ರೈತರ, ಬ್ಯಾಂಕಿನ ಶ್ರೇಯೋಭಿವೃದ್ಧಿಯೊಂದೇ ನಮ್ಮ ಆಶಯರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.