ಯುವ ಪ್ರತಿಭೆಗಳಿಗಾಗಿ ಪ್ರತಿವರ್ಷ ರಾಜ್ಯ ಮಟ್ಟದ ಸ್ಪರ್ಧೆ

| Published : Feb 05 2024, 01:50 AM IST

ಸಾರಾಂಶ

ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮೊದಲಾದವುಗಳಿಗೆ ಹೆಸರಾದ ಮೈಸೂರಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಲಾಧಾರೆ ಟ್ರಸ್ಟ್ ಆರಂಭಿಸಲಾಯಿತು. ಎಲ್ಲರ ಸಹಕಾರದಿಂದ ಪ್ರತಿ ವರ್ಷ ಮಕ್ಕಳಿಗೆ ಹತ್ತು ಹಲವು ವೇದಿಕೆಗಳನ್ನು ಒದಗಿಸಲಾಗುತ್ತಿದೆ

- ಕಲಾಧಾರೆ ಕಲ್ಚರಲ್ಲ್ ಟ್ರಸ್ಟ್ ನಿಂದ ವಿವಿಧ ಸ್ಪರ್ಧೆಗಳು

- ಕಲಾಧಾರೆ ಕಲ್ಚರಲ್ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಚಾಮರಾಜ್ಕನ್ನಡಪ್ರಭ ವಾರ್ತೆ ಮೈಸೂರು

ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ಕಲಾಧಾರೆ ಕಲ್ಚರಲ್ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ಚಾಮರಾಜ್ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಲಾಧಾರೆ ಕಲ್ಚರಲ್ ಟ್ರಸ್ಟ್, ಮಾಸ್ಟರ್ ಎನ್ ಬ್ಲಾಸ್ಟರ್ ಡ್ಯಾನ್ಸ್ ಗ್ರೂಪ್ ವತಿಯಿಂದ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ 23ನೇ ವರ್ಷದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಉತ್ತಮ ಪ್ರೋತ್ಸಾಹ ಸಿಗುತ್ತಿದೆ ಎಂದರು.

ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮೊದಲಾದವುಗಳಿಗೆ ಹೆಸರಾದ ಮೈಸೂರಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಲಾಧಾರೆ ಟ್ರಸ್ಟ್ ಆರಂಭಿಸಲಾಯಿತು. ಎಲ್ಲರ ಸಹಕಾರದಿಂದ ಪ್ರತಿ ವರ್ಷ ಮಕ್ಕಳಿಗೆ ಹತ್ತು ಹಲವು ವೇದಿಕೆಗಳನ್ನು ಒದಗಿಸಲಾಗುತ್ತಿದೆ ಎಂದರು.

ಪೋಷಕರು ಸಹ ಮಕ್ಕಳ ಅಭಿರುಚಿ ಗಮನಿಸಿ, ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದರು. ಸ್ಪರ್ಧೆಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಉದ್ಘಾಟಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿ ಎಚ್.ಪಿ. ರವಿಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಭೂಸ್ವಾಧೀನಾಧಿಕಾರಿ ಆರ್. ಮಂಜುನಾಥ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ನೃಪತುಂಗ ಕನ್ನಡ ಶಾಲೆ ಕಾರ್ಯದರ್ಶಿ ಸವಿತಾ ಪ. ಮಲ್ಲೇಶ್, ಉಪಾಧ್ಯಕ್ಷ ಸ.ರ. ಸುದರ್ಶನ, ಶ್ರೀ ಮುರುಗನ್ ಮೆಡಿಕಲ್ಲ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಎನ್. ನರೇಂದ್ರ ಬಾಬು, ಕಡಕೊಳ ವಿಜಯಾ ಶ್ರೀನಿವಾಸ್ ಇಂಡೇನ್ ಮಾಲೀಕ ಡಿ. ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿದ್ದರು.

ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಭರತನಾಟ್ಯ, ಜಾನಪದ ನೃತ್ಯ, ಪಾಶ್ಚಿಮಾತ್ಯ ನೃತ್ಯ, ಚಲನಚಿತ್ರಗೀತೆಗಳ ಹಾಡುಗಾರಿಕೆ, ಚಿತ್ರಕಲೆ, ಏಕಪಾತ್ರಾಭಿನಯ, ವೇಷಭೂಷಣ ಸ್ಪರ್ಧೆಗಳು ನಡೆದವು. ವಿಜೇತರಿಗೆ ಪ್ರಮಾಣಪತ್ರ,ಗೌರವ ಪುರಸ್ಕಾರ ನೀಡಲಾಯಿತು.

ಆಯಾಮ ಅಕಾಡೆಮಿ ಸಂಸ್ಥಾಪಕ ನಿರ್ದೇಶಕಿ ಡಾ.ಎಸ್.ವಿ. ಶಾಂಭವಸ್ವಾಮಿ, ನೃತ್ಯ ನಿರ್ದೇಶಕರಾದ ರಾಜು ಮಾಸ್ಟರ್, ಮಹೇಶ್ ಜೈನ್, ಪ್ರಮೋದ್ ಗೌತಮ್, ರಂಗಭೂಮಿ ಕಲಾವಿದ ರಂಗಸ್ವಾಮಿ, ಸಂಗೀತ ನಿರ್ದೇಶಕ ರಾಬರ್ಟ್ ಇ. ಕವನ್ರಾಗ್ಗ್ ತೀರ್ಪುಗಾರರಾಗಿದ್ದರು.

ಕಲಾಧಾರೆ ಕಲ್ಚರಲ್ ಟ್ರಸ್ಟಿನ ಕಾರ್ಯದರ್ಶಿ ಜ್ಯೋತಿ ಚಾಮರಾಜ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಉಮಾಪತಿ, ನಿರ್ದೇಶಕರಾದ ಬಸಂತಕುಮಾರ್, ಬಾಲಮುರಳಿ, ಎನ್. ಚಂದ್ರಶೇಖರ್, ಶ್ರೀದೇವಿ, ಸಿ. ವಿಜಯಲಕ್ಷ್ಮಿ, ರಾಜೇಶ್ವರಿ, ಸುಷ್ಮಾ, ಗಂಗಾ, ಸಂಘಟನಾ ಕಾರ್ಯದರ್ಶಿ ಸಹನಾ ಇದ್ದರು.