• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಂಬಳ್ಳಿ ಗ್ರಾಮದ ಸಮಸ್ಯೆ ಬಗೆಹರಿಸಲು ಕ್ರಮ
ಕಳೆದ ಮೂರು ದಿನಗಳಿಂದ ತಾಲೂಕಿನ ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮದ ಸಮಸ್ಯೆ ಬಗೆಹರಿಸುವಲ್ಲಿ ಇಲ್ಲಿನ ಪಿಡಿಒ ಉಷಾರಾಣಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಹೋರಾಟ ನಡೆಸುತ್ತಿದ್ದು, ಇಲ್ಲಿನ ಪಂಚಾಯಿತಿ ಕಚೇರಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಗುರುವಾರ ಭೇಟಿ ನೀಡಿ ಸದಸ್ಯರು, ಪಿಡಿಒ ಜೊತೆ ಸಭೆ ನಡೆಸಿದರು
ಕೆರೆಗೆ ನೀರು ತುಂಬಿಸಲು 3 ವರ್ಷ ಬೇಕಾ?
ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಬಣದ ರೈತಸಂಘ ಪಟ್ಟಣದಲ್ಲಿ ಆರಂಭಿಸಿರುವ 4ನೇ ದಿನದ ಅಹೋ ರಾತ್ರಿ ಧರಣಿಗೆ ಮಾಜಿ ಶಾಸಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್‌ ಕುಮಾರ್‌ ಬೆಂಬಲ ಸೂಚಿಸಿದ್ದಾರೆ.
ಜಾತ್ರೆ, ಉತ್ಸವ, ಹಬ್ಬ ಹರಿ ದಿನಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಪ್ರಕಾಶ್ ಗುರೂಜಿ
ಬಂಡಬೋಯನಹಳ್ಳಿ ಗ್ರಾಮದಲ್ಲಿ ಮಹದೇಶ್ವರ ಸ್ವಾಮಿ ದೇವಾಲಯ ಸ್ಥಾಪನೆ ಮಾಡಿ 25 ವರ್ಷಗಳು ರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸ್ವಾಮಿ ರಜತ ಮಹೋತ್ಸವ ವೈಭವದ ಮೆರವಣಿಗೆಯೊಂದಿಗೆ ನಡೆಸಿ ಸಾವಿರಾರು ಭಕ್ತಾದಿಗಳಿಗೆ ಅನ್ನಪ್ರಸಾದ ನೀಡಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ನಡೆಸಲಾಗಿದೆ.
ಕೇಂದ್ರ ಸರ್ಕಾರದ ಯೋಜನೆಗಳಿಲ್ಲದಿದ್ದರೆ ಗ್ರಾಪಂಗಳು ಬಾಗಿಲು ಮುಚ್ಚಬೇಕಿತ್ತು: ಎಚ್.ಟಿ.ಮಂಜು
ಕಾಂಗ್ರೆಸ್ ಸರ್ಕಾರ ಬಂದು ಸುಮಾರು ಎರಡೂವರೆ ವರ್ಷಗಳು ಕಳೆದಿದೆ. ಒಂದೇ ಒಂದು ಆಶ್ರಯ ಮನೆ ಮಂಜೂರು ಮಾಡಿಲ್ಲ. ಗ್ರಾಪಂಗಳಿಗೆ ಒಂದೇ ಒಂದು ರು. ಅನುದಾನ ನೀಡಿಲ್ಲ. ಸದಸ್ಯರಿಗೆ ಗೌರವಧನ ನೀಡಿ ಕಾಲ ಕಳೆಯುತ್ತಿದೆ. ಯಾವುದೇ ಅನುದಾನ ನೀಡದೆ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ.
ಶಿಷ್ಟಾಚಾರದಲ್ಲಿ ಬರುವವರಿಂದ ಸಾಮಾನ್ಯ ಜನರಿಗೆ ತೊಂದರೆ
ಮಾಧ್ಯಮಗಳಲ್ಲಿ ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ಸಾಮಾನ್ಯ ಜನರು ಧರ್ಮದರ್ಶನದಲ್ಲೇ ನಿಂತು ಸುಲಭವಾಗಿ ದರ್ಶನ ಪಡೆಯಬಹುದು. ಇನ್ನು 1 ಸಾವಿರ ರು. ಹಾಗೂ 300 ರು.ಗಳ ಟಿಕೆಟ್‌ನಲ್ಲಿ ಹೋದವರು ಹೆಚ್ಚೆಂದರೆ ಒಂದು ಗಂಟೆಯಲ್ಲಿ ದರ್ಶನ ಪಡೆಯಬಹುದು ಎಂದೆಲ್ಲಾ ವರದಿ ಬಿತ್ತರಿದ್ದರಿಂದ ತಂಡೋಪತಂಡವಾಗಿ ಭಕ್ತರು ಬಂದಿದ್ದರಿಂದ ಗುರುವಾರ ಒಂದೇ ದಿನ ಲಕ್ಷಾಂತರ ಜನರು ಅವಕ್ಕಾದರು. ಇದರಿಂದ 1 ಸಾವಿರ ರುಪಾಯಿ ಟಿಕೆಟ್‌ನ ಸಾಲು ಬಿಎಂ ರಸ್ತೆಗೆ ಬಂದಿದ್ದರೆ, 300 ರು. ಗಳ ಸಾಲು ಹೊಸಲೈನ್‌ ರಸ್ತೆ ದಾಟಿ ಹಳೆ ಮಟನ್‌ ಮಾರ್ಕೆಟ್‌ ನಲ್ಲಿತ್ತು. ಇನ್ನು ಧರ್ಮದರ್ಶನದ ಸಾಲಂತೂ ಕೆಇಬಿ ಕಚೇರಿ ಬಿಟ್ಟು ಮುಂದಿತ್ತು. ಹಾಗಾಗಿ ಗುರುವಾರ ಭಕ್ತರು ದೇವಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲಬೇಕಾಯಿತು.
ಪ್ರಕೃತಿ ವಿಕಾಸ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
ಧರ್ಮಸ್ಥಳ ಹೇಮಾವತಿ ಅಮ್ಮನವರ ಆಶಯದಂತೆ ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳೆಯರ ಕುಂದುಕೊರತೆಗಳನ್ನು ಕಂಡುಹಿಡಿದು ಅವರಿಗೆ ಪ್ರೋತ್ಸಾಹಿಸಿ ಪ್ರತಿಯೊಂದು ಹಂತದಲ್ಲೂ ಆರ್ಥಿಕವಾಗಿ ಸದೃಢವಾಗಿ ಮಾಡುವಂತೆ ಹಲವು ಕಾರ್ಯಕ್ರಮಗಳನ್ನು ಮಾಡುತಿದ್ದೇವೆ. ಅದರಲ್ಲಿ ಆರೋಗ್ಯ ಶಿಬಿರವು ಒಂದಾಗಿರುತ್ತದೆ.
ಹಾಸನಾಂಬೆ ದೇವಾಲಯದ ಮುಂದೆ ವಿಶ್ವ ಹಿಂದೂ ಪರಿಷದ್ ಪ್ರತಿಭಟನೆ
ಹಾಸನಾಂಬೆ ದೇವಾಲಯದಲ್ಲಿ ಆಡಳಿತ ವರ್ಗದ ನಡವಳಿಕೆ ಖಂಡಿಸಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಬಾಗಿಲು ತೆಗೆದು ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಗುರುವಾರ ದೇವಸ್ಥಾನದ ಬ್ಯಾರಿಕೇಡ್ ಮುಂದೆ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪುರೋಹಿತರ ಮೇಲೆ, ದೇವಸ್ಥಾನದ ಒಳಗಿನವರ ಮೇಲೆ ದಬ್ಬಾಳಿಕೆ ಎಸಗುತ್ತಾರೆ. ಈ ದೇವಸ್ಥಾನಕ್ಕಾಗಿ ಜೀವ ಮುಡುಪಾಗಿಟ್ಟುರುವವರು ಅನೇಕರು ಇದ್ದಾರೆ. ಇದನ್ನು ಪ್ರಶ್ನೆ ಮಾಡಲು ಹೋದರೇ ಬಾಯಿಗೆ ಬಂದಂತೆ ಕೆಟ್ಟ ಮಾತನಾಡುತ್ತಾರೆ. ಹಾಸನಾಂಬೆ ತಾಯಿ ದರ್ಶನ ನಂತರ ಶ್ರೀ ಸಿದ್ದೇಶ್ವರ ತಾಯಿ ದರ್ಶನ ಮಾಡಿದರೇ ಜಾಮ್ ಆಗುತ್ತದೆಯಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮವಾಗಿ ಸಾಗಿಸುತ್ತಿದ್ದ ದಿಮ್ಮಿಗಳ ವಶ
ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಅರಣ್ಯ ಇಲಾಖೆಯವರು ವಾಹನ ಸಮೇತ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಅನೇಮಹಲ್ ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ.
ಮದ್ಯವ್ಯಸನದಿಂದ ದೂರಾದರೆ ಗೌರವಯುತ ಬದುಕು
ಮದ್ಯವ್ಯಸನದಿಂದ ಬಹುತೇಕ ಕುಟುಂಬಗಳ ನೆಮ್ಮದಿ ಹಾಳಾಗಿದೆ. ಉತ್ತಮ ಸಂಸಾರದ ಬದುಕು ಕಟ್ಟಿಕೊಳ್ಳಲು ಕುಡಿತದಂತಹ ಚಟದಿಂದ ದೂರ ಇರಬೇಕಾಗಿರುವುದು ಅನಿವಾರ್ಯವಾಗಿದೆ. ಗೌರವಯುತವಾಗಿ ಬದುಕನ್ನು ಕಟ್ಟಿಕೊಳ್ಳಿ ಎಂದು ಧರ್ಮಸ್ಥಳದ ಸಮಿತಿಯ ಶಿಬಿರಾಧಿಕಾರಿ ವಿದ್ಯಾಧರ್ ತಿಳಿಸಿದರು. ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಹುಟ್ಟುಹಾಕಿ ಈಗಾಗಲೇ 1993 ಮದ್ಯವರ್ಜನ ಶಿಬಿರ ಹಮ್ಮಿಕೊಂಡು ಮದ್ಯವರ್ಜನ ವ್ಯಸನ ಮುಕ್ತಿ ಮಾಡಲು ಲಕ್ಷಾಂತರ ಅಧಿಕ ಜನರಿಗೆ ಅನೂಕೂಲವಾಗಿದೆ ಎಂದು ಸ್ಮರಿಸಿದರು.
ದಮ್ಮನಿಂಗಲದಲ್ಲಿ ಜೀರ್ಣೋದ್ಧಾರಗೊಂಡ ದೇಗುಲಗಳ ಉದ್ಘಾಟನೆ
ಶ್ರವಣಬೆಳಗೊಳ ಹೋಬಳಿಯ ದಮ್ಮನಿಂಗಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಅಮೃತ ಲಿಂಗೇಶ್ವರ ಸ್ವಾಮಿ ಮತ್ತು ಕಾಲ ಭೈರವೇಶ್ವರರ ಜೀರ್ಣೋದ್ಧಾರಗೊಂಡ ದೇವಾಲಯಗಳ ಲೋಕಾರ್ಪಣೆ, ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು. ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ದೇವಾಲಯ ನಿರ್ಮಾಣಕ್ಕೆ ಅರ್ಧ ಎಕರೆ ಸ್ಥಳವನ್ನು ನೀಡಿರುವ ಗಂಗಾಧರ್‌ ಕುಟುಂಬದವರನ್ನು ಪ್ರಶಂಸಿದರು. ದೇವಾಲಯದ ಒಳ ಭಾಗದಲ್ಲಿ ಕಾಂಕ್ರಿಟ್ ಹಾಕಿಸಿ, ೧೦ ಲಕ್ಷ ರು. ಅನುದಾನದಲ್ಲಿ ಸಭಾಂಗಣ ನಿರ್ಮಿಸಲಾಗುವುದು ಎಂದರು. ಶಾಸಕರು ದಾನಿಗಳನ್ನು ಸನ್ಮಾನಿಸಿದರು.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved