ಕಾಶ್ಮಿರದಲ್ಲಿ ಹತ್ಯೆಗೀಡಾದವರ ಕುಟುಂಬಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದಿಂದ ತಲಾ ₹2 ಲಕ್ಷ ಘೋಷಣೆಶೃಂಗೇರಿ, ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಹತ್ಯೆಗೀಡಾದ ಕುಟುಂಬಗಳಿಗೆ ಶೃಂಗೇರಿ ಶಾರದಾ ಪೀಠದಿಂದ ಪ್ರತೀ ಕುಟುಂಬಕ್ಕೆ ತಲಾ ₹2 ಲಕ್ಷ ದಂತೆ ₹52 ಲಕ್ಷ ಪರಿಹಾರ ಘೋಷಿಸಿದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಈ ಘಟನೆ ಖಂಡಿಸಿ ತಮ್ಮ ಸಂದೇಶದ ಮೂಲಕ ಹತ್ಯೆಗೀಡಾದ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹಾಗೂ ಧೈರ್ಯ ತಿಳಿಸಿದ್ದಾರೆ.