ಕಾವೇರಿ ನದಿಗೆ ಮಹಶಿರ್ ಮೀನು ಮರಿಗಳುಇಲ್ಲಿಯ ರಾಮೇಶ್ವರಸ್ವಾಮಿ ದೇವಸ್ಥಾನದ ಕಾವೇರಿ ನದಿ ವಹ್ನಿ ಪುಕ್ಷರಣಿಯ ಎರಡು ಬದಿಯ ಒಂದು ಪರ್ಲಾಂಗ್ (200 ಮೀಟರ್ ) ನದಿಯನ್ನು ಮತ್ಸ್ಯ ಸಂರಕ್ಷಿತ ಪ್ರದೇಶ ಎಂದು ಮೈಸೂರು ಮೀನುಗಾರಿಕೆ ಇಲಾಖೆ ಆರ್. ಗಣೇಶ್ ತಿಳಿಸಿದರು. ಈ ಕ್ಷೇತ್ರದಲ್ಲಿ ಬರುವ ಭಕ್ತರು ಸಂರಕ್ಷಿತ ಮೀನುಗಳಿಗೆ ಪುರಿ, ಕಡಲೆಕಾಯಿ, ಹಿಂಡಿ ಮುಂತಾದ ಅಹಾರವನ್ನು ಹಾಕಬಹುದು. ಈ ಸ್ಥಳದಲ್ಲಿ ಪ್ಲಾಸ್ಟಿಕ್, ಗೋಣಿಚೀಲ, ಕಸ ಕಡ್ಡಿ ಬಟ್ಟೆ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಹಾಕಬಾರದು. ಈ ನಿಯಮ ಉಲ್ಲಂಘನೆ ಮಾಡಿದರೆ ಶಿಕ್ಷಗೆ ಗುರಿ ಪಡಿಸಲಾಗುವುದು ಎಂದು ಗಣೇಶ್ ತಿಳಿಸಿದರು.