ರಾಜಕೀಯ ಪಕ್ಷಗಳಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಶೇಷಾದ್ರಿ

| Published : Sep 17 2025, 01:05 AM IST

ರಾಜಕೀಯ ಪಕ್ಷಗಳಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಶೇಷಾದ್ರಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಎಲ್ಲಾ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸಿದ್ದು, ಮುಖ್ಯ ವಾಹಿನಿಗೆ ಬಂದು ಸೂಕ್ತ ಸ್ಥಾನಮಾನ ಪಡೆಯಲು ಹಿಂದುಳಿದ ಜಾತಿಗಳು ಸಂಘಟಿತರಾಗುವುದು ಅಗತ್ಯವಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.

ರಾಮನಗರ: ಎಲ್ಲಾ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸಿದ್ದು, ಮುಖ್ಯ ವಾಹಿನಿಗೆ ಬಂದು ಸೂಕ್ತ ಸ್ಥಾನಮಾನ ಪಡೆಯಲು ಹಿಂದುಳಿದ ಜಾತಿಗಳು ಸಂಘಟಿತರಾಗುವುದು ಅಗತ್ಯವಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಜಿಲ್ಲಾ‌ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಘೋಷಣಾ ಸಮಾರಂಭ ಉದ್ಘಾಟಿಸಿದ ಅವರು, ಹಿಂದುಳಿದ ಜಾತಿಗಳನ್ನು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲೀಕರಿಸಲು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಜೊತೆಗೆ ಹಲವು ಘಟಕಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡುವ ಕೆಲಸ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಹಿಂದುಳಿದ ಸಮುದಾಯಕ್ಕೆ ಸೇರಿದ್ದ ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಅವರ ಮಾತನ್ನು ಘೋಷಣೆಗೆ ಸೀಮಿತಗೊಳಿಸಲಿಲ್ಲ. ಬದಲಿಗೆ ಸಣ್ಣ ಸಣ್ಣ ಸಮುದಾಯದವರಿಗೆ ಅಧಿಕಾರ ಸಿಗುವಂತಾಯಿತು. ಅದರ ಪರಿಣಾಮ ರಾಜ್ಯದಲ್ಲಿ ಧರಂಸಿಂಗ್, ವೀರಪ್ಪಮೊಯ್ಲಿ, ಎಸ್.ಬಂಗಾರಪ್ಪ ಮುಖ್ಯಮಂತ್ರಿಗಳಾಗಲು, ಡಿ.ಟಿ.ರಾಮು, ಎಚ್.ಎಂ. ರೇವಣ್ಣ, ಅಬ್ದುಲ್ ಸಮದ್, ವಿಶ್ವನಾಥ್ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು ಎಂದು ಶೇಷಾದ್ರಿ ಹೇಳಿದರು.

ಅಖಿಲ ಭಾರತ ಕುಂಬಾರರ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಿವಕುಮಾರ್ ಚೌಡಶೆಟ್ಟಿ ಮಾತನಾಡಿ, ಹಿಂದುಳಿದವರು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ನಮಗೆ ದೇವರಾಜ ಅರಸು ಅವರು ಗುರುಗಳಾಗಿದ್ದಾರೆ. ಸಣ್ಣ ಪುಟ್ಟ ಸಮಾಜಗಳಿಗೆ ಅವರು ಕೊಟ್ಟ ಕೊಡುಗೆಗಳ ಪರಿಣಾಮ ಇಂದು ಸಮಾಜದ ಪ್ರಗತಿ ಜೊತೆಗೆ ಶೈಕ್ಷಣಿಕವಾಗಿ ಮುಂದುವರೆಯುತ್ತಿದೆ ಎಂದರು.

ರಾಜ್ಯದಲ್ಲಿ ಹಿಂದುಳಿದ ಜಾತಿಗಳ ಗಟ್ಟಿಯಾದ ಧ್ವನಿಗಳು ಇಲ್ಲದ ಕಾರಣ ಅಧಿಕಾರದಲ್ಲಿದ್ದ ನಮ್ಮವರನ್ನು ಅಲ್ಪ ಸಮಯದಲ್ಲಿ ರಾಜಕೀಯ ಹುನ್ನಾರ ನಡೆಸಿ ಕೆಳಗಿಳಿಸಿದ ಉದಾಹರಣೆಗಳು ಸಾಕಷ್ಟಿವೆ. ಹಾಗಾಗಿ ನಾವೆಲ್ಲರೂ ರಾಜ್ಯಾದ್ಯಂತ ಸಂಘಟನೆಯನ್ನು ಗಟ್ಟಿಗೊಳಿಸುವ ಕೆಲಸ ಮಾಡಬೇಕಿರುವುದು ನಮಗೆ ಅನಿವಾರ್ಯವಾಗಿದೆ. ಇದರಿಂದ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿ ನಮ್ಮ ಹಕ್ಕುಗಳನ್ನು ಪಡೆಯಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್, ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಅಧ್ಯಕ್ಷ ರೈಡ್ ನಾಗರಾಜು, ಸಮುದಾಯದ ಮುಖಂಡರಾದ ಡಾ.ನಾಗರಾಜು ಮಾಲೂರು, ಟಿ.ವಿ.ನಾರಾಯಣ್ ಮಾತನಾಡಿದರು‌. ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ , ಕುಂಬಾರ ಮಹಾಸಭಾದ ರಾಜ್ಯಾಧ್ಯಕ್ಷ ನಿತ್ಯಾಭರಣ ಚೌಡಶೆಟ್ಟಿ, ಮುಖಂಡರಾದ ಮಂಟೇದಯ್ಯ, ಎಂಎನ್ ಆರ್ ರಾಜು, ಮರಿಯಪ್ಪ, ಸರ್ವೆಯರ್ ಪುಟ್ಟಸ್ವಾಮಿ, ಶ್ರೀಧರ್, ಜನಾರ್ಧನ್, ಚಂದ್ರು, ರೇಣುಕಪ್ಪ, ರಂಗಪ್ಪ, ಗುರುವೇಗೌಡ, ಗಿರಿಜಮ್ಮ ಮತ್ತಿತರರು ಉಪಸ್ಥಿತರಿದ್ದರು.

ಬಾಕ್ಸ್ ..................

ಮಹಿಳಾ ಘಟಕದ ಪದಾಧಿಕಾರಿಗಳು:

ಬೆಂಗಳೂರು ದಕ್ಷಿಣ ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಶಶಿಕಲಾ ಶಿವಕುಮಾರ್ ಚೌಡಶೆಟ್ಟಿ, ಗೌರವಾಧ್ಯಕ್ಷರಾಗಿ ಪವಿತ್ರ ಆರ್. ರೆಡ್ಡಿ, ಉಪಾಧ್ಯಕ್ಷರಾಗಿ ಅರ್ಪಿತಾ, ರಾಮನಗರ ತಾಲೂಕು ಅಧ್ಯಕ್ಷರಾಗಿ ಶೃತಿ, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷರಾಗಿ ರುಕ್ಮಿಣಿ, ಕನಕಪುರ ತಾಲೂಕು ಅಧ್ಯಕ್ಷರಾಗಿ ಮಂಜುಳಾ, ಹಾರೋಹಳ್ಳಿ ತಾಲ್ಲೂಕು ಅಧ್ಯಕ್ಷರಾಗಿ ಸುಮಾ ಆಯ್ಕೆ ಯಾಗಿದ್ದಾರೆ.

ಕೋಟ್ ... ............

ನನಗೆ ವಹಿಸಿರುವ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ಅಧಿಕಾರವಲ್ಲ ಬದಲಿಗೆ ಜವಬ್ದಾರಿಯಾಗಿದೆ‌. ಜಿಲ್ಲೆಯಾದ್ಯಂತ ಹಿಂದುಳಿದ ಜಾತಿಗಳ ಮಹಿಳೆ ಯರನ್ನು ಸಂಘಟಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತೇನೆ. ಜೊತೆಗೆ ಸಮಾಜದಲ್ಲಿ ಮಹಿಳೆಯರು ಸಂಘಟನೆಯ ದೊಡ್ಡ ಶಕ್ತಿ ಎಂಬು ದನ್ನು ಎಲ್ಲರ ಸಹಕಾರದಲ್ಲಿ ಮಾಡಿ ತೋರಿಸುತ್ತೇನೆ.

-ಶಶಿಕಲಾ ಶಿವಕುಮಾರಚೌಡಶೆಟ್ಟಿ, ಜಿಲ್ಲಾಧ್ಯಕ್ಷರು, ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಮಹಿಳಾ ಘಟಕ, ಬೆಂ.ದಕ್ಷಿಣ.

15ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಜಿಲ್ಲಾ‌ ಮಹಿಳಾ ಘಟಕದ ನೂತನ ಅಧ್ಯಕ್ಷೆ ಶಶಿಕಲಾ ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.