ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ದೀಪಾವಳಿ ದೀವಟಿಗೆ ಉತ್ಸವದ ಅಂಗವಾಗಿ ಮಂಗಳವಾರ ಅಮಾವಾಸ್ಯೆಯಂದು ಮೈಸೂರು ರಾಜವಂಶಸ್ಥರೂ ಆದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಕ್ತಾದಿಗಳೊಂದಿಗೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ದೇವರ ದರ್ಶನ ಪಡೆದರು.