ಕಾಟಾಚಾರಕ್ಕೆ ಬರಗಾಲ ಘೋಷಣೆ: ಗುತ್ತೇದಾರಪ್ರಸ್ತುತವಾಗಿ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಸೃಷ್ಟಿಯಾಗಿದೆ. ಸರ್ಕಾರ ಈಗಾಗಲೇ ಬರಗಾಲ ಎಂದು ಘೋಷಣೆ ಮಾಡಿ ಒಂದು ತಿಂಗಳು ಕಳೆದರೂ ಈವರೆಗೂ ಪರಿಹಾರ ಕಾರ್ಯವನ್ನು ಆರಂಭಿಸಿಲ್ಲ. ಶೀಘ್ರವಾಗಿ ಸಮೀಕ್ಷೆ ಕಾರ್ಯ ಕೈಗೊಂಡು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.