ನಡವತ್ತಿಯಲ್ಲಿ ದ್ರೌಪದಾಂಬ ದೇವಿಯ ಕರಗ ಮಹೋತ್ಸವ ಸಂಪನ್ನಅರಿಸಿಣ ಬಣ್ಣದ ಸೀರೆ ಉಟ್ಟು, ಬಳೆ ತೊಟ್ಟು, ದ್ರೌಪದಿಯಂತೆ ಸರ್ವಾಲಂಕಾರ ಭೂಷಿತರಾಗಿದ್ದ ಕರಗದ ಪೂಜಾರಿ ವಸಂತ್ ಕುಮಾರ್ ಅವರು, 17ನೇ ಬಾರಿಗೆ ಹೂವಿನ ಕರಗ ಹೊತ್ತು ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳು ಮೊಳಗಿದವು.