ಸಾರಾಂಶ
ಚಾಮರಾಜನಗರ: ಭಾರತ ಸೇವಾದಳದ ಸಂಘಟನೆಗೆ ಹೆಚ್ಚು ಒತ್ತು ಕೊಡುವ ಜೊತೆಗೆ ಜಿಲ್ಲಾ ಮಟ್ಟದಲ್ಲಿ ಮಕ್ಕಳ ನಾಯಕತ್ವ ಶಿಬಿರಗಳನ್ನು ಹೆಚ್ಚೆಚ್ಚು ಆಯೋಜನೆ ಮಾಡಬೇಕು ಎಂದು ಜಿಲ್ಲಾಧ್ಯಕ್ಷ ಬಿ.ವಿ.ವೆಂಕಟಪ್ಪ ನಾಗಪ್ಪಶೆಟ್ಟಿ ತಿಳಿಸಿದರು.
ನಗರದ ಭಾರತ ಸೇವಾದಳದ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಭಾರತ ಸೇವಾದಳದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಎಲ್ಲ ತಾಲೂಕು ಕೇಂದ್ರಗಳಲ್ಲಿ ಮಕ್ಕಳ ಪುನಶ್ಚೇತನ ಶಿಬಿರ, ರಾಷ್ಟ್ರ ಧ್ವಜದ ಬಗ್ಗೆ ಮಾಹಿತಿ, ಶಿಸ್ತು, ಸಂಯಮ ಮತ್ತು ದೇಶದ ಏಕತೆಗಾಗಿ ನಾಯಕತ್ವದ ಶಿಬಿರಗಳನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಬೇಕು ಎಂದರು. ನಮ್ಮ ಭಾರತ ಸೇವಾದಳದ ಜಿಲ್ಲಾ ಸಮಿತಿಯಲ್ಲಿ ಎಲ್ಲ ರಾಷ್ಟ್ರೀಯ ಮಹಾನೀಯರ ಜಯಂತಿಗಳನ್ನು ಗೌರವಯುತವಾಗಿ ನಡೆಸಿಕೊಂಡು ಬರುತ್ತಿರುವುದು ಸಂತೋಷದ ವಿಷಯ. ನಮ್ಮ ಜಿಲ್ಲಾ ಸಮಿತಿಗೆ ಕೇಂದ್ರ ಸಮಿತಿಯಿಂದ ಹೆಚ್ಚಿನ ಪ್ರೋತ್ಸಾಹ ನೀಡುವುದರ ಮೂಲಕ ಸಹಕಾರ ನೀಡಬೇಕು ಎಂದರು.ಇದೇ ಸಂದರ್ಭದಲ್ಲಿ ನಿವೃತ್ತರಾದ ಶಿಕ್ಷಕ ಜೋಸೆಫ್ ಅವರನ್ನು ಸನ್ಮಾನಿಸಿದರು.ನಂತರ ಮಾತನಾಡಿ, ಜೋಸೆಫ್ ಅವರು ಭಾರತ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಕೆಲಸ ವಹಿಸಿಕೊಂಡರೂ ಸಹ ಆ ಕೆಲಸದಲ್ಲಿ ಬದ್ಧತೆ, ಛಲ, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಜೋಸೆಫ್ ರವರ ಮುಂದಿನ ಜೀವನ ಸುಖಕರವಾಗಿರಲೆಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಎಸ್.ನಾಗರಾಜು, ಮಹೇಶ್ ಜಿ ಬಳಿಗಾರ್, ಕಾರ್ಯದರ್ಶಿ ವಿ.ಮಹದೇವಯ್ಯ, ಕೋಶಾಧ್ಯಕ್ಷರಾದ ವಿ.ಶ್ರೀನಿವಾಸ ಪ್ರಸಾದ್, ಕೇಂದ್ರ ಸಮಿತಿಯ ಸದಸ್ಯರಾದ ಎಂ ಬಿ ಲಿಂಗರಾಜು, ಸಂಘಟನಾ ಕಾರ್ಯದರ್ಶಿಗಳಾದ ಎನ್.ಜೋಸೆಫ್, ಜಿಲ್ಲಾ ಸಮಿತಿ ಸದಸ್ಯರಾದ ಷಡಕ್ಷರಿಸ್ವಾಮಿ.ಪಿ., ಮತ್ತು ವೆಂಕಟೇಶ್ ನಾಯಕ್, ಜಿಲ್ಲಾ ಸಂಘಟಕ ಈ.ಅರುಣ್ ಹಾಜರಿದ್ದರು.