ಸಾರಾಂಶ
ಶ್ರೀ ಶಿವಾನಂದ ಪುರಿ ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು, ಜೊತೆಗೆ ಸ್ವಾಮೀಜಿ ಅವರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು
ಕನ್ನಡಪ್ರಭ ವಾರ್ತೆ ಮೈಸೂರು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘದ ಜಿಲ್ಲಾ ಸಮಿತಿಯಿಂದ ಸಮಾಜ ಸೇವಾ ಕಾರ್ಯದ ಮೂಲಕ ಮಂಗಳವಾರ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.ಹುಟ್ಟುಹಬ್ಬದ ಪ್ರಯುಕ್ತ ಮೊದಲಿಗೆ ಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ನು ಹಾಗೂ ಸಿಹಿ ತಿಂಡಿಯನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿತು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಿ. ಸುಬ್ರಹ್ಮಣ್ಯ ಮಾತನಾಡಿ, ಶ್ರೀ ಶಿವಾನಂದ ಪುರಿ ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು, ಜೊತೆಗೆ ಸ್ವಾಮೀಜಿ ಅವರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು.ಮುಖ್ಯಅತಿಥಿಗಳಾಗಿ ಅರುಣ್ ಸ್ವಾಮೀಜಿ, ಮಾಜಿ ಉಪ ಮೇಯರ್ ಮಹಾದೇವಮ್ಮ, ಮೈಸೂರು ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಸವರಾಜು, ಪುಟ್ಟಸ್ವಾಮಿ, ಮಹಾದೇವಮ್ಮ, ಜಯ ಎಂ.ಎನ್. ಚೇತನ್ ಗೌಡ, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಯ ಅಬುಜ, ಹರ್ಷ, ಚೈತ್ರಾ, ಅಂಗನವಾಡಿ ಶಿಕ್ಷಕಿ ಸುಜಾತಾ, ಕಾಂಜೀಗೌಡ ಮತ್ತು ಪುನೀತ್ ರಾಯಣ್ಣ ಇದ್ದರು.