• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದೃಢ ರಾಷ್ಟ್ರಕ್ಕೆ ಮಕ್ಕಳ ಭವಿಷ್ಯ ಸುಭದ್ರವಾಗಲಿ: ರಮೇಶ್
ಸದೃಢ ರಾಷ್ಟ್ರಕ್ಕೆ ಮಕ್ಕಳ ಭವಿಷ್ಯ ಸುಭದ್ರವಾಗಲಿ: ರಮೇಶ್
ಭದ್ರಾ ಮೇಲ್ದಂಡೆ ನೀರಾವರಿ ನಿಜಲಿಂಗಪ್ಪ ಕನಸು
ಭದ್ರಾ ಮೇಲ್ದಂಡೆ ನೀರಾವರಿ ನಿಜಲಿಂಗಪ್ಪ ಕನಸುಎಸ್ಸೆನ್ ಸ್ಮಾರಕ ಪುಣ್ಯಭೂಮಿಯಲ್ಲಿ ನಡೆದ 121ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌
ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು ನೇಣಿಗೆ ಶರಣಾದ ತಾಯಿ
ಚಳ್ಳಕೆರೆ: ತಾಲೂಕಿನ ಯಲಗಟ್ಟೆಯಲ್ಲಿ ಗೃಹಿಣಿಯೋರ್ವಳು ತನ್ನ ಎರಡು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ, ನಂತರ ತಾನೂ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ವಕೀಲ ಈರಣ್ಣಗೌಡ ಪಾಟೀಲ್‌ ಹತ್ಯೆ ಖಂಡಿಸಿ ಪ್ರತಿಭಟನೆ
ಕಲಬುರಗಿಯಲ್ಲಿ ವಕೀಲ ಈರನಗೌಡ ಪಾಟೀಲರನ್ನು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಲು ಬರುವ ಸಮಯದಲ್ಲಿ ಹಾಡಹಗಲೇ ವಕೀಲರ ಸಮವಸ್ತ್ರದಲ್ಲಿರುವಾಗ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ಬಲವಾಗಿ ಖಂಡಿಸಿದೆ. ಚಿತ್ರದುರ್ಗ ನ್ಯಾಯಾಲಯದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳಿಗೆ ಜಿ.ಪಂ ಸಿಒಇ ಭೇಟಿ
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲೆಯ ವಿವಿಧಡೆ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಮೀಪದ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಚಿತ್ರಹಳ್ಳಿಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳ ಸಮುಚ್ಚಯದ ವಸತಿ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿದರು.
- ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು
ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪರಿಣಾಮ ಮದುವೆ ನಿಂತು ಹೋದ ಘಟನೆ ತಾಲೂಕಿನ ಚಿಕ್ಕಬ್ಯಾಲದಕೆರೆಯಲ್ಲಿ ಗುರುವಾರ ನಡೆದಿದೆ. ಚಳ್ಳಕೆರೆ ಸುಕನ್ಯಾ ಹಾಗೂ ಜಿ.ಟಿ. ಮಧು ದಂಪತಿ ಮಗಳು ಯಮುನಾ ಜಿ.ಎಂ ಹಾಗೂ ಚಿಕ್ಕಬ್ಯಾಲದಕೆರೆ ನಾಗರತ್ನಮ್ಮ ಹಾಗೂ ಸಿ.ಬಿ. ಲಕ್ಷ್ಮಣ್ಣ ದಂಪತಿ ಮಗ ಮಂಜುನಾಥ್ ಅವರೊಂದಿಗೆ ಗುರುವಾರ ಚಿಕ್ಕಬ್ಯಾಲದಕೆರೆಯಲ್ಲಿ ಮದುವೆ ನಿಶ್ಚಯಿಸಲಾಗಿತ್ತು‌.
ಜಗಳೂರುನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಆಗ್ರಹ
ಜಗಳೂರನ್ನು ಮರಳಿ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಚಿತ್ರದುರ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಬಸ್ಸೊಂದರಲ್ಲಿ ಆಗಮಿಸಿದ್ದ ಐವತ್ತಕ್ಕೂ ಹೆಚ್ಚು ಹೋರಾಟ ಸಮಿತಿ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮರು ಸೇರ್ಪಡೆ ಸಂಬಂಧ ಸರ್ಕಾರ ನೀಡಿರುವ ಸೂಚನೆಗಳ ಪಾಲಿಸುವಲ್ಲಿ ಆಡಳಿತವರ್ಗ ನಿಧಾನ ಪ್ರವೃತ್ತಿ ತೋರುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಾಂತರಾಜ್ ವರದಿ ಜಾರಿಗೆ ರಾಜ್ಯ ಸರ್ಕಾರ ಮೀನಮೇಷ
ಸಂವಿಧಾನ ಬದ್ಧ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಆದತೆ ಮೇರೆಗೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥಾ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.ಒನಕೆ ಓಬವ್ವ ವೃತ್ತದಲ್ಲಿ ಜಾಥಾವನ್ನು ಸ್ವಾಗತಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.
ಮೊಳಕಾಲ್ಮುರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಸರ್ವೇ
ಬುಡಕಟ್ಟು ಸಾಂಸ್ಕೃತಿಕ ಆಚರಣೆಯನ್ನು ಒಡಲಾಳದಲ್ಲಿರಿಸಿಕೊಂಡು ಹಲವು ಸಮಸ್ಯೆಗಳನ್ನು ಹರವಿಕೊಂಡು ಕುಳಿತಿರುವ ಮೊಳಕಾಲ್ಮುರು ಕ್ಷೇತ್ರಕ್ಕೆ ಪ್ರಾಚೀನ ಬೇಡರ ಬುಡಕಟ್ಟು ಕ್ಷೇತ್ರ ಎನ್ನುವ ವಿಶೇಷ ಸ್ಥಾನ ಕಲ್ಪಿಸಲು ಸರ್ಕಾರ ಮುಂದಾಗಿದೆಯಾ? ಹೌದು ಎನ್ನುತ್ತಿವೆ ಮೂಲಗಳು. ಬುಡಕಟ್ಟು ಆಚರಣೆಯ ಮೂಲಕ ರಾಜ್ಯದ ಗಮನ ಸೆಳೆದಿರುವ ಆಂಧ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಹಿಂದುಳಿದ ಮೊಳಕಾಲ್ಮುರು ಕ್ಷೇತ್ರಕ್ಕೆ, ಅನ್ಯ ರಾಜ್ಯಗಳಲ್ಲಿ ಆದಿವಾಸಿಗಳು ಹೆಚ್ಚಾಗಿ ವಾಸಿಸುವಂತ ಪ್ರದೇಶಗಳಿಗೆ ನೀಡಿದಂತೆ ಪ್ರತ್ಯೇಕ ಸ್ಥಾನ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇದಕ್ಕೆ ಇಂಬು ನೀಡುವಂತೆ ಆರ್ಥಿಕ ಸ್ಥಿತಿ ಗತಿಯ ಕುರಿತು ಕ್ಷೇತ್ರದಲ್ಲಿ ಸರ್ವೇ ಕಾರ್ಯ ನಡೆಯುತ್ತಿರುವುದು ಸಾಕ್ಷಿ ಒದಗಿಸಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಲಿಂಗಾನುಪಾತ ತೀವ್ರ ಕುಸಿತ
ವೀರವನಿತೆ ಓಬವ್ವಳ ನಾಡಲ್ಲಿ ಮಹಿಳೆಯರ ಸಂಖ್ಯೆ ಕುಸಿಯುತ್ತಿದೆಯೇ ? ಲಿಂಗಾನುಪಾತ ತೀವ್ರ ಪ್ರಮಾಣದಲ್ಲಿ ಕುಸಿತ ಕಂಡಿರವುದು ಇಂತಹದ್ದೊಂದು ಆತಂಕ ಮೂಡಲು ಕಾರಣವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಲಿಂಗಾನುಪಾತದಲ್ಲಿ ಅಗಾಧ ಪ್ರಮಾಣದ ವ್ಯತ್ಯಾಸ ಕಂಡು ಬಂದಿದೆ. ಕಳೆದ ವರ್ಷ ಲಿಂಗಾನುಪಾತ 967 ದಾಖಲಾಗಿತ್ತು. ಅಂದರೆ 1000 ಗಂಡು ಮಕ್ಕಳಿಗೆ 967 ಹೆಣ್ಣು ಮಕ್ಕಳ ಜನನವಾಗಿದೆ. ಆದರೆ ಈ ವರ್ಷ ಅಕ್ಟೋಬರ್ ಅಂತ್ಯದವರೆಗೆ 5602-ಗಂಡು, 5292-ಹೆಣ್ಣು ಮಕ್ಕಳ ಜನನವಾಗಿದ್ದು, ಲಿಂಗಾನುಪಾತ 945 ದಾಖಲಾಗಿರುವುದು ಆತಂಕಕ್ಕೆ ಕಾರಣಾಗಿದೆ.
  • < previous
  • 1
  • ...
  • 539
  • 540
  • 541
  • 542
  • 543
  • 544
  • 545
  • 546
  • 547
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved