ನಾಟಕ ಕಲೆಗೆ ಸರ್ಕಾರದ ಸಹಕಾರ ಅತಿ ಮುಖ್ಯಕನ್ನಡಪ್ರಭ ವಾರ್ತೆ ಮರಿಯಮ್ಮನಹಳ್ಳಿನಾಟಕ ಕಲೆಗೆ ಸರ್ಕಾರದ ಸಹಕಾರ ಅತಿ ಮುಖ್ಯವಾಗಿದ್ದು, ಕಲಾವಿದರು ತಮ್ಮ ಕಲೆ ಪ್ರದರ್ಶಿಸಲು ಸರ್ಕಾರದ ಪ್ರೋತ್ಸಾಹಬೇಕಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗ ಕಲಾವಿದೆ ಡಾ.ಕೆ. ನಾಗರತ್ನಮ್ಮ ಹೇಳಿದರು.ಇಲ್ಲಿನ ದುರ್ಗಾದಾಸ್ ರಂಗಮಂದಿರದಲ್ಲಿ ಬುಧವಾರ ಸಂಜೆ ಅಕ್ಷರ ಜ್ಞಾನ ಕಲಾಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯನಗರ ಸಂಯುಕ್ತಾಶ್ರದಲ್ಲಿ ಸಮೂಹ ನೃತ್ಯ ಮತ್ತು ನಾಟಕ ಸುಗ್ಗಿ ಸಂಭ್ರಮ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದರು.