• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫುಡ್‌ಕೋರ್ಟ್‌ಗಳಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆ ಪರಿಶೀಲನೆ
ಮಹಾರಾಜ ಪಾರ್ಕ್ ಬಳಿ ಇರುವ ಫುಡ್‌ಕೋರ್ಟ್‌ಗೆ ಹಾಸನ ಮಹಾನಗರ ಪಾಲಿಕೆ ಮೇಯರ್ ಹೇಮಲತಾ ಕಮಲ್ ಕುಮಾರ್ ಹಾಗೂ ಪರಿಸರ ಪ್ರಭಾರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕವಿತಾ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಆಹಾರ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಿದರು. ಸ್ವಚ್ಛತೆ ಕಾಪಾಡದೆ ಬೇಕಾಬಿಟ್ಟಿಯಾಗಿ ಕಳಪೆ ಆಹಾರ ಮಾರಾಟ ಮಾಡುವ ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ ಮೇಯರ್‌, ಮುಂದಿನ ದಿನಗಳಲ್ಲಿ ಇಂಥವರ ವ್ಯಾಪಾರದ ಅನುಮತಿ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.
ಆಶ್ರಯಮನೆ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ
ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ೩ ಕೋಟಿ ರು.ಗಳಿಗೂ ಹೆಚ್ಚು ಅವ್ಯವಹಾರದ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾ ಪಂಚಾಯತಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ೨೧೯ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ತಲುಪಬೇಕಿದ್ದ ಸರ್ಕಾರದ ಅನುದಾನವನ್ನು ಅಧಿಕಾರಿಗಳೇ ದುರುಪಯೋಗ ಮಾಡಿಕೊಂಡಿದ್ದಾರೆ. ಯೋಜನೆಯ ಅನುಷ್ಠಾನದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಮಟ್ಟದ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ದೂರಿದರು.
ತೊಗರನಹಳ್ಳಿ ರಸ್ತೆ ಡಾಂಬರೀಕರಣಕ್ಕೆ ಒತ್ತಾಯ
ಈ ರಸ್ತೆಯ ದುರಸ್ತಿಗೆ ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಒತ್ತಾಯಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ತೊಗರನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಕ್ಕೆ ಹೋಗಬೇಕಾಗಿದ್ದು, ದಿನಕ್ಕೆರಡು ಬಾರಿ ಬರುವ ಸಾರಿಗೆ ಬಸ್ ಬಸ್ಸನ್ನೇ ಅವಲಂಭಿಸಿದ್ದಾರೆ. ರಸ್ತೆ ಹದಗಟ್ಟ ಕಾರಣ ಕೆಲವೊಮ್ಮೆ ಈ ಬಸ್ ಬರಲು ಸಾಧ್ಯವಾಗದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುವಂತಾಗಿದೆ. ಇನ್ನು ಇತರೆ ವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.
ಆರೋಗ್ಯಯುತ ಸಮಾಜಕ್ಕೆ ಉತ್ತಮ ಆಹಾರ ಪದ್ಧತಿ ಅವಶ್ಯ
ಮಕ್ಕಳ ಭವಿಷ್ಯವು ಅವರ ಆರೋಗ್ಯದ ಮೇಲೆ ಆಧಾರಿತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಪೋಷಕರು ಪೌಷ್ಠಿಕ ಆಹಾರ ಸೇವನೆಗಿಂತ ಜಂಕ್‌ಫುಡ್‌ಗೆ ಆದ್ಯತೆ ನೀಡುತ್ತಿದ್ದಾರೆ. ಇವು ತಾತ್ಕಾಲಿಕ ತೃಪ್ತಿಯನ್ನು ನೀಡಿದರೂ ದೀರ್ಘಕಾಲದ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ತ್ವರಿತ ಆಹಾರ (ಫಾಸ್ಟ್ ಫುಡ್) ಸೇವನೆಯಿಂದ ಪೌಷ್ಟಿಕಾಂಶದ ಕೊರತೆ ಹೆಚ್ಚುತ್ತಿದ್ದು, ಇದು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಲು, ಮೊಸರು, ತಾಜಾ ಹಣ್ಣು, ಹಸಿರು ತರಕಾರಿಗಳು, ಧಾನ್ಯಗಳು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳಲ್ಲಿ ಮಕ್ಕಳಿಗೆ ಬೇಕಾಗಿರುವ ವಿಟಮಿನ್‌ಗಳು, ಖನಿಜಗಳು ಮತ್ತು ಪ್ರೋಟೀನುಗಳು ದೊರೆಯುತ್ತವೆ. ಪೌಷ್ಠಿಕ ಆಹಾರ ಸೇವನೆ ಮೂಲಕ ಆರೋಗ್ಯವಂತರಾಗಿ ದೇಹದ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಿ ಪೋಷಣೆ ಮಾಡಬೇಕು ಎಂದರು.
ಅರಣ್ಯ ಸಂರಕ್ಷಣೆಯು ಜೀವಿಗಳ ಉಳಿವಿನ ಅವಿಭಾಜ್ಯ ಅಂಗ
ಅರಣ್ಯ ರಕ್ಷಣೆಯ ಪಥದಲ್ಲಿ ಸಾವಿರಾರು ಅರಣ್ಯ ರಕ್ಷಕರು ತಮ್ಮ ಪ್ರಾಣಗಳನ್ನು ಅರ್ಪಿಸಿದ್ದಾರೆ. ಅರಣ್ಯ ರಕ್ಷಕ ಶ್ರೀನಿವಾಸ್ ಅವರನ್ನು ಕಾಡುಗಳ್ಳ ವೀರಪ್ಪನ್ ಹತ್ಯೆ ಮಾಡಿದ ಘಟನೆ ಎಲ್ಲರಿಗೂ ಸ್ಮರಣೀಯ. ಆ ನಂತರದಿಂದ ಅರಣ್ಯ ಅಧಿಕಾರಿಗಳು, ಸಿಬ್ಬಂದಿ ಎದುರಿಸುವ ಅಪಾಯಗಳು, ಸವಾಲುಗಳು ಎಲ್ಲರಿಗೂ ಅರ್ಥವಾಗಿವೆ. ತಮ್ಮ ಪ್ರಾಣವನ್ನು ಪಣಕ್ಕಿಟ್ಟು ವನ್ಯಜೀವಿಗಳನ್ನು ರಕ್ಷಿಸುವ ಕಾರ್ಯದಲ್ಲಿ ಬಲಿಯಾದವರ ತ್ಯಾಗವನ್ನು ಮರೆಯದೆ ಅವರಿಗೆ ನಮನ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ಹೇಳಿದರು. ಅರಣ್ಯ ರಕ್ಷಣೆಯ ಹಾದಿಯಲ್ಲಿ ವೀರ ಮರಣ ಹೊಂದಿದವರ ಕುಟುಂಬಗಳನ್ನೂ ಗೌರವಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳಲ್ಲಿ ಅವರನ್ನು ಆಹ್ವಾನಿಸಿ ಗೌರವ ಸಲ್ಲಿಸಬೇಕು ಹಾಗೂ ಸಮಾಜದ ಧರ್ಮ ಎಂದರು.
ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸಿ
ವಿದ್ಯಾರ್ಥಿನಿಯರು ಈ ವಯಸ್ಸಿನಲ್ಲಿ ಆಕರ್ಷಣೆಗೆ ಒಳಗಾಗುವುದು ಸಹಜ. ಆದರೆ ಅದು ಜೀವನವನ್ನು ಹಾಳು ಮಾಡುವ ಮಾರ್ಗವಾಗಬಾರದು. ಕೆಟ್ಟ ವಿಚಾರಗಳ ಕಡೆ ಮನಸ್ಸು ಕೊಡುವುದನ್ನು ಬಿಟ್ಟು, ಉತ್ತಮ ವಿಚಾರಗಳ ಕಡೆ ಯೋಚಿಸಬೇಕು. ಭವಿಷ್ಯದ ಬಗ್ಗೆ ಗಂಭೀರವಾಗಿ ಆಲೋಚಿಸಿ, ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬೆಳೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಕಿವಿಮಾತು ಹೇಳಿದರು. ಫೇಲ್ ಆದರೆ ಜೀವನ ಮುಗಿಯುವುದಿಲ್ಲ. ಬದಲಿಗೆ ಅದು ಹೊಸ ಅವಕಾಶಕ್ಕೆ ದಾರಿ ತೋರಬಹುದು. ಆದ್ದರಿಂದ ವಿದ್ಯಾರ್ಥಿಗಳು ಮನಸ್ಸು ಗಟ್ಟಿಗೊಳಿಸಿ ಓದುವುದರ ಕಡೆ ಹೆಚ್ಚು ಗಮನ ಕೊಡಬೇಕು. ಏನಾದರೂ ಸಾಧನೆ ಮಾಡುವ ಛಲವನ್ನು ಬೆಳೆಸಿಕೊಂಡರೆ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಸಕ್ಕರೆ ನಾಡು ಮಂಡ್ಯದಲ್ಲೂ ಮೇಲೆದ್ದ ‘ಹಿಂದುತ್ವದ ಅಲೆ’..!
ಸ್ವಾತಂತ್ರ್ಯ ಚಳವಳಿ, ಕಾವೇರಿ ಹೋರಾಟ, ರೈತ ಚಳವಳಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಯೊಳಗೆ ಹಿಂದುತ್ವದ ಅಲೆ ಆಗಾಗ ಮೇಲೇಳುತ್ತಿದೆ. ನೀರಿಗಾಗಿ, ಅನ್ನದಾತರ ಸಮಸ್ಯೆ ವಿರುದ್ಧ ಸಿಡಿದೇಳುತ್ತಿದ್ದ ಸಕ್ಕರೆ ಜಿಲ್ಲೆಯ ಜನರು ಇದೀಗ ಧಾರ್ಮಿಕ ಹೋರಾಟಕ್ಕೆ ಹೆಚ್ಚು ಮನ್ನಣೆ ನೀಡಲಾರಂಭಿಸಿದ್ದಾರೆ. ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಕಂಡುಬಂದ ಜನಸ್ತೋಮ ಈ ಅನುಮಾನಕ್ಕೆ ಪುಷ್ಠಿ ನೀಡುವಂತಿತ್ತು.
ಬೇಲೂರು ತಾಲೂಕಿನಲ್ಲಿ ಕಾಡಾನೆ ಹಾವಳಿ ಹಿನ್ನೆಲೆ ಸಚಿವರಿಗೆ ಶಾಸಕ ಸುರೇಶ್ ಪತ್ರ
ಬೇಲೂರು ತಾಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಹಾವಳಿಯಿಂದ ರೈತರ ಬೆಳೆಗಳು ನಾಶವಾಗುತ್ತಿದ್ದು, ಸಾರ್ವಜನಿಕರು ಭಯದಿಂದ ಜೀವನ ನಡೆಸುತ್ತಿದ್ದಾರೆ. ಬಿಕ್ಕೋಡು ಹೋಬಳಿ ವ್ಯಾಪ್ತಿಯ ಬಿಕ್ಕೋಡು, ಮಾಳೇಗೆರೆ, ಕೊತ್ತನಹಳ್ಳಿ, ಹಾಡಗೆರೆ, ಚಿಕ್ಕೋಲೆ, ಪುರ, ಹೊನ್ನೇಮನೆ, ಗಿಣ್ಣನಮನೆ ಹಾಗೂ ಕೋಗಿಲೆಮನೆ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಡಾನೆ ಗುಂಪುಗಳ ದಾಳಿ ನಡೆಯುತ್ತಿದ್ದು, ರೈತರು ಬೆಳೆದ ಬಾಳೆ, ತೆಂಗು, ಅಡಿಕೆ, ಜೋಳ, ಶುಂಠಿ ಮತ್ತು ಕಾಫಿ ಬೆಳೆಗಳಿಗೆ ಭಾರೀ ಹಾನಿ ಉಂಟಾಗುತ್ತಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
15 ಮಂದಿ ಅರಣ್ಯ ಸಿಬ್ಬಂದಿ ಮೇಲೆ ಮಹಿಳೆ ದೂರು
ಪೊಲೀಸರು ಕಮಲಮ್ಮ ನೀಡಿ ಅರ್ಜಿಯನ್ನು ನೋಂದಾಯಿಸಿಕೊಂಡಿದ್ದು, ವಿಚಾರಣೆಗೆ ಇಟ್ಟಿದ್ದಾರೆ.
ಹೊಟ್ಟೆನೋವೆಂದು ಬಂದಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು
ನುಗ್ಗೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೃತ ಯುವಕನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಕೆ.ಆರ್.ಎಸ್ ಪಕ್ಷದ ನಾಯಕರು ಮತ್ತು ಸಾಮಾಜಿಕ ಹೋರಾಟಗಾರರು ಜಿಲ್ಲಾಧಿಕಾರಿ ಲತಾ ಕುಮಾರಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ. ಇದು ಕೇವಲ ವೈದ್ಯಕೀಯ ದುರಂತವಲ್ಲ, ನಿರ್ಲಕ್ಷ್ಯದ ಮೂಲಕ ನಡೆದ ಕೊಲೆ. ತಕ್ಷಣವೇ ಡಾ. ಪ್ರವೀಣ್ ಮತ್ತು ನರ್ಸ್ ತ್ರಿವೇಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
  • < previous
  • 1
  • ...
  • 1267
  • 1268
  • 1269
  • 1270
  • 1271
  • 1272
  • 1273
  • 1274
  • 1275
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved