ಹಳೆಯಂಗಡಿ ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ವತಿಯಿಂದ ಹಳೆಯಂಗಡಿಯ ಶ್ರೀ ನಾರಾಯಣ ಸನಿಲ್ ಸಭಾಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭದಲ್ಲಿ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು.
ಮೂಲ್ಕಿ: ಪಡುಪಣಂಬೂರು ವ್ಯವಸಾಯಿಕ ಸಹಕಾರ ಸಂಘವು ಬ್ಯಾಂಕಿಂಗ್ ಜೊತೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ನೀಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಾಧಕರಾಗಿ ಪಡೆದುಕೊಂಡ ಸಹಾಯವನ್ನು ಮರೆಯಬಾರದೆಂದು ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್ ಮಾಜಿ ನಿರ್ದೇಶಕ ಭೋಜ್ ರಾಜ್ ಕರ್ಕೇರ ಹೇಳಿದರು.
ಹಳೆಯಂಗಡಿ ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ವತಿಯಿಂದ ಹಳೆಯಂಗಡಿಯ ಶ್ರೀ ನಾರಾಯಣ ಸನಿಲ್ ಸಭಾಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭದಲ್ಲಿ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್.ಎಸ್.ಸತೀಶ್ ಭಟ್ ಮಾತನಾಡಿ ಸಂಘದ ಅಭಿವೃದ್ಧಿಗೆ ನಿರ್ದೇಶಕರ ಹಾಗೂ ಸದಸ್ಯರ ಕೊಡುಗೆ ಅಪಾರ. ನಮ್ಮ ಸಂಸ್ಥೆಯಿಂದ ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆಯೆಂದು ತಿಳಿಸಿದರು. ಸುಮಾರು 308 ವಿದ್ಯಾರ್ಥಿಗಳಿಗೆ 8 ಲಕ್ಷ ಮೌಲ್ಯದ ವಿದ್ಯಾನಿಧಿ ವಿತರಿಸಲಾಯಿತು.ಸಂಘದ ಉಪಾಧ್ಯಕ್ಷೆ ಮೀರಾ ಬಾಯಿ ಕೆ. ನಿರ್ದೇಶಕರಾದ ವಿನೋದ್ ಕುಮಾರ್ ಬೊಳ್ಳೂರು, ಎಚ್. ವಸಂತ್ ಬೆರ್ನಾರ್ಡ್, ಧರ್ಮಾನಂದ ಶೆಟ್ಟಿಗಾರ್, ಅಶೋಕ್ ಬಂಗೇರ, ಸೇಸಪ್ಪ ಟಿ. ಸಾಲ್ಯಾನ್, ಸಂಧ್ಯಾ, ಮುಖೇಶ್ ಸುವರ್ಣ, ಶಿವರಾಮ ಶೆಟ್ಟಿ , ರೋಶನಾಬಿ ಧನಂಜಯ ಕುಮಾರ್, ಸೊಸೈಟಿಯ ಆರ್ಥಿಕ ಬ್ಯಾಂಕಿನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ, ನಾಮ ನಿರ್ದೇಶಕರಾದ ಹಿಮಕರ ಆರ್ ಪುತ್ರನ್, ಮನೋಜ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್ ಉಪಸ್ಥಿತರಿದ್ದರು. ಕಾರ್ಯನಿರ್ವಣಾಧಿಕಾರಿ ಹಿಮಕರ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶ್ರೀಕಾಂತಿ ಶೆಟ್ಟಿ ವಂದಿಸಿದರು. ಸಿಬ್ಬಂದಿ ಅಭಿಷೇಕ್ ನಿರೂಪಿಸಿದರು.