ಪೊಲೀಸರು ಸುಸ್ಥಿರ ಸಮಾಜದ ಆಧಾರ ಸ್ತಂಭ: ನ್ಯಾ. ಬಿ.ವಿ.ರೇಣುಕಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಎಚ್.ರಾಮಚಂದ್ರಯ್ಯ, ರಾಜೇಂದ್ರ ಡಿ.ಎಸ್., ಡಿವೈಎಸ್ಪಿ ಗಿರಿ, ಜಿಲ್ಲೆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಜಿಲ್ಲಾ ಪತ್ರಕರ್ತರ ಪರವಾಗಿ ಹಿರಿಯ ಪತ್ರಕರ್ತ ಲಕ್ಷ್ಮೀಪತಿ ಮಂಗಳವಾರಪೇಟೆ, ಸಾರ್ವಜನಿಕರ ಪರವಾಗಿ ಕೋಟೆ ಸಿದ್ದರಾಮಯ್ಯ ಅವರು ಸೇರಿದಂತೆ ಹಲವರು ಪೊಲೀಸ್ ಸ್ಮಾರಕಕ್ಕೆ ಹೂ ಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲ ತೋಪು ಹಾರಿಸಿ ಪೊಲೀಸ್ ಹುತಾತ್ಮರಿಗೆ ಗೌರವ ಅರ್ಪಿಸಲಾಯಿತು.