• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೦ ಅಡಿ ಉದ್ಧದ ಹೆಬ್ಬಾವು ರಕ್ಷಣೆ
ಚನ್ನಪಟ್ಟಣ: ಚನ್ನಪಟ್ಟಣದ ಕೆರೆಮೇಗಳದೊಡ್ಡಿ ಗ್ರಾಮದ ಶ್ರೀ ಸಾಯಿ ಪ್ಯಾರಾಮೆಡಿಕಲ್ ಇನ್ಸ್‌ಟಿಟ್ಯೂಟ್ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕರಾದ ಸುರೇಶ್, ರಾಮಕೃಷ್ಣ ಮತ್ತು ಸ್ನೇಕ್ ಹೇಮಂತ್ ಸಂರಕ್ಷಣೆ ಮಾಡಿ ಚಿಕ್ಕಮಣ್ಣುಗುಡ್ಡ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ವಾಟದಹೊಸಹಳ್ಳಿ ಕೆರೆ ನೀರು ಯೋಜನೆ ಅವೈಜ್ಞಾನಿಕ
ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟು ವಿಚಾರದಲ್ಲಿ ರೈತರ ಪರವಾಗಿ ನಿಲ್ಲುತ್ತೇನೆ. ವಾಟದಹೊಸಹಳ್ಳಿ ಕೆರೆಯಿಂದ ನಗರ ಪ್ರದೇಶಕ್ಕೆ ನೀರು ತರುವ ಯೋಜನೆಯು ಅವೈಜ್ಞಾನಿಕವಾಗಿದೆ. ಜೊತೆಗೆ ಈ ಯೋಜನೆಯಲ್ಲಿ ಹಲವು ತಾಂತ್ರಿಕ ತೊಂದರೆಗಳಿವೆ. ಕೆರೆಯ ನೀರನ್ನು ನಗರಕ್ಕೆ ಹರಿಸಿದರೆ ಎರಡು ತಿಂಗಳಿನಲ್ಲಿ ಕೆರೆ ಬರಿದಾಗುತ್ತದೆ.
ಪ್ರಯಾಣಿಕರಿಗೆ ಸಹಕರಿಸಿದ ಖಾಸಗಿ ವಾಹನಗಳು
ಅರಕಲಗೂಡು ಮತ್ತು ರಾಮನಾಥಪುರ ಬಸ್ ಘಟಕಗಳಿಂದ ನಿತ್ಯವೂ ನೂರಕ್ಕೂ ಅಧಿಕ ಬಸ್‌ಗಳು ಸಂಚಾರ ಮಾಡುತ್ತಿದ್ದು, ಮುಷ್ಕರ ಹಿನ್ನೆಲೆ ಯಾವುದೇ ಬಸ್ ರಸ್ತೆಗೆ ಇಳಿದಿಲ್ಲ. ಆದರೆ ಸಾರಿಗೆ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಹಾಜರಿದ್ದು ಪೊಲೀಸರ ನೆರವಿನಿಂದ ಖಾಸಗಿ ವಾಹನ ಮೂಲಕ ಹಾಸನ, ಬೆಂಗಳೂರು, ಮೈಸೂರು, ಕೊಣನೂರು, ಹೊಳೆನರಸೀಪುರ ಕಡೆ ಪ್ರಯಾಣಿಕರನ್ನು ಕಳುಹಿಸುತ್ತಿರುವುದು ಕಂಡುಬಂದಿತು. ಆದರೆ ಹಳ್ಳಿ ಕಡೆ ಯಾವುದೇ ವಾಹನ ವ್ಯವಸ್ಥೆ ಮಾಡಿರಲಿಲ್ಲ. ಪ್ರಮುಖವಾಗಿ ಮಹಿಳೆಯರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳಿಗೆ ಗ್ರಾಮೀಣ ಭಾಗದಿಂದ ಬರುವ ಮಕ್ಕಳ ಸಂಖ್ಯೆಯು ಕಡಿಮೆಯಾಗಿತ್ತು. ಶಕ್ತಿ ಯೋಜನೆ ಫಲಾನುಭವಿಗಳಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು ಹೆಚ್ಚಿನ ಪ್ರಮಾಣದಲ್ಲಿ ಮನೆಯಲ್ಲಿಯೇ ಉಳಿದಿದ್ದರು.
ನಿಲ್ದಾಣದಲ್ಲಿ ಸರ್ಕಾರಿ ಬಸ್‌ ಬದಲಿಗೆ ಖಾಸಗಿ ಬಸ್ಸುಗಳು
ರಾತ್ರಿಯಿಂದಲೇ ಕೆಎಸ್ಸಾರ್ಟಿಸಿ ಬಸ್ ಗಳು ನಿಲ್ದಾಣಕ್ಕೆ ಬಾರದೇ ಮಂಗಳವಾರ ನಿಲ್ದಾಣ ಖಾಲಿ ಖಾಲಿ ಇರುವುದು ಕಂಡುಬಂದಿತು. ಈ ವೇಳೆ ಖಾಸಗಿ ವಾಹನದ ಮಾಲೀಕರ ಮತ್ತು ಚಾಲಕರ ಜೊತೆ ಸಾರಿಗೆ ಸಂಸ್ಥೆ ಅಧಿಕಾರಿ, ಆರ್‌.ಟಿ.ಒ. ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಪ್ರಯಾಣಿಕರಿಗೆ ಯಾವ ತೊಂದರೆ ಆಗದಂತೆ ಎಲ್ಲಾ ಖಾಸಗಿ ವಾಹನಗಳು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳ ಸೂಚನೆ ಮೆರೆಗೆ ಖಾಸಗಿ ವಾಹನಗಳು ಸಂಚರಿಸಿದವು. ಸಾರಿಗೆ ಬಸ್ ಇಲ್ಲದೆ ದೂರದ ಊರುಗಳಿಂದ ಬರುವವರು ಅನೇಕರು ಬರಲಿಲ್ಲ. ಈ ಕಾರಣ ಬಸ್ ನಿಲ್ದಾಣದಲ್ಲಿ ಅಷ್ಟೊಂದು ಪ್ರಯಾಣಿಕರು ಕಾಣಿಸಲಿಲ್ಲ.
ಬಸ್‌ ಬಂದ್‌ ಸುದ್ದಿ ತಿಳಿಯದೆ ಬಂದು ಪರಿತಪಿಸಿದ ಜನ
ರಾಜ್ಯದಾದ್ಯಂತ ಸರ್ಕಾರಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆ ಬಸ್‌ಗಳು ಕಂಡುಬರಲಿಲ್ಲ. ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಚಾಲಕರು ಮತ್ತು ನಿರ್ವಾಹಕರು ಘೋಷಿಸಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಬೇಲೂರಿನ ಬಸ್ ನಿಲ್ದಾಣದಲ್ಲಿ ಯಾವುದೇ ಸರ್ಕಾರಿ ಬಸ್ಸುಗಳು ಚಲಿಸಲಿಲ್ಲ. ಸಾರಿಗೆ ಸಂಸ್ಥೆಯ ಚಾಲಕರು ನಿರ್ವಾಹಕರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎಂದು ಮಾಧ್ಯಮಗಳಲ್ಲಿ ಸತತವಾಗಿ ಬಿತ್ತರವಾದರೂ ಪ್ರಯಾಣಿಕರು ಸಾಕಷ್ಟು ಮಂದಿ ಬಸ್ ನಿಲ್ದಾಣಕ್ಕೆ ಜಮಾಯಿಸಿದ್ದರು. ಸಾಕಷ್ಟು ಸಮಯ ಕಾದರೂ ಬಸ್ ಬರದ ಕಾರಣ ಸರ್ಕಾರದ ಮೇಲೆ ಕಿಡಿಕಾರುವ ದೃಶ್ಯ ಸಾಮಾನ್ಯವಾಗಿತ್ತು.
ಕೆಲಸಕ್ಕೆ ತೆರಳಲು ಪರದಾಡಿದ ಗಾರ್ಮೆಂಟ್ಸ್ ಕಾರ್ಮಿಕರು
ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಾರಿಗೆ ನೌಕರರು ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಘೋಷಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ವಿದ್ಯಾರ್ಥಿಗಳು, ಗ್ರಾರ್ಮೆಂಟ್ಸ್ ಹಾಗೂ ಇತರೆ ಕಾರ್ಮಿಕರು, ನೌಕರರು, ರೋಗಿಗಳು, ವಯೋವೃದ್ಧರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದರು. ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳು ಈಡೇರದ ಕಾರಣ, ಮುಷ್ಕರದ ಹಾದಿ ಹಿಡಿದಿದ್ದಾರೆ. ಪಟ್ಟಣದಿಂದ ಹಾಸನಕ್ಕೆ ಸಾರಿಗೆ ದರ ೪೩ ರು. ಇದ್ದು, ಖಾಸಗಿ ವಾಹನಗಳಲ್ಲಿ ೬೦ ರು. ಮತ್ತು ಬೆಂಗಳೂರಿಗೆ ೨೨೫ ರು. ಇದ್ದು ಖಾಸಗಿ ವಾಹನದಲ್ಲಿ ೪೦೦ ರು. ಪಡೆಯುತ್ತಿದ್ದರು.
ಸಮಾಜದ ಒಳಿತಿಗಾಗಿ ಬದುಕು ಸಮರ್ಪಿಸಿದ ಗುರುಬಸವ ಪಟ್ಟದ್ದೇವರು
ಹುಟ್ಟು ಉಚಿತ, ಸಾವು ಖಚಿತವಾಗಿರುವ ಬದುಕಿನಲ್ಲಿ ಭಗವಂತ ಕರುಣಿಸಿರುವ ಜೀವನಕ್ಕೆ ಅರ್ಥ ಬರಬೇಕಾದರೆ ಜೀವನದಲ್ಲಿ ಸಮಾಜೋಪಯೋಗಿ, ಮಾನವೀಯ, ಜಗಮೆಚ್ಚುವ ಮೌಲ್ಯಯುತ ಕಾರ್ಯಗಳನ್ನು ಮಾಡಬೇಕಾಗಿರುವುದು ಅತ್ಯವಶ್ಯ.
ಜನರನ್ನು ಮೊದಲು ಮರ್ಯಾದೆಯಿಂದ ಮಾತನಾಡಿಸಲು ಕಲಿಯಿರಿ
ಎಆರ್‌ಟಿಒ ಸಿಬ್ಬಂದಿ ಸಾರ್ವಜನಿಕರನ್ನು ಗೌರವದಿಂದ ಮಾತನಾಡಿಸಿದರೆ ಅರ್ಧ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಕಚೇರಿಗೆ ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿದ್ದರಿಂದ ಎ.ಆರ್‌.ಟಿ.ಒ ಕಚೇರಿಯ ಸಿಬ್ಬಂದಿ ಹಾಗೂ ಮಧ್ಯವರ್ತಿಗಳು ತಬ್ಬಿಬ್ಬಾದರೆ ಸಾರ್ವಜನಿಕ ವಲಯದಲ್ಲಿ ಸಂತೋಷ ಕಂಡುಬಂದಿತು. ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಶಾಸಕರು ಅವಕಾಶ ನೀಡಿದ್ದರಿಂದ ಹಲವರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿದರೆ ಇನ್ನು ಹಲವರ ಸಮಸ್ಯೆಗಳು ಶೀಘ್ರದಲ್ಲಿಯೆ ಬಗೆಹರಿಯುವ ನಿರೀಕ್ಷೆಯಿದೆ.
ಬೇಲೂರಲ್ಲಿ ಅತ್ಯಾಚಾರದ ಅಪರಾಧಿ ಪ್ರಜ್ವಲ್‌ ಹುಟ್ಟುಹಬ್ಬ ಆಚರಣೆ
ಪ್ರಜ್ವಲ್ ರೇವಣ್ಣ ಅವರ 35ನೇ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಜೆಡಿಎಸ್ ಮುಖಂಡರೊಂದಿಗೆ ರೋಗಿಗಳಿಗೆ ಹಣ್ಣು ಬ್ರೆಡ್ ನೀಡಿ ಮಾತನಾಡಿ, ಅಲ್ಪ ಅವಧಿಯಲ್ಲೇ ರಾಜ್ಯ ನಾಯಕರಾಗಿ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ಕೊಡುತ್ತಿದ್ದರು. ರಸ್ತೆ, ಸಮುದಾಯ ಭವನ, ಸಹಕಾರ ಬ್ಯಾಂಕ್ ಕಟ್ಟಡ, ಇನ್ನೂ ಮುಂತಾದ ಕೆಲಸಗಳಿಗೆ ವಿಶೇಷ ಅನುದಾನ ತಂದು ಅಭಿವೃದ್ಧಿ ಪಡಿಸುವಲ್ಲಿ ಶ್ರಮ ವಹಿಸಿದ್ದರು. ಮಾಜಿ ಪ್ರಾಧಾನಿ ಹಾಲಿ ರಾಜ್ಯಸಭಾ ಸದಸ್ಯರ ಅನುದಾದಲ್ಲಿ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಂದ ಅನುದಾನ ತಂದಿದ್ದರು ಎಂದರು.
ಕೊಪ್ಪ ಪುಂಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ
ಕೊಪ್ಪ, ರೈತರ ಜಮೀನಿನಲ್ಲಿ ಬೆಳೆ ಹಾನಿ ಮಾಡುತ್ತಿರುವ ಆನೆಯನ್ನು ಸೆರೆ ಹಿಡಿಯುವಂತೆ ನಾಗರಿಕ ಹಿತ ರಕ್ಷಣೆ ವೇದಿಕೆ, ಮರಿ ತೊಟ್ಲು, ಹುಲುಗಾರು, ಅಂದಗಾರು, ಕುಂಚೂರು ಭಾಗದ ರೈತರು ಮಂಗಳವಾರ ಕೊಪ್ಪ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟಿಸಿ ಮನವಿ ನೀಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 12823
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved