ಆಪರೇಷನ್ ಸಿಂದೂರದಲ್ಲಿ ಮಡಿದವರಿಗೆ ಶ್ರದ್ಧಾಂಜಲಿಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು "ಆಪರೇಷನ್ ಸಿಂದೂರ " ಪ್ರಾರಂಭಿಸಿ ಪಾಕಿಸ್ತಾನದೊಳಗೆ ಆಳವಾಗಿ ದಾಳಿ ನಡೆಸಿ, ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಗುಂಪುಗಳಿಗೆ ಸೇರಿದ ಒಂಭತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಿತು. ನೂರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮೂಲಕ ಮತ್ತು ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ರವಾನಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರಿಗೆ ಮುಗ್ಧ ಹಿಂದೂಗಳು ಚೆಲ್ಲುವ ಪ್ರತಿ ರಕ್ತದ ಹನಿಗೂ ನ್ಯಾಯ ಒದಗಿಸಿದೆ ಎಂದರು.