26ರಂದು ಗುಂಡಿಬೈಲು ಹಿ.ಪ್ರಾ.ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

| Published : Jan 14 2025, 01:01 AM IST

26ರಂದು ಗುಂಡಿಬೈಲು ಹಿ.ಪ್ರಾ.ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಗುರುವಂದನಾ ಕಾರ್ಯಕ್ರಮವನ್ನು ಜ.26ರಂದು ದೊಡ್ಡಣಗುಡ್ಡೆಯ ಸರ್ಕಾರಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಗುರುವಂದನಾ ಕಾರ್ಯಕ್ರಮವನ್ನು ಜ.26ರಂದು ದೊಡ್ಡಣಗುಡ್ಡೆಯ ಸರ್ಕಾರಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ರಾವ್ ಮಾತನಾಡಿ, ಸಂಜೆ 4 ರಿಂದ 5ರ ವರೆಗೆ ಹಳೆ ವಿದ್ಯಾರ್ಥಿ ಮತ್ತು ಗುರುಗಳ ಕುಶಲೋಪರಿ ಮಾತುಕತೆ ನಡೆಯಲಿದೆ. ಸಂಜೆ 6ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, 27 ಮಂದಿ ನಿವೃತ್ತ ಶಿಕ್ಷಕರಿಗೆ ಗುರುವಂದನೆ ನಡೆಯಲಿದೆ ಎಂದರು.ಗುರುವಂದನಾ ಸಮಿತಿ ಗೌರವಾಧ್ಯಕ್ಷ, ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರು ಶ್ರೀಪಾದರು ಆರ್ಶೀವಚನ ನೀಡಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸಂಜೆ 8ರಿಂದ 9ರ ವರೆಗೆ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 9ರಿಂದ ಉಡುಪಿಯ ಶ್ರೀಕೃಷ್ಣ ಕಲಾವಿದರಿಂದ ತುಳು ನಾಟಕ ‘ಆನಿದ ಮನದಾನಿ’ ಪ್ರದರ್ಶನಗೊಳ್ಳಲಿದೆ.ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸಂತೋಷ್ ಪಾಲನ್, ಕೋಶಾಧಿಕಾರಿ ಗುರುಪ್ರಸಾದ್ ಶರ್ಮ, ಪ್ರಮುಖರಾದ ಮಮತಾ, ಮೊಹಮ್ಮದ್, ಶೆಹರಾಝ್, ಸೈಫುಲ್ಲಾ, ಸಂಶುದ್ದೀನ್ ಉಪಸ್ಥಿತರಿದ್ದರು.