ಖಾಸಗಿ ಶಾಲೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಿಸರ್ಕಾರಿ ಶಿಕ್ಷಣ ವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರ ಪರಿಣಾಮ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಯು ಮಿತಿ ಮೀರುತ್ತಿದೆ. ಇಂತಹ ಧನದಾಹಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.