ಸಾರಾಂಶ
ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಡಿಸೆಂಬರ್ 31ರಿಂದ ಜನವರಿ 3ರ ವರೆಗೆ ಪ್ರತಿದಿನ ಸಂಜೆ 6.45ಕ್ಕೆ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನೀನಾಸಂ ತಿರುಗಾಟ ತಂಡದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.
ಡಿ.31 ಮತ್ತು ಜ.1ರಂದು ಮೂಲ ಭವಭೂತಿಯ, ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ಮಾಲತಿ ಮಾಧವ ಹಾಗೂ ಜ.2 ಮತ್ತು 3ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ, ವಿದ್ಯಾನಿಧಿ ವನಾರಸ್ ನಿರ್ದೇಶಿಸಿದ ಅಂಕದ ಪರದೆ ನಾಟಕಗಳ ಪ್ರದರ್ಶನ ನಡೆಯಲಿದೆ.ಈ ವರ್ಷದ ಅತ್ಯುತ್ತಮ ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀನಾಸಂ ತಿರುಗಾಟದ ನಾಟಕಗಳ್ನು ಹೆಚ್ಚು ಜನರು ನೋಡಬೇಕೆಂಬ ಕಾರಣಕ್ಕೆ ಎರಡೆರಡು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.