ಸಾರಾಂಶ
ಕನಕಪುರ: ರೈತರ ಪಾಲಿಗೆ ಕಬ್ಬಿಣದ ಕಡಲೆಯಾಗಿದ್ದ ಭೂ ಮಾಪನ ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ವಿನೂತನ ತಂತ್ರಜ್ಞಾನದಡಿ ಮರು ಭೂ ಮಾಪನ ಮಾಡಿ ಸೂಕ್ತ ದಾಖಲೆಗಳನ್ನು ಒದಗಿಸುವ ಹೊಸ ಮಾದರಿ ಜಾರಿಗೆ ತಂದು ಇತಿಹಾಸ ನಿರ್ಮಿಸಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹಳ ಹಿಂದಿನಿಂದಲೂ ಹಳ್ಳಿಗಾಡಿನ ಜನಕ್ಕೆ ಜಮೀನು ಸರ್ವೆ ಕಾರ್ಯ ದುಸ್ತರವಾಗಿ ತೊಂದರೆ ಅನುಭವಿಸುತ್ತಿದ್ದರು. ಇದನ್ನ ಮನಗಂಡ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಸೆಯಿಂದ ಮೊಟ್ಟ ಮೊದಲ ಬಾರಿಗೆ ಪ್ರಾಯೋಗಿಕವಾಗಿ ದೊಡ್ಡ ಆಲಹಳ್ಳಿಯಿಂದಲೇ ಆರಂಭಿಸಿ ಯಶಸ್ವಿಯಾಗಿದೆ ಎಂದು ಹೇಳಿದರು.ಹೋಬಳಿ ವ್ಯಾಪ್ತಿಯ 35 ಕಂದಾಯ ಗ್ರಾಮಗಳ ಪೈಕಿ 33 ಗ್ರಾಮಗಳಲ್ಲಿ ವಿನೂತನ ತಂತ್ರಜ್ಞಾನ (ರೋವರ್) ಮೂಲಕ ಸರ್ವೆ ಮಾಡಿ 23,469 ರೈತರ 97 ಸಾವಿರ ಎಕರೆ ಜಮೀನಿಗೆ ಹೊಸ ಪೋಡಿಯುಕ್ತ ದಾಖಲೆಗಳನ್ನು ನೀಡುವ ಮೂಲಕ ರಾಷ್ಟ್ರದಲ್ಲೇ ಹೊಸ ಮಾದರಿ ನಿರ್ಮಾಣ ಮಾಡಿದೆ. ಮುಂದಿನ ಪೀಳಿಗೆಗೆ ಅನುಕೂಲ ಆಗಲಿರುವುದರಿಂದ ಈ ಯೋಜನೆಯನ್ನು ರಾಮನಗರ ಜಿಲ್ಲೆ ಹಾಗೂ ರಾಜ್ಯಾದ್ಯಂತ ವಿಸ್ತರಣೆ ಮಾಡುವಂತೆ ಮನವಿ ಮಾಡಿ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಹೊಸ ಸಾರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಿದರು.
ಕೆ ಕೆ ಪಿ ಸುದ್ದಿ 03:ದೊಡ್ಡಆಲಹಳ್ಳಿ ಗ್ರಾಮದಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಮಾತನಾಡಿದರು.