• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿ
ರಾಜ್ಯದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ಕಲ್ಪಿಬೇಕು ಎಂದು ಆಗ್ರಹಿಸಿ ಬಿಎಸ್‍ಪಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ದಾರಿಯ ಮಧ್ಯದಲ್ಲಿ ಡಾ.ಬಿ.ಆರ್. ಆಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಹಾರ ಹಾಕಿ ನಮಿಸಿದರು.
ಸರ್ಕಾರದ ಸುತ್ತೋಲೆ ವಿರೋಧಿಸಿ ನಾಳೆ ಪ್ರತಿಭಟನೆಗೆ ನಿರ್ಧಾರ
ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ವಿರೋಧಿಸಿ ನ. 23 ರಂದು ನಗರದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಅವೈಜ್ಞಾನಿಕ ಡಿವೈಡರ್‌ ತೆರವಿಗಾಗಿ ದಿಢೀರ್‌ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಿರ್ಮಿಸಲಾಗಿರುವ ಅವೈಜ್ಞಾನಿಕ ಡಿವೈಡರ್‌ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ನಗರಸಭೆಯ ಹಾಲಿ ಮತ್ತು ಮಾಜಿ ಸದಸ್ಯರು ಹಾಗೂ ಸಾರ್ವಜನಿಕರು ಮಂಗಳವಾರ ಬೀದಿಗಳಿದು ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‌ನಿಂದ ಬಿಡಿ ರಸ್ತೆಗೆ ಸಂಪರ್ಕಿಸುವ ಮಾರ್ಗದಲ್ಲಿ ಅವೈಜ್ಞಾನಿಕವಾಗಿ ಡಿವೈಡರ್ ನಿರ್ಮಿಸಿದ್ದು, 50 ಮೀಟರ್‌ನಷ್ಟು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರ್ಪಡೆಗೆ ಆಗ್ರಹ
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಡುಗೊಲ್ಲರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚಿತ್ರದುರ್ಗ ಜಿಲ್ಲೆಯಲ್ಲಿರುವ ಬಹುತೇಕ ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲರು ವಾಸವಾಗಿದ್ದು ದನ, ಕುರಿ ಸಾಕಾಣಿಕೆ ಮೂಲ ಕಸುಬಾಗಿದೆ. ಕಾಡಿನಲ್ಲಿ ಊರಿಂದ ಊರಿಗೆ ಮೇವು, ನೀರಿಗಾಗಿ ಅಲೆಯುತ್ತಾ ಜೀವನ ಸಾಗಿಸುತ್ತಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಕಾಡುಗೊಲ್ಲ ಸಮುದಾಯ ಶೋಷಣೆಗೆ ಒಳಗಾಗಿದೆ ಎಂದು ಧರಣಿ ನಿರತರು ನೋವು ತೋಡಿಕೊಂಡರು.
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರ್ಪಡೆಗೆ ಆಗ್ರಹ
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಡುಗೊಲ್ಲರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚಿತ್ರದುರ್ಗ ಜಿಲ್ಲೆಯಲ್ಲಿರುವ ಬಹುತೇಕ ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲರು ವಾಸವಾಗಿದ್ದು ದನ, ಕುರಿ ಸಾಕಾಣಿಕೆ ಮೂಲ ಕಸುಬಾಗಿದೆ. ಕಾಡಿನಲ್ಲಿ ಊರಿಂದ ಊರಿಗೆ ಮೇವು, ನೀರಿಗಾಗಿ ಅಲೆಯುತ್ತಾ ಜೀವನ ಸಾಗಿಸುತ್ತಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಕಾಡುಗೊಲ್ಲ ಸಮುದಾಯ ಶೋಷಣೆಗೆ ಒಳಗಾಗಿದೆ ಎಂದು ಧರಣಿ ನಿರತರು ನೋವು ತೋಡಿಕೊಂಡರು.
ಮುರುಘಾಶರಣರ ಬಂಧನದ, ಹಿಂದೆಯೇ ಬಿಡುಗಡೆ
2ನೇ ಫೋಕ್ಸೋ ಪ್ರಕರಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಹ್ನ ಬಂಧನಕ್ಕೆ ಒಳಗಾಗಿದ್ದ ಮುರುಘಾಶರಣರಿಗೆ ಸಂಜೆಯೇ ಹೈಕೋರ್ಟ ಬಿಗ್ ರಿಲೀಪ್ ನೀಡಿದೆ. ಬಂಧನಕ್ಕೆ ಆದೇಶ ನೀಡಿದ್ದ ಚಿತ್ರದುರ್ಗ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ ತಡೆ ನೀಡಿದೆ. ಒಂದನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಕಳೆದ 16 ರಂದು ಮುರುಘಾಶರಣರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಎರಡನೇ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗಬೇಕಾದ ಪ್ರಸಂಗ ಎದುರಾಗಿತ್ತು. ಶರಣರು ಸಂಜೆ 5-45ರ ಸುಮಾರಿಗೆ ಮತ್ತೆ ಜೈಲಿಗೆ ಹೋದರಾದರೂ ಹೈಕೋರ್ಟ್ ತ್ವರಿತ ಸೂಚನೆ ನೀಡಿ ಬಿಡುಗಡೆಗೆ ಆದೇಶಿಸಿದ್ದು, ಸಂಜೆ ಬಿಡುಗಡೆಯಾಗಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯತೋರಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕಿ ಡಾ.ಶಮ್ಲಾ ಇಕ್ಬಾಲ್ ಎಚ್ಚರಿಕೆ ನೀಡಿದರು. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದರು.
ಶ್ರಮ ಇಲ್ಲದೇ ಯಶಸ್ಸು ಲಭಿಸುವುದು ಅಸಾಧ್ಯ
ಸಾಧನೆ ಮಾಡಿದವರ ಹಿಂದೆ ಅವರದ್ದೇ ಆದ ಪರಿಶ್ರಮ ಇರುತ್ತದೆ. ಶ್ರಮ ಇಲ್ಲದೆ ಯಶಸ್ಸು ಲಭಿಸುವುದು ಅಸಾಧ್ಯವೆಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು.ಚಿತ್ರದುರ್ಗ ಹೊರವಲಯದಲ್ಲಿರುವ ಎಸ್ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟ ಕ ಹಾಗೂ ಚಿತ್ರದುರ್ಗ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಧನೆಗೆ ನೆಪ ಅಡ್ಡಿಯಾಗಬಾರದು. ನಮ್ಮ ಯಶಸ್ಸಿನ ಹಿಂದೆ ಪೋಷಕರ ಶ್ರಮ ಅಡಗಿರುತ್ತದೆ ಎನ್ನುವುದು ಕೂಡ ಮರೆಯಬಾರದು ಎಂದರು.
ಶ್ರಮ ಇಲ್ಲದೇ ಯಶಸ್ಸು ಲಭಿಸುವುದು ಅಸಾಧ್ಯ
ಸಾಧನೆ ಮಾಡಿದವರ ಹಿಂದೆ ಅವರದ್ದೇ ಆದ ಪರಿಶ್ರಮ ಇರುತ್ತದೆ. ಶ್ರಮ ಇಲ್ಲದೆ ಯಶಸ್ಸು ಲಭಿಸುವುದು ಅಸಾಧ್ಯವೆಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು.ಚಿತ್ರದುರ್ಗ ಹೊರವಲಯದಲ್ಲಿರುವ ಎಸ್ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟ ಕ ಹಾಗೂ ಚಿತ್ರದುರ್ಗ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಧನೆಗೆ ನೆಪ ಅಡ್ಡಿಯಾಗಬಾರದು. ನಮ್ಮ ಯಶಸ್ಸಿನ ಹಿಂದೆ ಪೋಷಕರ ಶ್ರಮ ಅಡಗಿರುತ್ತದೆ ಎನ್ನುವುದು ಕೂಡ ಮರೆಯಬಾರದು ಎಂದರು.
ಚಂದ್ರವಳ್ಳಿಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ
ಕನ್ನಡ ರಾಜ್ಯೋತ್ಸವ ಆಚರಣೆ ಅಂದಾಕ್ಷಣ ಭುವನೇಶ್ವರಿ ಮೆರವಣಿಗೆ, ಆರ್ಕೆಸ್ಟ್ರಾ ಆಯೋಜನೆ, ಕನ್ನಡ ಭಾಷೆ ಅಳಿವು ಉಳಿವಿನ ಬಗ್ಗೆ ಭಾಷಣಗಳು ಮಾಮೂಲು. ಆದರೆ ಇದರೆಲ್ಲದರಾಚೆ ವಿನೂತನ ರಾಜ್ಯೋತ್ಸವ ಆಚರಣೆಗೆ ಭಾನುವಾರ ಚಿತ್ರದುರ್ಗ ಸಾಕ್ಷಿಯಾಯಿತು. ಚಿತ್ರದುರ್ಗ ಚಂದ್ರವಳ್ಳಿಯಲ್ಲಿರುವ ಮಯೂರವರ್ಮನ ಶಾಸನದ ಮಾಹಿತಿ ಪ್ರಚುರ ಪಡಿಸುವ ಮೂಲಕ ಕನ್ನಡದ ಮೊದಲ ಸಾಮ್ರಾಜ್ಯ ಉದಯವಾದ ಐತಿಹ್ಯ ಮನನ ಮಾಡಿಕೊಡಲಾಯಿತು.ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿ ಗಮನ ಸೆಳೆದರು. ಚಂದ್ರವಳ್ಳಿಯಲ್ಲಿ ನಿತ್ಯ ನೂರಾರು ವಾಯುವಿಹಾರಿಗಳು ಜಮಾವಣೆಗೊಳ್ಳುತ್ತಿದ್ದು ಅವರೆಲ್ಲರ ಸಮ್ಮುಖದಲ್ಲಿ ಖ್ಯಾತ ಶಾಸನ ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಶಾಸನದಲ್ಲಿನ ಹೂರಣವ ಬಿಚ್ಚಿಟ್ಟರು. ಮುಂಜಾನೆ ಚುಮು ಚುಮು ಚಳಿಯ ನಡುವೆ ಶಾಸನದ ಮುಂಭಾಗವೇ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿಶೇಷ.
  • < previous
  • 1
  • ...
  • 542
  • 543
  • 544
  • 545
  • 546
  • 547
  • 548
  • 549
  • 550
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved