲವೊಂದು ಸಮಸ್ಯೆಗಳು ಹಾಗೆಯೇ ಉಳಿದಿವೆ. ಕೆಲವೂ ಇನ್ನು ಹೆಚ್ಚು ಗಂಭೀರವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿದ ಅವರು, ಗಡಿ ವಿವಾದ, ನೆರೆ ರಾಜ್ಯಗಳೊಂದಿಗಿನ ನೀರಿನ ಹಂಚಿಕೆ, ಮಣ್ಣಿನ ಮಕ್ಕಳಿಗೆ ಉದ್ಯೋಗದ ಆದ್ಯತೆ, ಮಾತೃಭಾಷೆಯಲ್ಲಿ ಶಿಕ್ಷಣ ಮುಂತಾದವುಗಳು ಸವಾಲುಗಳಾಗಿಯೇ ಮುಂದುವರಿದಿವೆ ಎಂದರು.
ಇಂಗ್ಲೀಶ್‌ ವ್ಯಾಮೋಹದಿಂದಾಗಿ ಕನ್ನಡ ಮರೆಯುತ್ತಿರುವುದು ವಿಷಾದನೀಯ
ಇಂಗ್ಲೀಶ್‌ ಮೇಲಿನ ವ್ಯಾಮೋಹದಿಂದಾಗಿ ಕನ್ನಡವನ್ನು ಮರೆಯುತ್ತಿರುವುದು ವಿಷಾದನೀಯ. ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಮುಂದಿನ ತಲೆಮಾರಿಗೂ ಕೊಡುವ ಕಾರ್ಯ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
- ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಎಲ್ಲ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆಂದು ಶಾಸಕ ಎಂ.ಚಂದ್ರಪ್ಪ ಹೇಳಿದರು. ಪಟ್ಟಣದ ಸಂವಿಧಾನ ಸೌಧದಲ್ಲಿ ಬುಧವಾರ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕವೆಂದರೆ ಸರ್ವ ಧರ್ಮೀಯರು ಪ್ರೀತಿಸುವ ನೆಲವೆಂದರು. ಹಿಂದುಳಿದ ಜನಾಂಗದ ಬಗ್ಗೆ ಅಪಾರವಾದ ಕಾಳಜಿಯಿಟ್ಟುಕೊಂಡಿದ್ದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ.ದೇವರಾಜ ಅರಸುರವರು ಮೈಸೂರನ್ನು ಕರ್ನಾಟಕವೆಂದು ನಾಮಕರಣ ಮಾಡಿ ಇಂದಿಗೆ ಐವತ್ತು ವರ್ಷಗಳಾಗಿದೆ. ಭಾರತದ ಭೂಪಟದಲ್ಲಿ ಕರ್ನಾಟಕ ರಾಜ್ಯಕ್ಕೆ ಅತ್ಯುತ್ತಮವಾದ ಸ್ಥಾನವಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿವೆ. ಭಾರತದ ಯಾವ ರಾಜ್ಯಕ್ಕೂ ಇಷ್ಟೊಂದು ಜ್ಞಾನಪೀಠ ಪ್ರಶಸ್ತಿಗಳು ದೊರತಿಲ್ಲವೆಂದರು.
ಹೊಸದುರ್ಗ ಸಂಚಾರಿ ನಿರೀಕ್ಷಕರಿಂದ ಸಿಬ್ಬಂದಿಗೆ ಕಿರುಕುಳ ಆರೋಪ
ಬಿಎಂಟಿಸಿ ಸಿಬ್ಬಂದಿಗೆ ನಿರ್ದಿಷ್ಟ ಮಾರ್ಗ ನೀಡಲು, ಉತ್ತಮ ಗುಣಮಟ್ಟದ ಬಸ್ಸುಗಳನ್ನು ಒದಗಿಸಲು ಹಾಗೂ ರಜೆ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ 7 ಜನರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತು ಮಾಡಿದ ಬೆನ್ನಲ್ಲೇ, ಇಂಥದ್ದೊಂದು ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಹೊಸದುರ್ಗ ಕೆಎಸ್ಆರ್‌ಟಿಸಿ ಡಿಪೋದಲ್ಲಿ ಲಂಚಾವತಾರದ ಸದ್ದು ಕೇಳಿ ಬಂದಿದೆ. ಇಲ್ಲಿನ ಕೆ.ಎಸ್.ಆರ್.ಟಿ.ಸಿ ಡಿಪೋ ಅಧಿಕಾರಿಯೊಬ್ಬ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಿಬ್ಬಂದಿಯಿಂದ ಲಂಚ ಪಡೆಯುತ್ತಿರುವುದಾಗಿ ಮತ್ತು ಅವರ ಕಿರುಕುಳಕ್ಕೆ ಬೇಸತ್ತು ನಮಗೆ ನ್ಯಾಯ ಒದಗಿಸಿ ಎಂದು ಪರಿಪರಿಯಾಗಿ ಬೇಡಿಕೊಳ್ಳುವ ಸಂದೇಶವೊಂದು ವಾಟ್ಪ್ಸಾ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ.
ದ್ವಾರಕಾನಾಥ್ ಸೇರಿ 28 ಮಂದಿಗೆ ರಾಜ್ಯೋತ್ಸವ ಸನ್ಮಾನ
ಕನ್ನಡಪ್ರಭದ ಛಾಯಾಗ್ರಾಹಕ ದ್ವಾರಕನಾಥ್, ಅಂಧರ ಮಹಿಳಾ ಕ್ರಿಕೆಟ್ ತಂಡದ ನಾಯಕಿ ವರ್ಷಾ ಸೇರಿದಂತೆ 28 ಮಂದಿ ಸಾಧಕರಿಗೆ ಈ ಬಾರಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನವೆಂಬರ್ ಒಂದರಂದು ಜಿಲ್ಲಾ ಕೇಂದ್ರದಲ್ಲಿ ಜರುಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ತಿಳಿಸಿದ್ದಾರೆ.
ಅಧಿಕಾರಿಗಳು ಇತಿಮಿತಿ ಅರಿತು ಕೆಲಸ ಮಾಡಿ
ಕಚೇರಿಗಳಿಗೆ ಬರುವ ಜನ ಸಾಮಾನ್ಯರನ್ನು ಅಲೆದಾಡಿಸಬೇಡಿ. ತಮ್ಮ ಇತಿಮಿತಿಯನ್ನು ಅರಿತು ಕೆಲಸ ಮಾಡಿ. ಇಲ್ಲಿಯವರೆಗೆ ಹೇಗೆ ಕೆಲಸ ಮಾಡಿದ್ದೀರಾ ಎನ್ನುವುದು ಬೇಡ. ಇನ್ನು ಮುಂದೆ ಹೇಗೆ ಕೆಲಸ ಮಾಡುತ್ತೀರಾ ಎನ್ನುವುದು ಮುಖ್ಯ. ಒಂದು ವೇಳೆ ಕೆಲಸ ಮಾಡಲು ಇಷ್ಠವಿಲ್ಲದಿದ್ದರೆ ನೀವಾಗಿಯೇ ನನ್ನ ಕ್ಷೇತ್ರದಿಂದ ಹೊರಟು ಹೋಗಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • 447
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved