• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಮಂಜುಗೆ ಶ್ರೀಧರ ಗೌಡ ಸವಾಲು
ಅರಕಲಗೂಡು ಪಟ್ಟಣದ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ''''ಮಾಸ್ಟರ್ ಪ್ಲಾನ್-2041'''' ದುರ್ಬಳಕೆ ಮಾಡಿರುವ ಬಗ್ಗೆ ದಾಖಲೆಯನ್ನು ಶಾಸಕರು ಬಿಡುಗಡೆ ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ. ಇಲ್ಲವಾದರೆ ವಸೂಲಿ ಕುಲ ಕಸುಬು ಮುಂದುವರಿಸಿಕೊಂಡು ತಾಲೂಕಿನಲ್ಲಿ ಕೈಗಾರಿಕೋದ್ಯಮಿಗಳು ಕಾಲಿಡದಂತೆ ಮಾಡಿ ನಿರುದ್ಯೋಗ ಸೃಷ್ಟಿಗೆ ಕಾರಣವಾದ ಶಾಸಕರು ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್‌ ಗೌಡ ಸವಾಲು ಹಾಕಿದರು.
ಮಗುವಿಗೆ ತಾಯಿಯ ಎದೆಹಾಲು ಅತ್ಯಗತ್ಯ
ಚಿಪ್ಪಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಗು ಹುಟ್ಟಿನಿಂದ ಆರು ತಿಂಗಳವರೆಗೆ ಯಾವುದೇ ಮೇಲಾಹಾರವನ್ನು ನೀಡದೆ ತಾಯಿ ಎದೆ ಹಾಲನ್ನು ಮಾತ್ರ ಉಣಿಸಬೇಕು. ಅಂಗನವಾಡಿ ವ್ಯಾಪ್ತಿಗೆ ಬರುವ ಫಲಾನುಭವಿಗಳಿಗೆ ಅಂಗವಾಡಿ ಕಾರ್ಯಕರ್ತೆಯರು ಇಲಾಖೆಯಿಂದ ಸಿಗುವ ಎಲ್ಲಾ ರೀತಿಯ ಸವಲತ್ತು ಹಾಗೂ ಯೋಜನೆಗಳನ್ನು ಫಲಾನುಭವಿಗಳಿಗೆ ಇಲಾಖೆಯಿಂದ ನಿಗದಿಪಡಿಸಿದ ಸಮಯಕ್ಕೆ ತಲುಪಿಸಬೇಕೆಂದು ತಿಳಿಸಿದರು. ಮಹಿಳೆಯರ ಆರೋಗ್ಯ, ಸ್ವಚ್ಛತೆ, ಗರ್ಭಿಣಿ, ಬಾಣಂತಿಯರ ಪೌಷ್ಠಿಕ ಆಹಾರದ ಬಗ್ಗೆ ತಿಳಿವಳಿಕೆ ನೀಡಿದರು.
ಮದ್ಯವ್ಯಸನಿಗಳು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ
ಮದ್ಯವ್ಯಸನಿಗಳು ತಮ್ಮ ಹೆಂಡತಿ ಮಕ್ಕಳಿರುವ ಫೋಟೋವನ್ನು ತಮ್ಮ ಮುಂದಿಟ್ಟುಕೊಂಡು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ ಕಿವಿಮಾತು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್‌ ಫಾತಿಮರವರು, ಅತಿಯಾಗಿ ಮದ್ಯಪಾನ ಮಾಡುವುದರಿಂದ ಮಾನಸಿಕ, ದೈಹಿಕವಾಗಿ ಕುಗ್ಗಿ ಹೋಗುತ್ತಾರೆ. ಲಿವರ್‌, ಕಿಡ್ನಿ ತೊಂದರೆ ಸೇರಿದಂತೆ ರಕ್ತಹೀನತೆಯಿಂದ ದೇಹದ ಎಲ್ಲ ಭಾಗಗಳು ನಾಶವಾಗಿ ಖಿನ್ನತೆ ಉಂಟಾಗಿ ದಿನ ಕಳೆದಂತೆ ಮರಣ ಸಂಭವಿಸುತ್ತದೆ. ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಲು ವೈದ್ಯರ ತಂಡವನ್ನು ರಚಿಸಲಾಗಿದ್ದು ಉಚಿತವಾಗಿ ಚಿಕಿತ್ಸೆ ನೆರವು ನೀಡಲಾಗುವುದು ಎಂದರು.
ವಿದ್ಯಾರ್ಥಿ ದಿಸೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಪಠ್ಯದ ಜತೆ ಸಂಗೀತ, ಸಾಹಿತ್ಯ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಬಹುದು. ನವೋದಯ ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಅಧ್ಯಕ್ಷ ಸಿ.ಜೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಇಷ್ಟಪಟ್ಟು ಓದಬೇಕು. ಶಿಸ್ತುಬದ್ಧ ಜೀವನ ಭವಿಷ್ಯದ ಜೀವನಕ್ಕೆ ಸೋಪಾನ ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಕಾರ್ಯದರ್ಶಿ ಕೆ. ಪಿ. ಶರತ್, ಒ.ಆರ್‌. ರಂಗೇಗೌಡ, ನಿರ್ದೇಶಕರಾದ ಆನಂದ್ ಕಾಳೇನಹಳ್ಳಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹೊಳೆನರಸೀಪುರದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಡಗರ
ವರಮಹಾಲಕ್ಷ್ಮೀ ಹಬ್ಬದ ಮುನ್ನಾ ದಿನವಾದ ಗುರುವಾರ ಪಟ್ಟಣದ ಪೇಟೆ ಬೀದಿ, ವಾಣಿಜ್ಯ ಸಂಕೀರ್ಣಗಳು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಅಂಗಡಿಗಳಲ್ಲಿ ಬಲು ಜೋರಾಗಿತ್ತು ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ಜರುಗುತ್ತಿತ್ತು. ಪೇಟೆಯ ಕಿರಿದಾದ ಮುಖ್ಯ ರಸ್ತೆಯಲ್ಲಿ ತಳ್ಳುಗಾಡಿಗಳಲ್ಲಿ ಹಣ್ಣು, ತರಕಾರಿ ಮಾರಾಟ ಮಾಡುವ ವರ್ತಕರಿಂದಾಗಿ ಅಂಗಡಿ ಮುಂಗಟ್ಟುಗಳಿಗೆ ತೆರಳಲು ಜನರು ಮತ್ತು ತಿರುಗಾಡಲು ದ್ವಿಚಕ್ರ ಹಾಗೂ ಆಟೋ ರಿಕ್ಷಾ ಚಾಲಕರು ಸುಗಮ ಸಂಚಾರದ ತೊಂದರೆಯಿಂದಾಗಿ ವ್ಯಾಪಾರ ಕುಂಠಿತಗೊಂಡಿದೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದರು.
ಬೆಲೆ ಏರಿಕೆ ನಡುವೆ ವರಮಹಾಲಕ್ಷ್ಮೀ ವ್ರತ
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ತರಹದ ವಸ್ತುಗಳ ಬೆಲೆ ಹೆಚ್ಚಿದ್ದರು ಜನರು ಹಬ್ಬದ ಸಿದ್ಧತೆಯನ್ನು ಭರದಲ್ಲೆ ಕೈಕೊಂಡಿದ್ದು, ಹೂವು, ಹಣ್ಣು, ತರಕಾರಿ ಬೆಲೆ ನಿತ್ಯಕ್ಕಿಂತ ಎರಡರಷ್ಟು ಹೆಚ್ಚಿದ್ದರೆ ಸೊಪ್ಪಿನ ಬೆಲೆ ಇಳಿಕೆಗೊಂಡಿದ್ದು ಹಬ್ಬದ ವಿಶೇಷವಾಗಿತ್ತು. ಸುಲಿಯುವ ಕಾಳು ಕೆ.ಜಿಗೆ ೧೫೦ ರುಗಳಾಗಿದ್ದರೆ, ಬಿನ್ಸ್, ಕ್ಯಾರೆಟ್ ಬೆಲೆ ನೂರುಗಳಾಗಿತ್ತು. ಆದರೆ, ಕೊತ್ತಂಬರಿ, ಹರಿವೆ ಸೇರಿದಂತೆ ಎಲ್ಲಾ ಸೊಪ್ಪುಗಳ ಬೆಲೆ ನಾಲ್ಕು ಕಟ್ಟಿಗೆ ೧೦ ರು.ಗಳಿಗೆ ಕುಸಿದಿತ್ತು. ಮಲ್ಲಿಗೆ ಹೂವು ಮಾರೊಂದಕ್ಕೆ ೧೨೦ ರು. ಗಳಿಂದ ೧೫೦ ರು. ಗಳಾಗಿದ್ದರೆ ಸೇವಂತಿಗೆ ಹೂವು ಸಹ ೧೦೦ ರು. ಗಳಿಂದ ೧೫೦ ರು. ಗಳಲ್ಲಿ ಮಾರಾಟವಾದವು.
ಎರಡು ವರ್ಷವರೆಗೆ ಶಿಶುವಿಗೆ ತಪ್ಪದೇ ಎದೆಹಾಲುಣಿಸಿ
ತಾಯಿಯ ಎದೆಹಾಲು ಮಕ್ಕಳಿಗೆ ಅಮೃತವಾಗಿದ್ದು, ಹುಟ್ಟಿದ ಮಕ್ಕಳಿಗೆ ತಾಯಿಯ ಎದೆಹಾಲು ಹೊರತುಪಡಿಸಿ ಬೇರೆ ಯಾವುದನ್ನೂ ನೀಡಬಾರದು ಎಂದು ಆರೋಗ್ಯ ಕೇಂದ್ರದ ವೈದ್ಯರಾದ ಡಾ.ನಳಿನಾ ಹೇಳಿದ್ದಾರೆ.
ದಿನಗೂಲಿ ನೌಕರರಿಗೆ ಸೌಲಭ್ಯಕ್ಕಾಗಿ ಸಚಿವರೊಂದಿಗೆ ಚರ್ಚೆ: ದೇವೇಂದ್ರಪ್ಪ ಭರವಸೆ
ಜಗಳೂರು ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ನೌಕರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.
ಧರ್ಮಸ್ಥಳ ಕ್ಷೇತ್ರವನ್ನು ಅಪವಿತ್ರ ಮಾಡಬೇಡಿ
ಧರ್ಮಸ್ಥಳ ಕ್ಷೇತ್ರ ನಮ್ಮ ರಾಜ್ಯದಲ್ಲಿ ಉತ್ತರ ಕಾಶಿಯ ಹಾಗೇ ಭಾರಿ ಪ್ರಸಿದ್ಧ ವಾದ ಧಾರ್ಮಿಕ ಕ್ಷೇತ್ರ, ಆ ಕ್ಷೇತ್ರವನ್ನು ಯಾರೂ ಅಪವಿತ್ರ ಮಾಡಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದರು.
ಮೋದಿಯನ್ನು ಹೊಗಳಿದವರು ಮಾತ್ರ ಜಾಣರೇ?
ಎಸ್.ಎನ್.ಚನ್ನಬಸಪ್ಪ ಅವರು ತಾವು ಶಾಸಕರು ಎಂಬುದನ್ನು ಮರೆತು ಬಾಯಿಗೆ ಬಂದ್ದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಟೀಕಿಸಿದರು.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 13344
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved