ಸಾರಾಂಶ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬೆಳಿಗ್ಗೆ ಆಗಮಿಸಿದ ಇವರು ಶ್ರೀಮಠದ ಆವರಣದಲ್ಲಿರುವ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆ ದರ್ಶನ ಪಡೆದರು.
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬೆಳಿಗ್ಗೆ ಆಗಮಿಸಿದ ಇವರು ಶ್ರೀಮಠದ ಆವರಣದಲ್ಲಿರುವ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆ ದರ್ಶನ ಪಡೆದರು.
ನಂತರ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ, ಶ್ರೀ ವಿದ್ಯಾಶಂಕರ,ಶ್ರೀ ಸುಬ್ರಮಣ್ಯ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು. ಶ್ರೀಮಠದ ನರಸಿಂಹವನದಲ್ಲಿನ ಶ್ರೀ ಗುರುನಿವಾಸಕ್ಕೆ ತೆರಳಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಶ್ರೀ ಮಠದ ಆವರಣದಲ್ಲಿರುವ ಅಕ್ಷರಾಭ್ಯಾಸ ಮಂಟಪದಲ್ಲಿ ಪುತ್ರ ಚಿ.ಅವ್ಯಾನ್ ದೇವ್ ಗೆ ಅಕ್ಷರಾಭ್ಯಾಸ ಮಾಡಿಸಿದರು.30 ಶ್ರೀ ಚಿತ್ರ 1- ಶೃಂಗೇರಿ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ಶಾರದಾಂಬೆಯ ದರ್ಶನ ಪಡೆದರು.