• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಹಾಸನಾಂಬೆ ಹಿರಿಯಕ್ಕ ಕೆಂಚಾಂಬಿಕೆ ಜಾತ್ರೆ
ಸಪ್ತಮಾತೃಕೆಯರಲ್ಲಿ ಹಿರಿಯರಾದ ಕೆಂಚಾಂಬಿಕೆಯ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲದೆ ಇರುವ ಕಾರಣ, ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಯುವ ಇಲ್ಲಿನ ಜಾತ್ರಾ ಮಹೋತ್ಸವ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದಷ್ಟು ಜನಮನ್ನಣೆ ಪಡೆದಿಲ್ಲ. ಸಪ್ತಮಾತ್ರಕ್ಕೆಯರಾದ ಬ್ರಾಹ್ಮಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ, ಚಾಮುಂಡಿ ಇವರಲ್ಲಿ ಹಿರಿಯರಾದ ಬ್ರಾಹ್ಮಿ ದೇವಿ ತಾಲೂಕಿನ ಹರಿಹಳ್ಳಿಯಲ್ಲೂ ವೈಷ್ಣವಿ, ಮಹೇಶ್ವರಿ, ಕೋಮಾರಿಯರು ಹಾಸನಾಂಬೆ ದೇಗುಲದಲ್ಲೂ ವಾರಾಹಿ, ಇಂದ್ರಾಣಿ, ಚಾಮುಂಡೀಯರು ಹಾಸನದ ದೇವಿಗೆರೆಯಲ್ಲೂ ಪೂಜಿಸಲ್ಪಡುತ್ತಾರೆ.
ಅಸಮರ್ಪಕ ಬಸ್‌ ಖಂಡಿಸಿ ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಬಸ್ ಡಿಪೋ ಇದ್ದರೂ ಸಹ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲ.ಇನ್ನು ಪ್ರತಿನಿತ್ಯ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಉನ್ನತ ವ್ಯಾಸಂಗ ಮಾಡಲು ಸುಮಾರು ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಬೆಳಗಿನ ಸಮಯ ೭ರಿಂದ ೮ ಗಂಟೆ ಸಮಯದವರೆಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ವಿಭಾಗೀಯ ಅಧಿಕಾರಿಗಳನ್ನು ವಿಚಾರಿಸಲು ಹೋದರೆ ನಮಗೆ ಬಸ್ ಕೊರತೆ ಇದೆ. ನಿಮಗೆ ಬೇಕಾದ ಸಮಯದಲ್ಲಿ ಬಸ್‌ಗಳನ್ನು ನೀಡಲು ಅವಕಾಶ ಇಲ್ಲ ಎಂದು ಉಡಾಫೆಯಿಂದ ವರ್ತಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಲಮುರಿ ಗಣಪತಿ ದೇವಾಲಯ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
ಶ್ರೀಲಕ್ಷ್ಮೀ ಬಡಾವಣೆಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ನಿರ್ವಿಘ್ನ ಬಲಮುರಿ ಗಣಪತಿಯನ್ನು ಲೋಕಾರ್ಪಣೆಗೊಳಿಸಲಾಗುವುದು. ಬಡಾವಣೆಯ ನಿವಾಸಿಗಳಿಗೆ ಸುತ್ತಮುತ್ತ ದೇವಸ್ಥಾನ ಇಲ್ಲದೆ ಪಟ್ಟಣಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದನ್ನು ಮನಗಂಡು ಬಡಾವಣೆಯ ಪ್ರಮುಖರು ದೇವಸ್ಥಾನ ನಿರ್ಮಾಣ ಮಾಡಲು ಮುಂದಾದರು. ಪಟ್ಟಣದಲ್ಲೇ ಪ್ರಥಮ ಬಾರಿಗೆ ನಿರ್ವಿಘ್ನ ಗಣಪತಿ ಸ್ಥಾಪಿಸಲಾಗುತ್ತಿದ್ದು, ೪೦ ಅಡಿ ಆಂಜನೇಯಸ್ವಾಮಿ ದೇವಸ್ಥಾನದಿಂದ ಗ್ರಾಮದೇವತೆ ವಳಗೇರಮ್ಮ ದೇವಿಯ ವೈಭವಪೂರ್ಣ ಉತ್ಸವದೊಂದಿಗೆ ಶ್ರೀಲಕ್ಷ್ಮೀ ಬಡಾವಣೆಗೆ ಆಗಮಿಸಲಿದ್ದು ಮಂಗಳವಾದ್ಯ, ಚಂಡಿವಾದ್ಯ, ಕೋಲಾಟ ಮೆರವಣಿಗೆಗೆ ಮೆರುಗು ನೀಡಲಿದೆ.
ಹಿಂಗಾರು ಮಳೆಗೆ ಕಾಫಿ ಹಣ್ಣುಗಳು ಮಣ್ಣುಪಾಲು
ಕಳೆದ ಒಂದು ವರ್ಷದಿಂದ ಮಲೆನಾಡಿನ ಭಾಗದಲ್ಲಿರುವ ಜನತೆ ಸೂರ್ಯ ರಶ್ಮಿಯನ್ನು ಸರಿಯಾಗಿ ನೋಡೇ ಇಲ್ಲ ಎಂದರೆ ತಪ್ಪಾಗಲಾರದು. ಸತತ ಮಳೆಯಿಂದಾಗಿ ಈ ಭಾಗದ ಜನರ ಜೀವನ ಅಸ್ತವ್ಯಸ್ತವಾಗಿದೆ. ಗ್ರಾಮಕ್ಕೆ ತೆರಳುವ ರಸ್ತೆಗಳು ಸಂಪೂರ್ಣ ಕೊಚ್ಚಿಹೋಗಿವೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಟ ಒಂದು ತಿಂಗಳಾದರೂ ಬಿಡುವು ಕೊಡುವಂತೆ ಬೆಳೆಗಾರ ವರುಣನಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ. ಮಳೆಯಿಂದಾಗಿ ತೋಟದೊಳಗಡೆ ಕಾಲಿಟ್ಟರೆ ಜಾರುವಂತಾಗಿದ್ದು ಕೆಸರುಗದ್ದೆಯಾಗಿ ಮಾರ್ಪಟ್ಟಿದೆ.
ರಾಣಿ ಚೆನ್ನಮ್ಮ ಧೈರ್ಯ ಯುವಪೀಳಿಗೆಗೆ ಪ್ರೇರಣೆಯಾಗಲಿ
ಸ್ವಾತಂತ್ರಕ್ಕಾಗಿ ಹೋರಾಡಿದ ಕಿತ್ತೂರ ರಾಣಿ ಚೆನ್ನಮ್ಮರವರ ಅಪ್ರತಿಮ ಧೈರ್ಯ, ಶೌರ್ಯ, ಸಾಹಸ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಪ್ರೊಬೇಷನರಿ ಐಎಎಸ್ ಅಧಿಕಾರಿ ನಾಗೇಂದ್ರ ಬಾಬು ತಿಳಿಸಿದರು.
ಇಂದಿನಿಂದ ಕೆಎಸ್‌ಸಿಎ ಮೈದಾನದಲ್ಲಿ ರಣಜಿ ಪಂದ್ಯ
ನವುಲೆಯ ಕೆಎಸ್‌ಸಿಎ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಗೋವಾ ವಿರುದ್ಧ ನಡೆಯಲಿರುವ ರಣಜಿ ಪಂದ್ಯಕ್ಕೆ ಕರ್ನಾಟಕ ತಂಡ ಸಜ್ಜಾಗಿದ್ದು, ಆಟಗಾರರು ಗುರುವಾರವೂ ಕಠಿಣ ಅಭ್ಯಾಸ ನಡೆಸಿದರು.
ಗೋ ಪೂಜೆಯಿಂದ ಸಕಲ ಇಷ್ಟಾರ್ಥ ಸಿದ್ಧಿ
ಸನಾತನ ಕಾಲದಿಂದಲೂ ಗೋವಿಗೆ ವಿಶೇಷವಾದ ಸ್ಥಾನಮಾನ ಇದ್ದು, ಗೋವಿನಲ್ಲಿ ದೇವತೆಗಳು ವಾಸಿಸಿದ್ದಾರೆ ಎನ್ನುವುದು ಪುರಾಣ ಕಾಲದಿಂದಲೂ ಇರುವ ನಂಬಿಕೆ. ಗೋವಿನ ಪೂಜೆಯು ನಮ್ಮ ಸಂಸ್ಕೃತಿಯ ಭಾಗ. ಗೋಪೂಜೆಯಿಂದ ಸಕಲ ಇಷ್ಟಾರ್ಥ ಸಿದ್ಧಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ನಾಳೆ ಬಂಗಾರಪ್ಪ ಅವರ 93ನೇ ಜನ್ಮ ದಿನೋತ್ಸವ
ಸೊರಬದ ಬಂಗಾರಧಾಮದಲ್ಲಿ ಅ.26ರಂದು ಎಸ್.ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಅ.26ರಂದು ಆಯೋಜಿಸಲಾಗಿದೆ ಎಂದು ವಿಚಾರ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯಕ್ ತಿಳಿಸಿದರು.
ಕಾನೂನು ಬಾಹಿರ ಕೃತ್ಯಗಳನ್ನು ಗಮನಕ್ಕೆ ತನ್ನಿ
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಭಾಗವಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುರಲೆ ಸಿದ್ದೇಶ್ವರ ಸಮುದಾಯ ಭವನದಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶರಾವತಿ ಪಂಪ್ಡ್ ಸ್ಟೋರೇಜ್‌ ಬಿಜೆಪಿಯ ಯೋಜನೆ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪ್ರಸ್ತಾಪ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದು, ಆದರೂ ಕಾಂಗ್ರೆಸ್ ನವರು ಈ ಯೋಜನೆಯಲ್ಲಿ ಹಣ ಹೊಡೆದಿದ್ದಾರೆನ್ನುವ ಕೂಗಾಟ ನಡೆದಿದೆ. ಹಾಗಾದರೆ ಈ ಹಿಂದೆ ತಾವೇ ತಂದ ಯೋಜನೆಗಳಲ್ಲಿ ಬಿಜೆಪಿಯವರು ಹಣ ಹೊಡೆದಿದ್ದರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved