ಕುಣಿಗಲ್: ಕಾರು ಟೈರ್ ಸಿಡಿದು ಓರ್ವ ಸಾವನ್ನಪ್ಪಿದ್ದು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗೇಟ್ ಬಳಿ ನಡೆದ ಘಟನೆ. ಮಂಡ್ಯ ಮೂಲದ ಆಕರ್ಷ (28) ಕಾರು ಮರಕ್ಕೆ ಗುದ್ದಿದ ರಭಸಕ್ಕೆ ಮೃತಪಟ್ಟಿದ್ದಾನೆ. ಶಶಾಂಕ್ ಜ್ಞಾನೇಶ್ವರಿ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಮಂಡ್ಯ ಮೂಲದ ನಾಲ್ವರು, ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ವಾಪಸ್ ತೆರಳುವಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ಕಾರು ಟೈರ್ ಸಿಡಿದು ಓರ್ವ ಸಾವು, ಮೂವರಿಗೆ ಗಾಯ
: ಕಾರು ಟೈರ್ ಸಿಡಿದು ಓರ್ವ ಸಾವನ್ನಪ್ಪಿದ್ದು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗೇಟ್ ಬಳಿ ನಡೆದ ಘಟನೆ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.