ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಅನನ್ಯ: ಡಾ. ಉಮೇಶ್ ಪುತ್ರನ್

| Published : Jun 05 2025, 11:58 PM IST

ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಅನನ್ಯ: ಡಾ. ಉಮೇಶ್ ಪುತ್ರನ್
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರ ತಾಲೂಕು ಘಟಕದ ಅಡಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಂಸ್ಮರಣೆಯ ಸಂಸ್ಥಾಪನಾ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

19ನೇ ಶತಮಾನದಲ್ಲಿ ಭಾರತವನ್ನು ಆಳಿದ ರಾಜರ ಪೈಕಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್ವ ಶ್ರೇಷ್ಠರು ಎಂದು ಕಸಾಪ ಕುಂದಾಪುರ ತಾಲೂಕು ಘಟಕ ಅಧ್ಯಕ್ಷ ಉಮೇಶ್ ಪುತ್ರನ್ ಹೇಳಿದರು.ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರ ತಾಲೂಕು ಘಟಕದ ಅಡಿಯಲ್ಲಿ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಂಸ್ಮರಣೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಒಡೆಯರ್ ಅವರ ಸಂಸ್ಮರಣೆ ಮಾಡಿ ಮಾತನಾಡಿದರು.ರಾಜ್ಯದ ಪ್ರಗತಿಗೆ ಒಡೆಯರ್ ಅವರ ಕೊಡುಗೆ ಅಪಾರ. ಅವರಿಂದ ಸ್ಥಾಪಿಸಲ್ಪಟ್ಟ ಶಿಕ್ಷಣ ಸಂಸ್ಥೆಗಳು, ಉದ್ಯಮಗಳು ದೇಶದ ಹೆಮ್ಮೆಯ ಸಂಸ್ಥೆಗಳಾಗಿದೆ. ಪ್ರಜಾಸತ್ತೆಗೆ ಅತ್ಯಂತ ಹೆಚ್ಚು ಗೌರವ ಕೊಡಲು ಯತ್ನಿಸಿದ ರಾಜರುಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮೊದಲಿಗರು ಎಂದರು.ಸಮಾರಂಭದ ಉದ್ಘಾಟನೆ ಮಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ ಹಿರಿಯ ಲೇಖಕಿ ಡಾ. ಪಾರ್ವತಿ ಜಿ. ಐತಾಳ್, ಗತಿಸಿದ ಇತಿಹಾಸದ ತಪ್ಪು ಮಾಹಿತಿಗಳು ಈಗ ಸರಿದಾರಿಗೆ ತರುವಲ್ಲಿ ಅಧ್ಯಯನಕಾರರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ಕಸಾಪ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯ ನುಡಿಗಳನ್ನಾಡಿದರು.

ಜಿಲ್ಲಾ ಕೋಶಾಧಿಕಾರಿ ಮನೋಹರ್ ಪಿ. ಸ್ವಾಗತಿಸಿದರು. ಉಪನ್ಯಾಸಕ ಉದಯಕುಮಾರ್ ಶೆಟ್ಟಿ ನಿರ್ವಹಿಸಿದರು. ಉಡುಪಿ ಜಿಲ್ಲಾ ಕಸಾಪ ವಕ್ತಾರ ನರಸಿಂಹ ಮೂರ್ತಿ ರಾವ್ ಮಣಿಪಾಲ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ಅಕ್ಷತಾ ಗಿರೀಶ್ ವಂದಿಸಿದರು.