• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆನರಸೀಪುರದಲ್ಲಿ ಜನಪದ ಗೀತೆ ಗಾಯನ ಸ್ಪರ್ಧೆ
ಶ್ರೀ ಮಹಾಗಣಪತಿ ಪೆಂಡಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಜಾನಪದ ಗೀತೆಗಳ ಗಾಯನ ಸ್ಪರ್ಧೆಯು ಪ್ರೇಕ್ಷಕರ ಮನ ಸೂರೆಗೊಂಡಿತು. ಸ್ಪರ್ಧೆಯಲ್ಲಿ ಪಟ್ಟಣದ ಅಂಚೆ ಕಚೇರಿಯ ನೌಕರ ಎಚ್.ಆರ್.ಗಣೇಶ್ ಪ್ರಥಮ, ಟಾಪರ್ ಕಾಲೇಜಿನ ವಿದ್ಯಾರ್ಥಿ ತರುಣ್ ಕುಮಾರ್(ಮೆಣಗನಹಳ್ಳಿ) ದ್ವಿತೀಯ, ಹರದನಹಳ್ಳಿ ಮೊರಾರ್ಜಿ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬೃಂದ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪಡೆದರು. ಕಡುವಿನ ಹೊಸಹಳ್ಳಿ ಸರ್ಕಾರಿ ಶಾಲೆಯ ೪ನೇ ತರಗತಿ ವಿದ್ಯಾರ್ಥಿನಿ ನಿಹಾರಿಕಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರಳಾಗಿ ಸಮಾಧಾನಕರ ಬಹುಮಾನ ನಗದು ಹಾಗೂ ಪ್ರಶಸ್ತಿ ಪತ್ರ ಪಡೆದರು.
ಯೋಗಾಭ್ಯಾಸದಿಂದ ರೋಗನಿರೋಧಕ ಶಕ್ತಿ ಹೆಚ್ಚಳ
ವೇಗದ ಜೀವನಶೈಲಿಯಿಂದ ಉಂಟಾಗುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು, ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಮತ್ತು ರೋಗಗಳಿಂದ ದೂರವಿರಲು ಯೋಗ ಹಾಗೂ ಧ್ಯಾನಗಳು ಅನಿವಾರ್ಯವಾಗಿವೆ. ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಆಧುನಿಕ ಜೀವನಕ್ಕೆ ಶಾಂತಿಯನ್ನು ತರುವ ಭಾರತದ ಅಮೂಲ್ಯ ಕೊಡುಗೆಗಳಾಗಿವೆ. ಪತಂಜಲಿ ಋಷಿಗಳು ನೀಡಿದ ಈ ಕೊಡುಗೆಯನ್ನು ಸರಿಯಾಗಿ ಬಳಸಿಕೊಂಡು, ದೇಹ ಮತ್ತು ವಯಸ್ಸಿಗೆ ತಕ್ಕಂತೆ ಯೋಗಾಭ್ಯಾಸವನ್ನು ಮಾಡಬೇಕು ಎಂದು ಸಲಹೆ ನೀಡಿದರು. ಸದೃಢ ದೇಹ ಮತ್ತು ಉತ್ತಮ ಯೋಗಗಳ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.
ಗ್ರಾಮೀಣ ಪ್ರದೇಶದ ವಂಚಿತ ಸಮುದಾಯಕ್ಕೆ ಶ್ರೀಗಳಿಂದ ಶಿಕ್ಷಣ ಭಾಗ್ಯ
ಸುತ್ತೂರು ಕ್ಷೇತ್ರದ ಲಿಂಗೈಕ್ಯ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹು ಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು, ಬೃಹತ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ರಾಜಗುರುತಿಲಕ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಕಾರ್ಯ ಮಹತ್ವದ್ದಾಗಿದೆ ಎಂದು ಶ್ರೀ ಕಲ್ಯಾಣಸ್ವಾಮಿಗಳು ತಿಳಿಸಿದರು. ಮೈಸೂರಿನ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಸಮಾಜಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರಿಗೆ ೧೯೭೦ ರಲ್ಲಿ ’ರಾಜಗುರುತಿಲಕ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. ಜತೆಗೆ ಮರಣೋತ್ತರವಾಗಿ, ಮೈಸೂರು ವಿಶ್ವವಿದ್ಯಾನಿಲಯವು ೧೯೮೯ ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು ಎಂದು ವಿವರಿಸಿದರು.
ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ
ಪ್ರತಿಯೊಬ್ಬರು ಪೌಷ್ಟಿಕ ಆಹಾರ ಪದ್ಧತಿಯನ್ನು ತಮ್ಮ ಪ್ರತಿದಿನದ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಂಡರೆ ಹೆಚ್ಚು ಆರೋಗ್ಯವಂತರಾಗುವ ಜೊತೆಗೆ ಕಾಯಿಲೆಗಳನ್ನು ನಿಯಂತ್ರಿಸಲು ಸುಲಭವಾಗುತ್ತದೆ ಎಂದು ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಸಿಡಿಪಿಒ ಇಂದ್ರ ಅಭಿಪ್ರಾಯಪಟ್ಟರು. ತಾಲೂಕಿನಲ್ಲಿ ಗರ್ಭಿಣಿಯರಲ್ಲಿ ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಬರದಂತ ರೀತಿಯಲ್ಲಿ ಇಲಾಖೆ ವತಿಯಿಂದ ಕೆಲಸ ನಿರ್ವಹಿಸಲಾಗುತ್ತಿದೆ. ತಾಲೂಕಿನ ಅಂಗನವಾಡಿ ಕೇಂದ್ರಗಳ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿ ಫಲಾನುಭವಿಗಳನ್ನು ಗುರುತಿಸಿ ನೀಡಲಾಗುತ್ತಿದೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಎಂಸಿಇ ಪ್ರಾಧ್ಯಾಪಕರು
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಂಶೋಧನೆ ವಿಷಯಗಳಿಗೆ ಸಂಬಂಧಿಸಿದ ಡೀನ್ ಡಾ. ಮಧು ಪಿ ಹಾಗೂ ಅಸೋಸಿಯೇಟ್ ಡೀನ್ ಡಾ. ಯಶಸ್ ಗೌಡ ಟಿ ಜಿ ಅವರು ನೆದರ್‌ಲ್ಯಾಂಡ್ ಮೂಲದ ಪ್ರಕಾಶನ ಸಂಸ್ಥೆ ಎಲ್ಸ್‌ವಿಯರ್ ಹೊರತರುವ ಅತಿ ಹೆಚ್ಚು ಉಲ್ಲೇಖಿಸಲ್ಪಟ್ಟ ವಿಶ್ವದ ಅಗ್ರ ೨ ಪ್ರತಿಶತ ವಿಜ್ಞಾನಿಗಳ ಪಟ್ಟಿಯ ಮೆಟೀರಿಯಲ್ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ. ಕಾಂಪೋಸಿಟ್ಸ್ ಕ್ಷೇತ್ರದಲ್ಲಿ ಸಂಶೋಧನೆ ನಡೆಸುತ್ತಿರುವ ಡಾ. ಮಧು ಪಿ ಅವರ ೧೧೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಅಂತಾರಾಷ್ಟ್ರೀಯ ಮನ್ನಣೆ ಪಡೆದ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪಾದಕರಾಗಿ ತಮ್ಮ ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ೪ ಪುಸ್ತಕಗಳನ್ನು ರೂಪಿಸಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ.
ಬೇಲೂರಿನಲ್ಲಿ ಸಾಂಕೇತಿಕ ಬಂದ್‌ ಪ್ರತಿಭಟನಾ ಮೆರವಣಿಗೆ
ಪುರಸಭೆ ಗಣೇಶ ವಿಗ್ರಹಕ್ಕೆ ಅಪಚಾರ ಖಂಡಿಸಿ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್ ಯಶಸ್ವಿಯಾಗಿ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆ ಸಂದರ್ಭದಲ್ಲಿ ಶ್ರೀ ಚನ್ನಕೇಶವ ಸ್ವಾಮಿ ದೇಗುಲದಿಂದ ವಿಶೇಷ ಪೂಜೆ ಸಲ್ಲಿಸಿ ಪೂರ್ಣ ಕಳಶದೊಂದಿಗೆ ಗಂಗಾತೀರ್ಥವನ್ನು ಮೆರವಣಿಗೆ ಮೂಲಕ ತರಲಾಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಣಿ ನಿರ್ಮಿಸಿ ರಸ್ತೆ ತಡೆ ನಡೆಸಿ ಹಿಂದೂ ಪರ ಸಂಘಟನೆಗ ಕಾರ್ಯಕರ್ತರೊಂದಿಗೆ ಶಾಸಕ ಎಚ್ ಸುರೇಶ್, ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಪ್ರತಿಭಟನೆ ನಡೆಸಿದರು‌.
ಶಿಕಾರಿಪುರ ದಸರಾ: ಮಾರಿಕಾಂಬಾ ದೇವಿಗೆ ಗಂಗಾಪೂಜೆ
ನಾಡಹಬ್ಬ ದಸರಾಕ್ಕೆ ಪಟ್ಟಣದ ದೊಡ್ಡಕೇರಿಯಲ್ಲಿನ ಶ್ರೀ ಗಿಡ್ಡೇಶ್ವರ ಸ್ವಾಮಿ ಹಾಗೂ ಶಿರಸಿ ಮಾರಿಕಾಂಬಾ ದೇವಿಗೆ ಶಾಸ್ತ್ರೋಕ್ತವಾಗಿ ಗಂಗಾಪೂಜೆ ನೆರವೇರಿಸಿ ಮೆರವಣಿಗೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ವಾಪಸ್ ಕರೆತಂದು ಸಾಂಪ್ರದಾಯಿಕ ವಿಧಿವಿಧಾನದ ಮೂಲಕ ವಿಧ್ಯುಕ್ತವಾಗಿ ಸೋಮವಾರ ಚಾಲನೆ ನೀಡಲಾಯಿತು.
ಜಾತಿ ಭೇದವಿಲ್ಲದ ನಾಡಹಬ್ಬ ವಿಶ್ವಕ್ಕೆ ಮಾದರಿ: ಹೆಬ್ಬಂಡಿ ವೀರಪ್ಪ
ನಾಡಹಬ್ಬ ದಸರಾ ಆಚರಣೆ ಜಾತಿ, ಮತ, ಧರ್ಮ, ಜನಾಂಗ, ಲಿಂಗಭೇದಗಳಿಲ್ಲದೆ ಸರ್ವರನ್ನು ಒಳ್ಳಗೊಳ್ಳುವ ಮೂಲಕ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ ಹೇಳಿದರು.
ಸಿಗಂದೂರು ದೇಗುಲ ರಕ್ಷಣೆ ಸರ್ಕಾರದ ಹೊಣೆ: ಸಚಿವ ಮಧು
ಸಿಗಂದೂರು ದೇವಸ್ಥಾನದ ರಕ್ಷಣೆಯ ಹೊಣೆ ನಮ್ಮದು, ಎಂತಹ ಕಷ್ಟದ ಸಮಯದಲ್ಲೂ ಸಿಗಂದೂರಿನ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿರುತ್ತದೆ ಎಂದು ಶಿಕ್ಷಣ ಸಚಿವ ಮದು ಬಂಗಾರಪ್ಪ ಹೇಳಿದರು.
ಜಿಎಸ್‌ಟಿ ವಿನಾಯ್ತಿ, ಜನರಲ್ಲಿ ಕೊಳ್ಳುವಿಕೆ ಅಧಿಕ
ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿ ಕಡಿಮೆ ಮಾಡಿರುವುದರಿಂದ ಜನರನಲ್ಲಿ ಕೊಳ್ಳುವಿಕೆಯ ಶಕ್ತಿ ಹೆಚ್ಚಾಗಿದೆ. ನಾನು ಸಂಸದ ಆದ ಮಲೆ ಜಿಲ್ಲೆಗೆ 20 ಸಾವಿರ ಕೋಟಿ ರು. ಅನುದಾನ ತಂದಿದ್ದೇನೆ. ಹಿಂದೆ ಸಂಸದರಾದವರು ತೆರಿಗೆಯನ್ನು ಕೇಂದ್ರಕ್ಕೆ ಕಟ್ಟಿಸಿದರೇ ವಿನಾ ವಾಪಾಸು ತರಲಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
  • < previous
  • 1
  • ...
  • 1032
  • 1033
  • 1034
  • 1035
  • 1036
  • 1037
  • 1038
  • 1039
  • 1040
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved