ಸಾಮೂಹಿಕ ಆಚರಣೆಗಳು ಸಾಮರಸ್ಯದ ಜೀವನಕ್ಕೆ ವೇದಿಕೆಗುಂಡನಬೆಳ್ಳೂರು ಗ್ರಾಮದಲ್ಲಿ ಪುನರುಜ್ಜೀವನಗೊಂಡ ಶ್ರೀ ಮಲ್ಲೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಮತ್ತು ಜಂಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಶೀರ್ವಚನ ನೀಡುತ್ತಾ, ಮನುಷ್ಯ ತಮ್ಮಲ್ಲಿರುವ ದ್ವೇಷ, ಅಸೂಯೆಗಳನ್ನು ಬದಿಗೊತ್ತಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸಿಕೊಳ್ಳಬೇಕು. ಧರ್ಮ ಮಾರ್ಗದಲ್ಲಿ ಸಾಗಿದರೆ ಮನುಷ್ಯನಿಗೆ ಸಹಜವಾಗಿಯೇ ಶಾಂತಿ, ನೆಮ್ಮದಿ ದೊರಕುತ್ತದೆ. ಗ್ರಾಮಗಳಲ್ಲಿರುವ ದೇವಸ್ಥಾನಗಳು ಮನುಷ್ಯರಿಗೆ ಶಾಂತಿ- ನೆಮ್ಮದಿ ನೀಡುವ ಧಾರ್ಮಿಕ ಕೇಂದ್ರಗಳಾಗಿವೆ ಎಂದರು.