ನಗರಸಭೆ ಸದಸ್ಯರ ಅಧ್ಯಯನ ಪ್ರವಾಸಕ್ಕೆ ಆಕ್ಷೇಪ

| Published : Oct 24 2025, 01:00 AM IST

ಸಾರಾಂಶ

ನಗರಸಭೆ ಸದಸ್ಯರುಗಳ ಅಧಿಕಾರವಧಿ ಅ.31ಕ್ಕೆ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅಧ್ಯಯನದ ಹೆಸರಲ್ಲಿ ಪ್ರವಾಸ ಹೊರಟಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಗುರುವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ನಗರಸಭೆ ಸದಸ್ಯರುಗಳ ಅಧಿಕಾರವಧಿ ಅ.31ಕ್ಕೆ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅಧ್ಯಯನದ ಹೆಸರಲ್ಲಿ ಪ್ರವಾಸ ಹೊರಟಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಗುರುವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ನಗರದ 35 ವಾರ್ಡ್‍ಗಳಲ್ಲಿ ಸಾರ್ವಜನಿಕರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕುಡಿಯುವ ನೀರು, ರಸ್ತೆ, ಬೀದಿ, ದೀಪ ಚರಂಡಿ ವ್ಯವಸ್ಥೆಗಳಿಲ್ಲ. ನಗರದ ಪ್ರವಾಸಿ ಮಂದಿರದಿಂದ ಹಿಡಿದು ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ ಹಾಗೂ ಮೆದೆಹಳ್ಳಿ ರಸ್ತೆ ಕಿಷ್ಕಿಂದೆಯಿಂದ ಕೂಡಿದ್ದು, ವಾಹನಗಳ ದಟ್ಟಣೆ ಜಾಸ್ತಿಯಾಗಿದೆ. ಘನತ್ಯಾಜ್ಯ ನಿರ್ವಹಣೆ ಅಧ್ಯಯನದ ಹೆಸರಿನಲ್ಲಿ ಅಹಮದಾಬಾದ್, ಚಂಢೀಗಡ ನಗರಗಳಿಗೆ ನಗರಸಭೆ ಸದಸ್ಯರುಗಳು ಪ್ರವಾಸ ಹೊರಟಿರುವುದು ಯಾವ ಪುರುಷಾರ್ಥಕ್ಕೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಪ್ರಶ್ನಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ಯುವ ಘಟಕದ ಅಧ್ಯಕ್ಷ ನಾಗರಾಜ್‍ಮುತ್ತು, ತಿಪ್ಪೇಸ್ವಾಮಿ, ವಿಜಯಬಾಬು, ಅವಿನಾಶ್, ಅಖಿಲೇಶ್, ಶಶಿ, ನಾಗೇಶ್, ಚಂದನ ಸಿ. ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.