ಪುರಸಭಾ ತೆರಿಗೆಯಿಂದ ವಾರ್ಡ್ಗಳ ಅಭಿವೃದ್ಧಿಹಲವು ವರ್ಷಗಳಿಂದ ನಾಗಸಮುದ್ರ ರಸ್ತೆಯಿಂದ ರಾಘವೇಂದ್ರ ಕನ್ವೆಷನ್ ಹಾಲ್ವರೆಗೆ ಚರಂಡಿ ಹಾಗೂ ಡಾಂಬರ್ ರಸ್ತೆ ನಿರ್ಮಾಣಕ್ಕೆ ವಾರ್ಡಿನ ಸಾರ್ವಜನಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇದನ್ನು ನೀಗಿಸಲು ಸದಸ್ಯರು ಮುಂದಾಗಿದ್ದು ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಸರ್ಕಾರದಿಂದ ಅನುದಾನ ಕಡಿಮೆಯಾಗಿರುವುದರಿಂದ ಪುರಸಭಾ ತೆರಿಗೆಯಲ್ಲಿ ವಾರ್ಡ್ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ವಾರ್ಡಿನಲ್ಲಿ ಬೀದಿದೀಪಗಳ ಸಮಸ್ಯೆ ಇದೆ, ಇದನ್ನು ನೀಗಿಸಲಾಗುತ್ತಿದೆ, ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ವಾರ್ಡಿನಲ್ಲಿ ಕಸ ರಸ್ತೆ ಬದಿ ಬೀಳದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.