ಬೇಡಿಕೆಗನುಗುಣವಾಗಿ ಹೊಸ ಮೇವಿನ ಬ್ಯಾಂಕ್ ಸ್ಥಾಪನೆ: ಡೀಸಿಕೆರೆಯ ಮಣ್ಣನ್ನು ತೆಗೆಯಲು ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೆರೆಯ ಮಣ್ಣನ್ನು ತೆಗೆಯುವುದರಿಂದ ಮಳೆ ನೀರು ಸಂಗ್ರಹವಾಗದೇ ನೀರೆಲ್ಲ ಇಂಗಿ ಹೋಗುತ್ತದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗುವುದನ್ನು ತಡೆಯಲು ಅವೈಜ್ಞಾನಿಕವಾಗಿ ಮಣ್ಣು ತೆಗೆಯುವುದನ್ನು ನಿಯಂತ್ರಿಸುವ ಸಲುವಾಗಿ ನಿರ್ಬಂಧವನ್ನು ಹೇರಲಾಗಿದೆ.