ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ 2025-26ರ ಸಾಲಿನಲ್ಲಿ 2.89 ಕೋಟಿ ರು. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ತಿಳಿಸಿದರು.

ಕುಶಾಲನಗರ : ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ 2025-26ರ ಸಾಲಿನಲ್ಲಿ 2.89 ಕೋಟಿ ರು. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ತಿಳಿಸಿದರು. ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಂಘದ ಕಾರ್ಯವ್ಯಾಪ್ತಿಯನ್ನು ಜಿಲ್ಲಾಮಟ್ಟಕ್ಕೆ ವಿಸ್ತರಿಸುವ ಚಿಂತನೆ ಹೊಂದಲಾಗಿದೆ. ಈ ಸಾಲಿನಲ್ಲಿ 439 ರು. ಕೋಟಿ ವಾರ್ಷಿಕ ವ್ಯವಹಾರ ನಡೆಸಿದ್ದು, ಸಂಘವು ಕಳೆದ 22 ವರ್ಷಗಳಿಂದಲೂ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿದ್ದು, ಈ ಬಾರಿಯು ಸಹ ಸಂಘವು ತನ್ನ ಲಾಭವನ್ನು ಕೋಟಿ ರೂಪಾಯಿಗೆ ಹೆಚ್ಚಿಸಿಕೊಂಡಿದೆ. ಸದಸ್ಯರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿರುತ್ತೇವೆ ಎಂದರು. ಸದಸ್ಯರಿಗೆ ಕಳೆದ 21 ವರ್ಷಗಳಿಂದ ಶೇ.7ರಿಂದ ಶೇ.25 ರಷ್ಟು ಡಿವಿಡೆಂಟ್ ನೀಡುತ್ತಿದ್ದು,ಈ ಬಾರಿಯೂ ಕೂಡ ಶೇ.25ರಷ್ಟು ಡಿವಿಡೆಂಡ್‌ನ್ನು ನೀಡುತ್ತಿದ್ದೇವೆ. ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು 12 ರಂದು 11 ಗಂಟೆಗೆ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆಯಲಿದೆ ಎಂದರು. ನೆರವು, ಬೆಳ್ಳಿಹಬ್ಬ ಕಟ್ಟಡ: ರಕ್ತದಾನ ಶಿಬಿರ, ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯೋಜನೆಗೆ ಸಹಕಾರ, ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಲಾಗಿದೆ. ಮುಂದಿನ 3 ವರ್ಷಗಳಿಗೆ ಸಂಘವು ಪ್ರಾರಂಭವಾಗಿ 25 ವರ್ಷ ಪೂರೈಸುತ್ತಿದ್ದು ಬೆಳ್ಳಿಹಬ್ಬ ಆಚರಿಸಲು ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಬೆಳ್ಳಿಹಬ್ಬ ನೆನಪಿಗಾಗಿ ಸ್ಮಾರಕ ಭವನವನ್ನು ನಿರ್ಮಿಸಲಾಗುವುದು ಎಂದರು.